Home / ಕವನ / ಕವಿತೆ / ಕೆದಾರ ಮರಣಮೃದಂಗ

ಕೆದಾರ ಮರಣಮೃದಂಗ

ದೈವ ಸನ್ನಿಧಿಯ ಚೈತನ್ಯದಲಿ
ಹಿಡಿದ ಹೂಮಾಲೆ ಧೂಪದೀಪ ಶ್ರೀಗಂಧ
ಸ್ವರ್ಗದೊಳಗೋಡಾಡಿ ದೇವಪಾದತಲದಲಿ ನಿಂತಕ್ಷಣ
ಕನಸು ನನಸಾಗಿಸಿಕೊಂಡ ಭಾವತೃಪ್ತಿ.

ಹರಹರ ಮಹಾದೇವ ಹರಹರ ಮಹಾದೇವ
ಪರಾತ್ಪರಾಶಿವನ ಮಂತ್ರ ಎಲ್ಲರೆದೆ ತುಂಬ
ಆ ಬೆಟ್ಟ ಈ ಬೆಟ್ಟ ಅಲ್ಲಿಯದೋ ಪ್ರಪಾತ
ಹಚ್ಚಹಸಿರು ಇಳಿಜಾರು ಅಂಕುಡೊಂಕು
ಮೋಡಮುಸುಕು ಮಳೆಯೊಳಗೆಲ್ಲ ಪ್ರತಿಧ್ವನಿ ತುಂಬಿ

ಭಾರಹೊತ್ತ ಇಳಿಸಂಜೆಗೆ ಸುಸ್ತಾಯಿತೆ?
ಇಲ್ಲವೇ ಇಲ್ಲ; ಸುತ್ತೆಲ್ಲ ದೀಪಸಾಲುಗಳು
ಝಗಮಗಿಸುವ ಜಾತ್ರಾಮೆರವಣಿಗೆ
ಘಂಟಾನಾದಕೆ ಪುರಾಣ ಪುಣ್ಯ ಎಚ್ಚೆತ್ತು

ಸಾಕ್ಷಾತ್ ಸ್ವರ್ಗ ಶಿವ ಪದತಲ
ಕಾತರದ ಮನಗಳಿಗೆ ಪುಣ್ಯ ಒಳಗಿಳಿಸಿಕೊಳ್ಳುವ ಕ್ಷಣ
ಪುಣ್ಯದ ಬೀಡು ಉಕ್ಕುಕ್ಕಿ ಹರಿವ
ಭಕ್ತರ ಭಾವನೊರೆತೊರೆ

ದೂರಬೆಟ್ಟದಾಚೆ ಅದೇನೋ ಹೊಂಚು
ಮೋಡಗಳಿಗೆ ರೆಕ್ಕೆಹೊಡೆದು ಮಳೆಯೊಳಗಿಳಿದ
ಸಂಚಿನಾ ಪಕ್ಷಿಗೆ ಕತ್ತಲೆ ಹಿತವಾಗಿ
ಅದರೊಡಲ ಸೀಳಿ ಗಕ್ಕನೆ ನೆಗೆಯಿತು ಕೆದಾರಕೊಳ್ಳಕೆ
ಬೆಚ್ಚಿಬಿದ್ದ ಬೆಟ್ಟದೊಡಲ ಗರ್‍ಭಪಾತ
ಕಲ್ಲುಮಣ್ಣು ಮರಳು ಗಿಡಮರಗಳು ಜರಿದು
ಕ್ಷಣಕ್ಷಣಕೂ ಧುಮ್ಮಿಕ್ಕಿ ಹೊರಹೊಮ್ಮಿ
ಹಿಡಿತಕೆ ಬಾರದೆ ಪ್ರಳಯತಾಂಡವ

ದೇವಸನ್ನಿಧಿಯ ಭಕ್ತರ ಧ್ವನಿ ಮಾರ್‍ಧನಿಸಿ
ಹರಹರ ಮಹಾದೇವ ಹರಹರಮಹಾದೇವ
ಕಾಪಾಡು ಮೃತ್ಯುಂಜಯ ದೈನ್ಯತೆಯ ಕೂಗು ಮತ್ತೆ
ಮತ್ತೆ ಹರಕೆಗಳೆದೆಗೆ ಮರಣಮೃದಂಗ ಸದ್ದು;
ನೋಡು ನೋಡುತಿರೆ ಮನೆಮಠಗಳು ಉರುಳಿ
ಅಲ್ಲೋಲಕಲ್ಲೋಲ ಕೊಚ್ಚಿ ಕೊಚ್ಚಿ ಹೋಗುವ ರಾಶಿರಾಶಿ ಹೆಣಗಳು.

ಅಲಕನಂದಾ ಮಂದಾಕಿನಿ ಭಾಗೀರತಿ
ಸುತ್ತಿಸುಳಿದಾಡಿ ಬಳುಕಿ ಶಿವನೊಲಿಸಲು ಸೋತರೆ?
ಕಠೋರ ಎದೆಯವನೆ ಕಲ್ಲಾಗಿ ಕುಳಿತವನೆ
ಮುಕ್ಕಣ್ಣನೆ ಕಿಚ್ಚು ರೊಚ್ಚು ಹೊತ್ತವನೆ
ವಿಜ್ಞಾನ ಜಗದ ಹಮ್ಮುಬಿಮ್ಮುಗಳಿಗೆ ಬೇಸರವಾಯಿತೆ!
ತಪಸ್ಸಿನೇಕಾಂತಕ್ಕೆ ಭಗ್ನವಾಯಿತೆ ತಂದೆ!!
ಬಾರಿಸಿಯೇ ಬಿಟ್ಟೆ ಮರಣಮೃದಂಗ

ಗಿರಿ ಕಂದರ ಕೊಳ್ಳಗಳೆದೆಗಳ ತುಂಬ
ಹೆಣಗಳ ರಾಶಿರಾಶಿ ಬೀಸಾಕಿ ತಣ್ಣಗಾದೆಯಾ ಮಹಾದೇವ
ಬಂದಿದ್ದರೆಲ್ಲ ಅವರಿಲ್ಲಿ ನಿನ್ನ ಸಾಕ್ಷಾತ್ಕಾರಕೆ
ಹಾರೈಸಿದ್ದೇನು ಶಿವನೆ
ಹೊಸಕಿ ಹೊಸಕಿ ಇಳೆಸುಡುಗಾಡಿಸಿ
ಕಣ್ರೆಪ್ಪೆ ಮುಚ್ಚಿ ಹಾಗೆಯೇ ಸ್ನಾನಕೆ ಕುಳಿತಿರುವೆ.
ಭೋರ್‍ಗರೆವ ಪ್ರಳಯರಾತ್ರಿಗೆ ಚಂದ್ರಕಾಂತನೇ…
ಭಾವಪರವಶದೊಳಗೆ ಭಜಿಸಿದ ಭಕ್ತರನು
ನಿನ್ನ ಮರಣಮೃದಂಗಕ್ಕೆ ತಾಂಡವನೃತ್ಯಕ್ಕೆ
ಎಳೆದೊಯ್ದೆಯೋ;
ನೀನೇ ಹುಚ್ಚೆದ್ದು ಕುಣಿದು
ಕಿಚ್ಚು ಶಮನಿಸಿಕೊಂಡೆಯೋ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...