Home / ಕವನ / ಕವಿತೆ / ಕರುಳಿನ ಕೊರಗು

ಕರುಳಿನ ಕೊರಗು


ಮನವು ನಿನಗಾಗಿಯೇ ಮೊರೆಯುತಿದೆಯೇ-ಚಿನ್ನ
ನೆನಹು ನಿಡುಸುಯಿಲುಗಳ ಕರೆಯುತಿದೆಯೆ?
ಕನಸು ನಿನ್ನದೆ ಚಿತ್ರ ಬರೆಯುತಿದೆಯೇ-ನಿನ್ನ
ಇನಿದುದನಿ ಕಿವಿಗಳನ್ನು ಕೊರೆಯುತ್ತಿದೆಯೆ!


ತೆಳುದುಟಿಯ ತಿಳಿಜೊಲ್ಲು, ಬಿಳಿಯ ಮೊಳೆವಲ್ಲು – ಆ
ಎಳಗಲ್ಲಗಳ ಚೆಲ್ಲು, ಮೆಲುನಗೆಯ ಸೊಲ್ಲು,
ಎಳಯುತ್ತಲಿಹವು ನನ್ನೊಳಗೆ ನಿನ್ನೊಡನೆಯೇ
ಎಳಗೂಸೆ, ನಿನ್ನೆದುರು ನನ್ನ ಬಲ ಹುಲ್ಲು!


ಕೆಳೆಯ ಬಳ್ಳಿಯ ಮೊಳೆಯು ನೀನೆಂದು ಇದ್ದೆ-ಕಂ-
ಮಲರು ತನಿವಣ್ಣುಗಳ ಬೆಳೆವೆನೆಂದಿದ್ದೆ.
ಅಳಿಯಾಸೆಯಲಿ ಕಾಲ ಸೆಳೆದೊಯ್ಯೆ ತನಗೆಂದು
ಅಳಿದು ಕೆಳೆಯಾಶೆ ನಾ ಕಳವಳದಿ ಬಿದ್ದೆ!


ಸಾಕಾಯಿತೇನೆ ಸವಿಸವಿಯ ಕೂಳು-ನಿನಗೆ
ಬೇಕಾಯಿತೇನೆ ಕಣ್ಣೀರ ಕಾಳು !
ಸಕ್ಕರೆಯ ತನಿವಾಲನೊಕ್ಕರಿಸಿ ಸವುಳುಪ್ಪ-
ನಿಕ್ಕಿರುವ ನೀರ ಬಯಸುವರೆ ಹೇಳು !


ಆಗಸದ ತೊಟ್ಟಿಲಲಿ ತೂಗಾಡಲೆಂದು-ನೀ
ಹೋಗಿರುವೆಯೆನುತ ಬಗೆ ಹೇಳುತಿಹುದು ;
ತೂಗುದೊಟ್ಟಿಲ ಹಗ್ಗವಾಗಬೇಕೆಂದು- ತಾ-
ನೇಗಲೂ ಕರುಳು ಹುರಿಗೊಳ್ಳುತಿಹುದು.


ಎಂದಿನಂದದ ನಗೆಯ ಚೆಂದಮೊಗದಿಂದ-ನೀ
ಬಂದು ಕುಳಿತಿರಲು ತೊಡೆಯಲ್ಲಿ ಕಂದ !
ಒಂದೆ ಸವಿಮುತ್ತಿಡುವೆನೆಂದಿರಲು ಎಚ್ಚತ್ತು
ಕಂದೆರೆಯಲರಿತೆ ಹಾಳ್‌ಗನಸಿನಂದ!


ಎನಿತೊ ಮುತ್ತಿಟ್ಟಿದ್ದೆ, ನಲಿವ ಪಟ್ಟಿದ್ದೆ-ಮೈ-
ಮನಗಳನು ತಣಿವಿನಲಿ ತೇಲಬಿಟ್ಟಿದ್ದೆ;
ಕನಸಿನೀ ಮುತ್ತಿನಾ ಗುಣವೇನೊ! ಎದ್ದಾಗ
ಮನಸು ಮೈ ಮುಳ್‌ಬಲೆಗೆ ಬಿದ್ದ ಹಾಗಿದ್ದೆ.


ಸಂತೆ ಬಯಲಾದಂತೆ ಹೃದಯ ಹಾಳು!- ಹೆರರ
ಸಂತಸದ ಸುಗ್ಗಿಯದು ನನಗೆ ಬೀಳು!
ತಂತಿ ಕಿಳ್ತಿಹ ವೀಣೆಯಂತೆ ಬಾಳು-ಇದರ
ಅಂತವೆಲ್ಲಿದೆ ಮಗುವ ಹೇಳು, ಹೇಳು!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...