Home / ಕವನ / ಕವಿತೆ / ಶ್ರೀಕೃಷ್ಣನ ಕೊಳಲಿಗೆ

ಶ್ರೀಕೃಷ್ಣನ ಕೊಳಲಿಗೆ

ಏನು ಮುನ್ನಿನ ಜನ್ಮದಲಿ ಪುಣ್ಯಗೈದಿರುವೆ
ಇಂಚರದ ಕೊಳಲೆ ನೀನು ?
ಗಾನಲೋಲನ ಕೈಯ ಸೇರಿ ಕುಣಿದಾಡಿಸಿದೆ
ಕಮಲೋದ್ಧವಾಂಡವನ್ನು!
ಆರೋಹಣ ಸ್ವರದಿ ಸುಪ್ತಿಯಲ್ಲಿಹ ಜಗವ
ಜಾಗೃತಿಯನೊಂದಿಸಿದೆಯೊ !
ಅವರೋಹಣ ಸ್ವರದಿ ಎಚ್ಚತ್ತ ಜಗದ ಬಗೆ-
ಯನ್ನು ನಿನ್ನೆಡೆಗೆಳೆದೆಯೊ!
ನಂದನಂದನನ ನನ್ನಿಯ ಹಾಡನೊಡಗೊಂಡ
ಚೆಂದವಹ ನಿನ್ನ ದನಿಯು-
ಕಂದರನು ಒಳುದಾರಿಯಲ್ಲಿ ನಡೆಯಿಸುವ ಹೆ-
ತ್ತಮ್ಮನಿನಿದಾದ ನುಡಿಯು!
ಗೋಪಾಲಬಾಲಕರು ತಾಪಕೊಳಗಾಗದೊಲು
ಶ್ರೀಕೃಷ್ಣನೇನು ಗೈದ?
ನೀ ಪೇಳು, ನಿನ್ನ ಮಧುರವದಿಂದಲವನಾವ
ಮೋಹಮಂತ್ರವನೂದಿದ?
ನಲ್ಲೆಯರ ಮುಂದೆ ಗೋವಿಂದನಾಜ್ಞೆಯಲಿ ನೀ-
ನಾವ ಪದ ಪಳ್ದೆ ? ಎಂತು ?
ಗೊಲ್ಲಹೆಂಗಳೆಯರಿಗೆ ಸಂಸಾರದನುಭವವು
ಬೆಲ್ಲದಂತಾದುದೆಂತು ?
ಸತ್ಯಕ್ಕೆ ಸಹಕಾರಿ ಮಿಥ್ಯಕ್ಕೆ ಕಡುವೈರಿ
ಸಜ್ಜನರ ದುಃಖಹಾರಿ-
ಮತ್ತೆ ನಿನ್ನಾ ಗಾನವಾಗಿದ್ದಿತೈ ಕುಜನ-
ವಂಶಕ್ಕೆ ಹಿರಿಯ ಮಾರಿ!
ಸಂತಸದ ಸಿರಿಮನೆಯು ಸಂತೃಪ್ತಿಯರಮನೆಯು
ಜ್ಞಾನಪೀಯೂಷಝರಿಯು,
ಶಾಂತಿಯಾಗರವು ನಿಶ್ಚಿಂತೆಯಾ ತವರೂರು
ನಿನ್ನ ಮಂಜುಲಲಹರಿಯು!
ನಿನ್ನ ಸ್ವರ ಕೇಳದಿರೆ ಚೆನ್ನ ಕಿಟ್ಟನ ಮರೆತು
ಬನ್ನಗೊಂಡಿಹುದು ಬುವಿಯು;
ಧನ್ಯ ವೇಣುವೆ, ನಮಗೆ ಕೇಳದಿಹುದೇಕೀಗ.
ನಿನ್ನ ಮಾಧುರ ಮುರಲಿಯು?
ದ್ವಾಪರದಿ ನುಡಿಸಿದಾ ಗೋಪಾಲ ನಿನ್ನನ್ನ-
ದೇಕೀಗ ನುಡಿಸದಿಹನು?
ತಾಪ ಕೂಪದೊಳುರುಳಿರುವ ಜಗದ ಜನರನ್ನು
ತಣಿಸದೇತಕೆ ತಡೆದನು?

ಇದೇ ಭಾವಸಮಾಧಿಯೊಳಿರುವಂದು, ಒಳಗಿವಿಯಲೊಂದು

ಕೊಳಲುಲಿಯ ಇನಿದನಿ ಮಿಡಿದು ಎದೆಯನರಳಿಸಿತು:

ನುಡಿಸದೇಕಿಹ? ದೇವ ಜಗದಾದಿಯಿಂದೆ ಎಡೆ-
ಬಿಡದೆ ನುಡಿಸುತಲಿರುವನು;

ನುಡಿಸುವನು ಜಗವು ಮುಗಿವಾ ವರೆಗೆ ಮುಂದೆಯೂ
ಎಂದಿನಂದದಲಾತನು.

ಭೋಗಮಲದಲಿ ಮುಚ್ಚಿ ಹೋಗಿರುವ ನಿನ್ನ ಕಿವಿ-
ಗಳಿಗೆ ಕೇಳಿಸದಿರುವುದೋ!
ತ್ಯಾಗದಿಂದಾ ಮಲವ ನೀಗಿದರೆ ನಿನಗೆ ನಿಜ-
ವಾಗಿಯಾ ದನಿ ಕೇಳ್ವುದೋ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...