Home / ಕವನ / ತತ್ವಪದ / ಪರಶಿವನ ಗೆಲ್ಲು

ಪರಶಿವನ ಗೆಲ್ಲು

ಭಕ್ತ ನಿನಗೊಂದು ಕಿವಿಮಾತು
ಮಾಡದಿರು ಬಾಳು ವ್ಯಸನದಿ ತೂತು
ನಾಳಿನ ಭವಿಷ್ಯಕ್ಕೆ ಇಂದು ಚಿಂತೇಕೆ!
ಕ್ಷಣಿಕ ಬದುಕಿಗೆ ಕೋಟಿ ಆಸೆಗಳೇಕೆ

ಆ ಪರಶಿವನೆ ನಿನ್ನ ಪರಮಾತ್ಮ
ಪಾರ್‍ವತಿಯೇ ನಿನ್ನ ಮನಸ್ಸು ಹೌದು
ಪ್ರಾಣಗಳೇ ಸಹಚರರು ದೇಹವೆ ಮನೆ
ಇಂದ್ರಿಯ ಕ್ರಿಯೆಗಳೇ ನಿನ್ನ ಪೂಜೆ

ನಿದ್ರೆಯೇ ನಿನ್ನ ಸಮಾಧಿ ಸ್ಥಿತಿ
ನಿನ್ನ ಸಂಚಾರವೆಲ್ಲ ಪ್ರದಕ್ಷಿಣೆ ರೀತಿ
ಆಡುವ ಮಾತೇ ಅವನಸ್ತುತಿ
ಮಾಡುವ ಕಾರ್‍ಯಗಳ ಆರಾಧನೆ ಪ್ರೀತಿ

ದೇಹವೇರಥ ಆತ್ಮನೆ ರಥಿ
ಬುದ್ಧಿಯೇ ಸಾರಥಿ ಬಾಳಿಗೆಲ್ಲ
ಮನಸ್ಸೆ ಹುರಿ ಇಂದ್ರಿಯಗಳೇ ಅಶ್ವಗಳು
ದೇವನೆಡೆಗೆ ಹೋಗದೆ ವಿಧಿ ಇಲ್ಲ

ಆಧ್ಯಾತ್ಮಿಕ ದಾರಿಯಲಿ ಬ್ರಹ್ಮಚರ್ಯ
ಪಾಲಿಸು ಸತತ ಏಕಾಗ್ರದಲ್ಲಿ
ಕಾಮನಿರುವಲ್ಲಿ ರಾಮನಿಲ್ಲ
ತುಲಸಿದಾಸರ ವಾಣಿ ನೆನೆ ಮನದಲ್ಲಿ

ಬಿದ್ದು ಹೋಗುವ ತನುವಿಗೆ ಅಭಿಮಾನವೇ
ಜಡ್ಡು ದುರಹಂಕಾರ ಬಿಗು ಮಾನವೇ
ಎಲ್ಲವನ್ನು ಆಚೆ ತಳ್ಳಿ ಎದ್ದು ನಿಲ್ಲು
ಮಾಣಿಕ್ಯ ವಿಠಲನ ಭಾವಗೆಲ್ಲು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...