Home / ಕವನ / ಕವಿತೆ / ಕೆದಾರ ಮರಣಮೃದಂಗ

ಕೆದಾರ ಮರಣಮೃದಂಗ

ದೈವ ಸನ್ನಿಧಿಯ ಚೈತನ್ಯದಲಿ
ಹಿಡಿದ ಹೂಮಾಲೆ ಧೂಪದೀಪ ಶ್ರೀಗಂಧ
ಸ್ವರ್ಗದೊಳಗೋಡಾಡಿ ದೇವಪಾದತಲದಲಿ ನಿಂತಕ್ಷಣ
ಕನಸು ನನಸಾಗಿಸಿಕೊಂಡ ಭಾವತೃಪ್ತಿ.

ಹರಹರ ಮಹಾದೇವ ಹರಹರ ಮಹಾದೇವ
ಪರಾತ್ಪರಾಶಿವನ ಮಂತ್ರ ಎಲ್ಲರೆದೆ ತುಂಬ
ಆ ಬೆಟ್ಟ ಈ ಬೆಟ್ಟ ಅಲ್ಲಿಯದೋ ಪ್ರಪಾತ
ಹಚ್ಚಹಸಿರು ಇಳಿಜಾರು ಅಂಕುಡೊಂಕು
ಮೋಡಮುಸುಕು ಮಳೆಯೊಳಗೆಲ್ಲ ಪ್ರತಿಧ್ವನಿ ತುಂಬಿ

ಭಾರಹೊತ್ತ ಇಳಿಸಂಜೆಗೆ ಸುಸ್ತಾಯಿತೆ?
ಇಲ್ಲವೇ ಇಲ್ಲ; ಸುತ್ತೆಲ್ಲ ದೀಪಸಾಲುಗಳು
ಝಗಮಗಿಸುವ ಜಾತ್ರಾಮೆರವಣಿಗೆ
ಘಂಟಾನಾದಕೆ ಪುರಾಣ ಪುಣ್ಯ ಎಚ್ಚೆತ್ತು

ಸಾಕ್ಷಾತ್ ಸ್ವರ್ಗ ಶಿವ ಪದತಲ
ಕಾತರದ ಮನಗಳಿಗೆ ಪುಣ್ಯ ಒಳಗಿಳಿಸಿಕೊಳ್ಳುವ ಕ್ಷಣ
ಪುಣ್ಯದ ಬೀಡು ಉಕ್ಕುಕ್ಕಿ ಹರಿವ
ಭಕ್ತರ ಭಾವನೊರೆತೊರೆ

ದೂರಬೆಟ್ಟದಾಚೆ ಅದೇನೋ ಹೊಂಚು
ಮೋಡಗಳಿಗೆ ರೆಕ್ಕೆಹೊಡೆದು ಮಳೆಯೊಳಗಿಳಿದ
ಸಂಚಿನಾ ಪಕ್ಷಿಗೆ ಕತ್ತಲೆ ಹಿತವಾಗಿ
ಅದರೊಡಲ ಸೀಳಿ ಗಕ್ಕನೆ ನೆಗೆಯಿತು ಕೆದಾರಕೊಳ್ಳಕೆ
ಬೆಚ್ಚಿಬಿದ್ದ ಬೆಟ್ಟದೊಡಲ ಗರ್‍ಭಪಾತ
ಕಲ್ಲುಮಣ್ಣು ಮರಳು ಗಿಡಮರಗಳು ಜರಿದು
ಕ್ಷಣಕ್ಷಣಕೂ ಧುಮ್ಮಿಕ್ಕಿ ಹೊರಹೊಮ್ಮಿ
ಹಿಡಿತಕೆ ಬಾರದೆ ಪ್ರಳಯತಾಂಡವ

ದೇವಸನ್ನಿಧಿಯ ಭಕ್ತರ ಧ್ವನಿ ಮಾರ್‍ಧನಿಸಿ
ಹರಹರ ಮಹಾದೇವ ಹರಹರಮಹಾದೇವ
ಕಾಪಾಡು ಮೃತ್ಯುಂಜಯ ದೈನ್ಯತೆಯ ಕೂಗು ಮತ್ತೆ
ಮತ್ತೆ ಹರಕೆಗಳೆದೆಗೆ ಮರಣಮೃದಂಗ ಸದ್ದು;
ನೋಡು ನೋಡುತಿರೆ ಮನೆಮಠಗಳು ಉರುಳಿ
ಅಲ್ಲೋಲಕಲ್ಲೋಲ ಕೊಚ್ಚಿ ಕೊಚ್ಚಿ ಹೋಗುವ ರಾಶಿರಾಶಿ ಹೆಣಗಳು.

ಅಲಕನಂದಾ ಮಂದಾಕಿನಿ ಭಾಗೀರತಿ
ಸುತ್ತಿಸುಳಿದಾಡಿ ಬಳುಕಿ ಶಿವನೊಲಿಸಲು ಸೋತರೆ?
ಕಠೋರ ಎದೆಯವನೆ ಕಲ್ಲಾಗಿ ಕುಳಿತವನೆ
ಮುಕ್ಕಣ್ಣನೆ ಕಿಚ್ಚು ರೊಚ್ಚು ಹೊತ್ತವನೆ
ವಿಜ್ಞಾನ ಜಗದ ಹಮ್ಮುಬಿಮ್ಮುಗಳಿಗೆ ಬೇಸರವಾಯಿತೆ!
ತಪಸ್ಸಿನೇಕಾಂತಕ್ಕೆ ಭಗ್ನವಾಯಿತೆ ತಂದೆ!!
ಬಾರಿಸಿಯೇ ಬಿಟ್ಟೆ ಮರಣಮೃದಂಗ

ಗಿರಿ ಕಂದರ ಕೊಳ್ಳಗಳೆದೆಗಳ ತುಂಬ
ಹೆಣಗಳ ರಾಶಿರಾಶಿ ಬೀಸಾಕಿ ತಣ್ಣಗಾದೆಯಾ ಮಹಾದೇವ
ಬಂದಿದ್ದರೆಲ್ಲ ಅವರಿಲ್ಲಿ ನಿನ್ನ ಸಾಕ್ಷಾತ್ಕಾರಕೆ
ಹಾರೈಸಿದ್ದೇನು ಶಿವನೆ
ಹೊಸಕಿ ಹೊಸಕಿ ಇಳೆಸುಡುಗಾಡಿಸಿ
ಕಣ್ರೆಪ್ಪೆ ಮುಚ್ಚಿ ಹಾಗೆಯೇ ಸ್ನಾನಕೆ ಕುಳಿತಿರುವೆ.
ಭೋರ್‍ಗರೆವ ಪ್ರಳಯರಾತ್ರಿಗೆ ಚಂದ್ರಕಾಂತನೇ…
ಭಾವಪರವಶದೊಳಗೆ ಭಜಿಸಿದ ಭಕ್ತರನು
ನಿನ್ನ ಮರಣಮೃದಂಗಕ್ಕೆ ತಾಂಡವನೃತ್ಯಕ್ಕೆ
ಎಳೆದೊಯ್ದೆಯೋ;
ನೀನೇ ಹುಚ್ಚೆದ್ದು ಕುಣಿದು
ಕಿಚ್ಚು ಶಮನಿಸಿಕೊಂಡೆಯೋ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...