Home / ಕವನ / ಕವಿತೆ / ನನಗೆ ತಿಳಿಯದ ಗಣಿತ

ನನಗೆ ತಿಳಿಯದ ಗಣಿತ

ಒಂದು ಎರಡು ಮೂರು, (a + b)2 ತೀಟಾ, ತ್ರಿಕೋನ. ಕರ್ಣ ವಿಕರ್ಣ.
ಇವುಗಳ ಸುತ್ತವೇ ಸುತ್ತುವ ಜ್ಞಾನೀ.
ಪೇಪರ್ ತುಂಬಿದವು ; ಕೈ ಮಸಿಯಾಯ್ತು; ಶಾಯಿ ಖರ್ಚಾಯ್ತು
ನಿನ್ನ ಲೆಕ್ಕ ಮುಗಿಯುವುದು ಯಾವಾಗ ?

ಲೆಕ್ಕ ಮಾಡುತ್ತೀಯ ?
ನಿನ್ನಪ್ಪನ ಪಗಾರೆಷ್ಟು? ಮನೆಯ ಬಾಡಿಗೆ ಎಷ್ಟು?
ಇಲಕ್ಟ್ರಿಕ್ ಬಿಲ್ ಎಷ್ಟು ? ಕೊನೆಗೆ ಉಳಿಯುವುದೆಷ್ಟು ?
ಮಿಗಿಲಾಗಿ, ತಲೆ ತುಂಬುವ, ತಲೆ ತಿನ್ನುವ ಸಮಸ್ಯೆಗಳೆಷ್ಟು ?
ಅದಕ್ಕೆ ಪರಿಮಿತಿ ಉಂಟೆ ? ಹೇಳು- ಇತಿಮಿತಿ ಉಂಟೆ ?

ಒಮ್ಮೆ ಪೆನ್ನು ಮುಚ್ಚು, ಕಣ್ಣ ಬಿಚ್ಚು
`ಅಬ್ಬ ! ಆಹಾ’ ಆಕಾಶ ನೋಡು – ಈ ಭೂಮಿ ನೋಡು
ಎತ್ತರ ಅಳೆ- ಆಷ್ಟೆ
ಎತ್ತರ ಬೆಳೆ
ಆಕಾಶಕ್ಕೆ ಮೇರೆ ಎಲ್ಲಿ ? ನಕ್ಷತ್ರಗಳ ಸಂಖ್ಯೆ ಎಷ್ಟು ?
ಇಷ್ಟು ಸಣ್ಣ ತಲೆಯಲ್ಲಿ ಅಂಥಂಥ ಘನ ವಿಚಾರ
ಹೊಳೆಯುವುದು ಹೇಗೆ ? ಅಲ್ಲ-
ಅವೆಲ್ಲ ತುಂಬಿದ್ದು ಹೇಗೆ?
ಲೆಕ್ಕ ಸಾಧ್ಯವಿಲ್ಲ ಅದಕ್ಕೆ ಸೂತ್ರ ಇಲ್ಲ

ಇದ್ದಲ್ಲಿ
ಗುಣಿಸು ಭಾಗಿಸು
ಕೂಡು-ಕಳೆ
ಬದುಕಿ ನುತ್ತರ ಏನು?
ಗಣಿತಜ್ಞ.
ನೀನು ಇಂಥಲ್ಲಿ ನಿನ್ನ ಲೆಕ್ಕದ ಗಣಿ-ತಜ್ಞನಾಗುವುದೇ ಜಾಸ್ತಿ

ನೀನು ಬೆಟ್ಟ ಏರಲಾರೆ-ನದಿ ಇಳಿಯಲಾರೆ
ಪ್ರತಿ ದಿವಸ ಮುಳುಗುವ ಸೂರ್ಯನ ಕಿರಣ ಎಣಿಸಲಾರೆ
ತಂಗಾಳಿಯ ಪಿಸುಮಾತಿಗೆ ವ್ಯಾಖ್ಯೆ ಕೊಡಲಾರೆ

ಇವೆಲ್ಲದರ ಒಳಗೆ ಅವಿತ
ನಿನ್ನ ಸಂಖ್ಯೆಗಳು, ಎಂದೂ ಸುಳ್ಳಾಗದ ಸಿದ್ಧಾಂತ
ಪಾಪ! ನೀ ರಚಿಸುವ ವೃತ್ತದ ಪಥವೇ ನೀನು
ನೀನು ಹಾರಲಾರೆ ತಪ್ಪಿಯೂ
ಬೀಳಲಾರೆ

ಒಂದು ಭಾಗಿಲೆ ಝೀರೋ (೧/೦)
ಝೀರೋ ಭಾಗಿಲೆ ಝೀರೋ (೦/೦)
ಉತ್ತರ ಎಷ್ಟು ?
ನಿನ್ನ ಲೆಕ್ಕ ಮುಗಿಯುವುದಿಲ್ಲ
ಅಸಂಬದ್ಧ-ಅನಿಶ್ಚಿತ-ಅನಂತ
ಹೊರಗೆ ಬರದ ನಿನ್ನ ಲೆಕ್ಕಾಚಾರ
ನನಗೆ ನಿರ್ಜೀವ – ಪೂರ ನಿಶ್ಚೇತ
*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...