Home / ಕವನ / ಕವಿತೆ / ಭಲಭಲರೆ, ಶಕುನಿ!

ಭಲಭಲರೆ, ಶಕುನಿ!

ಕೌರವರ ಮಂತಣಗಾರನಾದ ಶಕುನಿ ಮಾಡಿದ ಕಾರ್ಯ ಅಕಾರ್ಯವೆಂದ ನಿಂದಿಸುವುದು, ಅಜ್ಞಾನದ ಪರಿಣಾಮವೆಂದು ಭಾವಿಸಬಹುದಲ್ಲವೆ?


ಧೀರುರೇ, ಭಲಭಲರೆ! ಶಕುನಿಯೇ ನಾ ನಿನಗೆ
ತಲೆವಾಗಿ ವಂದಿಸುವೆನೈ!
ಭಾರತೀಯರ ಮೇಲೆ ನೀ ಮಾಡಿದುಪಕಾರ
ಭಾರವಾಗಿಹುದು ಕಾಣೈ!


ನಿನ್ನ ಕೈ ಚಳಕದಾ ಹೊಲಬನರಿಯದೆ ನಿನಗೆ
ಹಳಿವನ್ನು ಹೊದ್ದಿಸುವರು-
ಬಣ್ಣವನೆ ನೋಡಿ ಕೋಗಿಲಿಗೆ ಕರಿಗಾಗೆಯೆಂ-
ದೆನುವ ಮತಿಮಂದಜನರು!


ಮುಳ್ಳ ಮಳೆಯಲ್ಲಿರುವ ಹೊಸಜೇನುಹುಟ್ಟಿನಲಿ
ಇನಿರಸವು ತುಂಬಿರುವೊಲು-
ಸುಳ್ಳಲ್ಲ, ನಿನ್ನ ಪ್ರತಿಯೊಂದು ಕೃತಿಯೊಳಗೊಳಗೆ
ಹುರುಳು ಹುದುಗಿಹುದು ಕೇಳು!


ನೀನಿಲ್ಲದಿರಲು ಭಾರತದ ಹಿರಿಹೊತ್ತಗೆಯು
ತಿರುಳಿಲ್ಲದಾಗಿರುವುದು-
ತನಿರಸವನೆಲ್ಲವನು ಹಿಂಡಿ ಹೊರದೆಗೆದ ಕ-
ಬ್ಬಿನ ಕೋಲಿನಂತಿರುವುದು.


ಸುಜನರನು ದುರ್ಜನರು ಯುಗ-ಯುಗಗಳಲ್ಲಿಯೂ
ಪೀಡಿಸುವರೆಂಬುದನ್ನು
ತ್ರಿಜಗಕ್ಕೆ ತಿಳುಹಲಿಕೆ ಭಾರತದ ನಾಟಕದಿ
ಸೂತ್ರಧರನಾದೆ ನೀನು !


ಧರ್ಮರಾಯನ ಧರ್ಮನಿಷ್ಠೆ, ಭೀಮನ ಬಲುಹು,
ಅರ್ಜುನನ ಅಸ್ತ್ರದರಿವು,
ನಮ್ಮೆಲ್ಲರಾ ಕಂಗಳೆದುರಿನಲ್ಲಿ ಕುಣಿಯುವುದು
ನಿನ್ನ ಗೈಮಯ ಫಲಿತವು !


ದುರ್ಯೋಧನನ ಧೈರ್ಯ-ಚಲದಂಕತನವ, ವಿದು-
ರನ ವಿಷ್ಣುಭಕ್ತಿಯನ್ನು,
ಸೂರ್‍ಯಾತ್ಮಜನ ದಾತೃಗುಣವ ಡಂಗುರ ಹೊಯ್ದು
ಜಗದಿ ಸಾರಿದೆಯೊ ನೀನು!


ಪಾಂಚಾಲಿನಿಯ ಪಾವನತೆಯು ಪಸರಿಸುವುದಕೆ
ನೆರವು ನೀ ನೀಡಿದೆಯಲ್ಲಾ?
ಚಂಚಲಾಕ್ಷಿಯ ಹೆಸರನಾರು ತಿಳಿಯುತ್ತಿರ್ದ-
ರೈ, ಪೇಳು ನೀ ಸೌಬಲಾ!


ಕುರುವಂಶಜಾತರನು ಹುರಿಗೊಳಿಸಿ ಸಂಗರಕೆ
ಪರಮಾತ್ಮ ಕೃಷ್ಣನಿಂದೆ-
ಪರಮಗೀತೆಯನು ಹಾಡಿಸಿದೆ ಜಗಕೆಲ್ಲ ಉಪ-
ಕೃತಿಯ ಹೊರೆಯನು ಹೊರಿಸಿದೆ!

೧೦
ಇನ್ನೆಂದು ಬಂದು ನೀ ಭರತಖಂಡದಲಿ ಹೂ-
ಡುವೆ ನಿನ್ನ ನಾಟಕವನು ?
ಮನ್ನೆಯನೆ ತಿಳುಹುವುದು ಜನಕೆ ‘ಸತ್ಯಕ್ಕೆ ಜಯ
ವುಂಟೆ’ಂಬ ತತ್ತ್ವವನ್ನು !

೧೧
ಧೀರುರೇ, ಭಲಭಲರೆ ! ಶಕುನಿಯೇ ನಿನಗೆ ನಾ
ತಲೆವಾಗಿ ವಂದಿಸುವೆನು.
ಭಾರತೀಯರಿಗೆಲ್ಲ ಜೀವನದ ಸಾರವನು
ಕಲಿಸಲಿಕೆ ಬೇಕು ನೀನು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...