Home / ಕವನ / ಕವಿತೆ / ಮನಸೇಽ

ಮನಸೇಽ

ಗೊಂದಲಗೂಡು ನರಕಸದೃಶ
ವಿಷಾನಿಲದಿಂದಾವೃತ್ತ ಭೂಮಂಡಲ ಮಧ್ಯದೊಳು
ಶಾಂತಿಬಯಸಿ ಮುಕ್ತಿಹುಡುಕುತ ಸುಳಿದಾಡಿ ಸುತ್ತಿ
ಬಸವಳಿಯುವ ಮನಸೇ
ಸುಮ್ಮನೊಮ್ಮೆ ಕೂಡು ಸಮುದ್ರದಂಡೆಯ ಮೇಲೆ

ಕಣ್ಣಾಡಿಸು ಸುತ್ತಮುತ್ತೆಲ್ಲ
ಮರಳು ಚಿಪ್ಪು ವಿಶಾಲ ಸಮುದ್ರದಲೆಗಳು
ನೋಡು ದೂರದಿಗಂತದೆಡೆಗೆ
ಸೂರ್‍ಯ ನಕ್ಕು ಮುಕ್ಕಳಿಸಿದ ಬಂಗಾರ ನೀರಿನಲೆಗಳ
ನಡುವೆ ತೇಲುವ ಹಾಯಿ ದೋಣಿಗಳ;

ಕಾಣದಿರಲಿ ಮರಳ ಮೇಲಿನ ಕಸಕಡ್ಡಿ
ಬೆನ್ನಹಿಂದಿನ ಎತ್ತರೆತ್ತದ ಜಂಬದ
ಮನೆಗಳ ಪಗಡೆಯಾಟದ ನೋಟ.

ಸುತ್ತಾಡಿ ನಗರ ಪ್ರದಕ್ಷಿಣೆ ಮಾಡು ಮನಸೇ
ಸಂಪಿಗೆ ಗುಲಾಬಿ ಪಾರಿಜಾತ ಹೂಗಿಡಮರ
ಬಳ್ಳಿಗಳ ಪರಿಮಳ ಆಸ್ವಾದಿಸು
ಸ್ವಲ್ಪ ಉಸಿರು ಬಿಗಿಹಿಡಿ ಚರಂಡಿ ತಿಪ್ಪೆಗಳೂ ಇವೆ
ಕಣ್ಣಿಗೆ ಒಳಪರದೆ ಬೀಳಲಿ ಜನ ಕಾಣದಿರಲಿ.

ನಿರಮ್ಮಳವಾಗಿ ಹಣೆಗಂಟು ಇಳಿಸು ಮನಸೇ
ಜೋಲು ಮುಖ ಎತ್ತಿ ನಗೆಹೊತ್ತು
ಸುತ್ತೆಲ್ಲ ನೋಡು ಇದು ನಿನ್ನದೇ ನಾಡು ನುಡಿ
ನಿನ್ನವರೇ ಸಂಬಂಧಿಗಳ ಕಲರವ
ಮುದ್ದಿಡುತಿದೆ ನಾಯಿ ನಿನ್ನ ಕಾಲಿಗೆ
ನಗು ರಿಂಗಣಿಸಲಿ; ಕಿವಿಗೆ ಬಿಡು ಎಣ್ಣೆ.

ಸುಮ್ಮನೆ ಕೂಡು ದೀಪದ ಬೆಳಕಿನ ದೇವನೆದುರಲಿ
ನೋಡು ಅವನ ಕಣ್ಣಲಿ ಮಿಂಚುನಗು
ತುಟಿಯಲ್ಲಿಯ ತುಂಟನಗು ಮುಡಿಗೇರಿಸಿದ ಹೂವು
ಮುಗ್ಧ ಮೊಲ, ಪುಣ್ಯಕೋಟಿ ಗೋವು;
ಕಾಣಿಸಿದರೆ ಕಾಣಿಸಲಿ ಅವನ ಸುತ್ತ ತುಂಬಿರುವ
ಹುಲಿ ಹಾವು ಕೀಟಗಳ ಹರಿದಾಟ
ನಡುವೆ ಪ್ರಶಾಂತ ಚಿತ್ಕಳೆಯ ಸಾಕಾರ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...