Home / ಕವನ / ಕವಿತೆ / ಬಯೋಡಾಟಾ ಬದಲಿಸಬೇಕಂತೆ

ಬಯೋಡಾಟಾ ಬದಲಿಸಬೇಕಂತೆ

ಹೂವು ತೋರಣಗಳ ಛತ್ರಚಾಮರಗಳಿಂದಲಕೃತ ವೇದಿಕೆ
ಕಣ್ಮನ ಸೆಳೆವ ರೆಶ್ಮೆ ಪಂಚೆಯುಡುಗೆ ತೊಡುಗೆ
ವಜ್ರವೈಡೂರ್‍ಯಗಳ ಕಿರೀಟಧರಿಸಿದ ಶ್ರೀರಾಮಚಂದ್ರ
ಸುಶೋಭಿತ ಚಂದ್ರವದನೆ ಸೀತೆಯ ಪಟ್ಟಾಭಿಷೇಕ
ಮನಮೋಹಕ ಚಿತ್ತಾಕರ್‍ಷಕ
ಕ್ಯಾಲಂಡರದೊಳಗಿನ ದೃಶ್ಯಕಾವ್ಯ.

ದೇವದೇವೋತ್ತಮ ಪುರುಷೋತ್ತಮ ರಾಮನೆಂದರೆ
ರಾಜಾರಾಮ ರಘುಕುಲತಿಲಕನೆಂದರೆ
ಪಿಳಿಪಿಳಿ ಕಣ್ಣು ಹೊಸಪೀಳಿಗೆಯವುಗಳಿಗೆ
ರಾಮನವತಾರದ ಬಟ್ಟೆತೊಟ್ಟು
ಕುಸಂಬರಿ ಪಾನಕ ಸವಿದು
ದಿನದ ರಜೆ ಕಳೆದುಬಿಟ್ಟರೆ
ಹಿರಿಯರ ರಾಮನಾಮಸ್ಮರಣೆ ಏನೆಂದು
ಯಾಕೆಂದು ಗೊತ್ತಾಗದೆ ಗಲಿಬಿಲಿ.

ಭಕ್ತಿಭಾವ ನಂಬಿಕೆ ವಿಶ್ವಾಸಗಳ ಬಗೆಗೆ ಹೇಳಿದ್ದಾದರೆ
ಅದೆಂತಹ ನಾಮಬಲ, ಹೇಗಿದ್ದನಾತ
ಅವನ ಓದು ಕೆಲಸ ಹೆಂಡತಿ ಮಕ್ಕಳು ಏನೆಂದು
ನಿನ್ನ ಬಯೋಡಾಟಾ ಕೇಳುತ್ತಾರೆ ರಾಮಾ-

ಮೊದಲ ಸುತ್ತಿನ ನಿನ್ನ ಪರಿಚಯ ಕೇಳಿದ್ದೇ ಸಾಕು
ಈಗ ನೂರಾರು ಪ್ರಶ್ನೆಗಳ ಮೂಟೆಹೊತ್ತು ಬಂದಿದ್ದಾರೆ.
ದೇವನಾಗಿದ್ದರೆ…
ಗೊತ್ತಾಗಬೇಕಿತ್ತು ಮಾಯಾಜಿಂಕೆಯ ಬೆನ್ನುಹತ್ತಿ
ದಂಡಕಾರಣ್ಯದಲಿ ಸೀತೆಯನ್ನು ಬಿಟ್ಟು ಹೋದನೇಕೆ?-
ಹದಿನಾಲ್ಕು ವರ್ಷ ಮಕ್ಕಳಾಗದಂತೆ
ಅದಾವ ನಾರುಬೇರು ಕೊಟ್ಟು ಸೀತೆಗೆ ಸಮಾಧಾನಿಸಿದನಂತೆ?
ರಾವಣ, ಸೀತಾಪರಹಣ, ಮರುಪಟ್ಟಾಭಿಷೇಕ
ಅಬ್ಬಬ್ಬಾ! ಹೌದು, ಆದರೆ….
ದೇವನಾಗಿದ್ದರೆ, ರಾಜನಾಗಿದ್ದರೆ, ಹೋಗಲಿ ಪುರುಷೋತ್ತಮನಾಗಿದ್ದರೆ…
ಹಾದಿಹೋಕರ ಮಾತಿಗೆ ಬೆಲೆಕೊಟ್ಟು
ಹೆಂಡತಿಗೆ ಅಪಮಾನಸಿ ಅಗ್ನಿಪರೀಕ್ಷೆ ಮಾಡಿಸಿದನೇಕೆ?-
ತುಂಬು ಬಸುರಿಯನು ನದಿದಾಟಿಸಿ ಕಾಡಿಗೆ ಬಿಟ್ಟಿದ್ದೇಕೆ?

ಮಕ್ಕಳಾದರೂ ಮರಳಿನೋಡದ ಜನಪಾಲಕ
ಪ್ರಜೆಗಳ ಪರಾಕದಮಲಿಗೆ ಹೆಂಡತಿ ಮಕ್ಕಳಿಗೆ
ಅಪಾತ್ರನಾದ ರಾಮರಾಮ ಅದ್ಹೇಗೆ ದೇವಮಾನವನಂತೆ?-
ಅವನೊಬ್ಬ ಪುರುಷರಲಿ ಪುರುಷನಷ್ಟೇ
ಅವನ ಬಯೋಡಾಟಾ ಬದಲಿಸಬೇಕು.

ನಿರ್ಭಿಡೆಯ ಮಕ್ಕಳು ಕಥೆ ಹಿಂಜುತ್ತಿವೆ
ನೀನೇ ಉತ್ತರಹೇಳು ರಾಮಾ.
ವಿಜ್ಞಾನ ದೇವಕಣ ಸೃಷ್ಠಿಯ ಆದಿ ಅನಂತದ
ನಿಗೂಢದೊಳಹೊಕ್ಕು ಝಾಲಾಡಿಸಿ ಸತ್ಯ ಬಹಿರಂಗಿಸುವ
ಈ ಹೊಸ ದೇವರುಗಳಿಗೆ ಬೆರಗಾಗುವುದಬಿಟ್ಟು
ಬೇರೇನೂ ಉಳಿಯಲಿಲ್ಲ ರಾಮಾ
ರಾಮ ರಾಮಾ.
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...