Home / ಕವನ / ಕವಿತೆ / ಕೆದಾರ ಮರಣಮೃದಂಗ

ಕೆದಾರ ಮರಣಮೃದಂಗ

ದೈವ ಸನ್ನಿಧಿಯ ಚೈತನ್ಯದಲಿ
ಹಿಡಿದ ಹೂಮಾಲೆ ಧೂಪದೀಪ ಶ್ರೀಗಂಧ
ಸ್ವರ್ಗದೊಳಗೋಡಾಡಿ ದೇವಪಾದತಲದಲಿ ನಿಂತಕ್ಷಣ
ಕನಸು ನನಸಾಗಿಸಿಕೊಂಡ ಭಾವತೃಪ್ತಿ.

ಹರಹರ ಮಹಾದೇವ ಹರಹರ ಮಹಾದೇವ
ಪರಾತ್ಪರಾಶಿವನ ಮಂತ್ರ ಎಲ್ಲರೆದೆ ತುಂಬ
ಆ ಬೆಟ್ಟ ಈ ಬೆಟ್ಟ ಅಲ್ಲಿಯದೋ ಪ್ರಪಾತ
ಹಚ್ಚಹಸಿರು ಇಳಿಜಾರು ಅಂಕುಡೊಂಕು
ಮೋಡಮುಸುಕು ಮಳೆಯೊಳಗೆಲ್ಲ ಪ್ರತಿಧ್ವನಿ ತುಂಬಿ

ಭಾರಹೊತ್ತ ಇಳಿಸಂಜೆಗೆ ಸುಸ್ತಾಯಿತೆ?
ಇಲ್ಲವೇ ಇಲ್ಲ; ಸುತ್ತೆಲ್ಲ ದೀಪಸಾಲುಗಳು
ಝಗಮಗಿಸುವ ಜಾತ್ರಾಮೆರವಣಿಗೆ
ಘಂಟಾನಾದಕೆ ಪುರಾಣ ಪುಣ್ಯ ಎಚ್ಚೆತ್ತು

ಸಾಕ್ಷಾತ್ ಸ್ವರ್ಗ ಶಿವ ಪದತಲ
ಕಾತರದ ಮನಗಳಿಗೆ ಪುಣ್ಯ ಒಳಗಿಳಿಸಿಕೊಳ್ಳುವ ಕ್ಷಣ
ಪುಣ್ಯದ ಬೀಡು ಉಕ್ಕುಕ್ಕಿ ಹರಿವ
ಭಕ್ತರ ಭಾವನೊರೆತೊರೆ

ದೂರಬೆಟ್ಟದಾಚೆ ಅದೇನೋ ಹೊಂಚು
ಮೋಡಗಳಿಗೆ ರೆಕ್ಕೆಹೊಡೆದು ಮಳೆಯೊಳಗಿಳಿದ
ಸಂಚಿನಾ ಪಕ್ಷಿಗೆ ಕತ್ತಲೆ ಹಿತವಾಗಿ
ಅದರೊಡಲ ಸೀಳಿ ಗಕ್ಕನೆ ನೆಗೆಯಿತು ಕೆದಾರಕೊಳ್ಳಕೆ
ಬೆಚ್ಚಿಬಿದ್ದ ಬೆಟ್ಟದೊಡಲ ಗರ್‍ಭಪಾತ
ಕಲ್ಲುಮಣ್ಣು ಮರಳು ಗಿಡಮರಗಳು ಜರಿದು
ಕ್ಷಣಕ್ಷಣಕೂ ಧುಮ್ಮಿಕ್ಕಿ ಹೊರಹೊಮ್ಮಿ
ಹಿಡಿತಕೆ ಬಾರದೆ ಪ್ರಳಯತಾಂಡವ

ದೇವಸನ್ನಿಧಿಯ ಭಕ್ತರ ಧ್ವನಿ ಮಾರ್‍ಧನಿಸಿ
ಹರಹರ ಮಹಾದೇವ ಹರಹರಮಹಾದೇವ
ಕಾಪಾಡು ಮೃತ್ಯುಂಜಯ ದೈನ್ಯತೆಯ ಕೂಗು ಮತ್ತೆ
ಮತ್ತೆ ಹರಕೆಗಳೆದೆಗೆ ಮರಣಮೃದಂಗ ಸದ್ದು;
ನೋಡು ನೋಡುತಿರೆ ಮನೆಮಠಗಳು ಉರುಳಿ
ಅಲ್ಲೋಲಕಲ್ಲೋಲ ಕೊಚ್ಚಿ ಕೊಚ್ಚಿ ಹೋಗುವ ರಾಶಿರಾಶಿ ಹೆಣಗಳು.

ಅಲಕನಂದಾ ಮಂದಾಕಿನಿ ಭಾಗೀರತಿ
ಸುತ್ತಿಸುಳಿದಾಡಿ ಬಳುಕಿ ಶಿವನೊಲಿಸಲು ಸೋತರೆ?
ಕಠೋರ ಎದೆಯವನೆ ಕಲ್ಲಾಗಿ ಕುಳಿತವನೆ
ಮುಕ್ಕಣ್ಣನೆ ಕಿಚ್ಚು ರೊಚ್ಚು ಹೊತ್ತವನೆ
ವಿಜ್ಞಾನ ಜಗದ ಹಮ್ಮುಬಿಮ್ಮುಗಳಿಗೆ ಬೇಸರವಾಯಿತೆ!
ತಪಸ್ಸಿನೇಕಾಂತಕ್ಕೆ ಭಗ್ನವಾಯಿತೆ ತಂದೆ!!
ಬಾರಿಸಿಯೇ ಬಿಟ್ಟೆ ಮರಣಮೃದಂಗ

ಗಿರಿ ಕಂದರ ಕೊಳ್ಳಗಳೆದೆಗಳ ತುಂಬ
ಹೆಣಗಳ ರಾಶಿರಾಶಿ ಬೀಸಾಕಿ ತಣ್ಣಗಾದೆಯಾ ಮಹಾದೇವ
ಬಂದಿದ್ದರೆಲ್ಲ ಅವರಿಲ್ಲಿ ನಿನ್ನ ಸಾಕ್ಷಾತ್ಕಾರಕೆ
ಹಾರೈಸಿದ್ದೇನು ಶಿವನೆ
ಹೊಸಕಿ ಹೊಸಕಿ ಇಳೆಸುಡುಗಾಡಿಸಿ
ಕಣ್ರೆಪ್ಪೆ ಮುಚ್ಚಿ ಹಾಗೆಯೇ ಸ್ನಾನಕೆ ಕುಳಿತಿರುವೆ.
ಭೋರ್‍ಗರೆವ ಪ್ರಳಯರಾತ್ರಿಗೆ ಚಂದ್ರಕಾಂತನೇ…
ಭಾವಪರವಶದೊಳಗೆ ಭಜಿಸಿದ ಭಕ್ತರನು
ನಿನ್ನ ಮರಣಮೃದಂಗಕ್ಕೆ ತಾಂಡವನೃತ್ಯಕ್ಕೆ
ಎಳೆದೊಯ್ದೆಯೋ;
ನೀನೇ ಹುಚ್ಚೆದ್ದು ಕುಣಿದು
ಕಿಚ್ಚು ಶಮನಿಸಿಕೊಂಡೆಯೋ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...