Home / ಕವನ / ಕವಿತೆ / ಬೆಳಕನೆರಚು!

ಬೆಳಕನೆರಚು!

ಬೆಳಕನೆರಚು, ಚಳಕನೆರಳು,
ಯುಗ-ಯುಗಾಂತ ತೊಳಗಲಿ!
ಇಳೆಯ ಕವಿದ ಕಳ್ತಲೆಯನು
ಕಳೆದೊಗೆ ದೀಪಾವಳಿ!


ಬರಿಯ ಒಂದೆ ಇರುಳು ಬಂದೆ
ಮುಗಿಯಿತೇನು ಕಾರ್‍ಯ?
ವರುಷದಿ ನೂರಾರು ತಮಸಿ-
ನಿರುಳಿವೆ ಅನಿವಾರ್ಯ!
ಅಂದಂದಿನ ಕತ್ತಲಿಂದೆ
ಮಂದಿಯ ಮನವಿಡಿದು ಮುಂದೆ
ಕರೆದೊಯ್ಯುವರಾರ್ ಅನಂದೆ-
ಮರೆದು ಸರಿಯೆ ನೀನು ?
ಮಿರುಗಿ ಮಾಯವಾಗುತಿರುವ
ಮಿಂಚಿಗೆ ಬೆಲೆಯೇನು?


ನಿನಗಾಗಿಯೆ ಹೊಲ-ನೆಲಗಳು
ಬೆಳೆಯೊಳೇರಿ ನಿಂತಿವೆ;
ನಿನಗಾಗಿಯೆ ಹೊಳೆ-ಕೊಳಗಳು
ತಿಳಿಯ ನೀರನಾಂತಿವೆ.
ಬಿಳಿಯ ಹೊನ್ನ ಸೇವಂತಿಗೆ
ಹೊಳೆದು ನಿನ್ನ ಮೈಕಾಂತಿಗೆ
ಸವಿಗಾರರ ಬಗೆಯ ಸೆಳೆವ
ತವಕದಿ ಬಾಯ್‌ದೆರೆದಿವೆ-
ಬುವಿಯ ಜೀವಕುಲವೆ ದೇವ-
ದಿನವ ನಿನ್ನ ಕರೆದಿವೆ!


ಬರುವುದು ದೀವಳಿಗೆಯೆಂದು
ತಿರೆಯೇ ಕುಣಿ-ಕುಣಿಯಿತು!
ತರುವುದು ಹಿರಿಬೆಳಕನೆಂದು
ಜನವು ದಿನವು ನೆನೆಯಿತು!
ಸಂತೆಗೆ ಹಸರಿಗನು ಬಂದು
ಸಂತೆ ಹರಡಿ ದಿನವದೊಂದು
ಕಂತೆ ಹೇರಿ ಮತ್ತೆ ದಾರಿ
ಹಿಡಿದೆಲ್ಲಿಗೊ ನಡೆವನು;
ಅಂತೆ ನಿನ್ನ ಆಗಮವಿರೆ
ಹಿರಿಮೆ ನಿನ್ನದೇನು?


ಕುರುಡಗೆರಡು ನಿಮಿಷ ಕಣ್ಣ
ನೋಟಗಳನೆ ನೀಡಿ,
ಧರೆಯ ಚನ್ನ ಸೊಬಗಿನನ್ನ-
ವೂಡುವಂತೆ ಮಾಡಿ,
ಮರಳಿ ಕಣ್ಣ ಕಳೆದೊಡವಗೆ
ಇರುವುದೇನು ಬರಿ ತಗುಬಗೆ!
ವರುಷಕೊಂದು ಬಾರಿ ಬಂದು
ಬೆಳಕಕರೆವೆ ನೀನು….
ಉಳಿದ ಇರುಳ ತಮಸಿನುರುಳ
ಕಳೆಯೆ ದಾರಿಯೇನು?
* * *
ಬೆಳಕನೆರಚು, ಬೆಳಕನೆರಚು,
ಯುಗ-ಯುಗವನು ಬೆಳಗಿಸು,
ಇಳೆಯ ಕವಿವ ಕಳ್ತಲೆಗಳ
ಕಳೆದೇಗಲು ತೊಳಗಿಸು !
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...