Home / ಕವನ / ಕವಿತೆ / ಬಯೋಡಾಟಾ ಬದಲಿಸಬೇಕಂತೆ

ಬಯೋಡಾಟಾ ಬದಲಿಸಬೇಕಂತೆ

ಹೂವು ತೋರಣಗಳ ಛತ್ರಚಾಮರಗಳಿಂದಲಕೃತ ವೇದಿಕೆ
ಕಣ್ಮನ ಸೆಳೆವ ರೆಶ್ಮೆ ಪಂಚೆಯುಡುಗೆ ತೊಡುಗೆ
ವಜ್ರವೈಡೂರ್‍ಯಗಳ ಕಿರೀಟಧರಿಸಿದ ಶ್ರೀರಾಮಚಂದ್ರ
ಸುಶೋಭಿತ ಚಂದ್ರವದನೆ ಸೀತೆಯ ಪಟ್ಟಾಭಿಷೇಕ
ಮನಮೋಹಕ ಚಿತ್ತಾಕರ್‍ಷಕ
ಕ್ಯಾಲಂಡರದೊಳಗಿನ ದೃಶ್ಯಕಾವ್ಯ.

ದೇವದೇವೋತ್ತಮ ಪುರುಷೋತ್ತಮ ರಾಮನೆಂದರೆ
ರಾಜಾರಾಮ ರಘುಕುಲತಿಲಕನೆಂದರೆ
ಪಿಳಿಪಿಳಿ ಕಣ್ಣು ಹೊಸಪೀಳಿಗೆಯವುಗಳಿಗೆ
ರಾಮನವತಾರದ ಬಟ್ಟೆತೊಟ್ಟು
ಕುಸಂಬರಿ ಪಾನಕ ಸವಿದು
ದಿನದ ರಜೆ ಕಳೆದುಬಿಟ್ಟರೆ
ಹಿರಿಯರ ರಾಮನಾಮಸ್ಮರಣೆ ಏನೆಂದು
ಯಾಕೆಂದು ಗೊತ್ತಾಗದೆ ಗಲಿಬಿಲಿ.

ಭಕ್ತಿಭಾವ ನಂಬಿಕೆ ವಿಶ್ವಾಸಗಳ ಬಗೆಗೆ ಹೇಳಿದ್ದಾದರೆ
ಅದೆಂತಹ ನಾಮಬಲ, ಹೇಗಿದ್ದನಾತ
ಅವನ ಓದು ಕೆಲಸ ಹೆಂಡತಿ ಮಕ್ಕಳು ಏನೆಂದು
ನಿನ್ನ ಬಯೋಡಾಟಾ ಕೇಳುತ್ತಾರೆ ರಾಮಾ-

ಮೊದಲ ಸುತ್ತಿನ ನಿನ್ನ ಪರಿಚಯ ಕೇಳಿದ್ದೇ ಸಾಕು
ಈಗ ನೂರಾರು ಪ್ರಶ್ನೆಗಳ ಮೂಟೆಹೊತ್ತು ಬಂದಿದ್ದಾರೆ.
ದೇವನಾಗಿದ್ದರೆ…
ಗೊತ್ತಾಗಬೇಕಿತ್ತು ಮಾಯಾಜಿಂಕೆಯ ಬೆನ್ನುಹತ್ತಿ
ದಂಡಕಾರಣ್ಯದಲಿ ಸೀತೆಯನ್ನು ಬಿಟ್ಟು ಹೋದನೇಕೆ?-
ಹದಿನಾಲ್ಕು ವರ್ಷ ಮಕ್ಕಳಾಗದಂತೆ
ಅದಾವ ನಾರುಬೇರು ಕೊಟ್ಟು ಸೀತೆಗೆ ಸಮಾಧಾನಿಸಿದನಂತೆ?
ರಾವಣ, ಸೀತಾಪರಹಣ, ಮರುಪಟ್ಟಾಭಿಷೇಕ
ಅಬ್ಬಬ್ಬಾ! ಹೌದು, ಆದರೆ….
ದೇವನಾಗಿದ್ದರೆ, ರಾಜನಾಗಿದ್ದರೆ, ಹೋಗಲಿ ಪುರುಷೋತ್ತಮನಾಗಿದ್ದರೆ…
ಹಾದಿಹೋಕರ ಮಾತಿಗೆ ಬೆಲೆಕೊಟ್ಟು
ಹೆಂಡತಿಗೆ ಅಪಮಾನಸಿ ಅಗ್ನಿಪರೀಕ್ಷೆ ಮಾಡಿಸಿದನೇಕೆ?-
ತುಂಬು ಬಸುರಿಯನು ನದಿದಾಟಿಸಿ ಕಾಡಿಗೆ ಬಿಟ್ಟಿದ್ದೇಕೆ?

ಮಕ್ಕಳಾದರೂ ಮರಳಿನೋಡದ ಜನಪಾಲಕ
ಪ್ರಜೆಗಳ ಪರಾಕದಮಲಿಗೆ ಹೆಂಡತಿ ಮಕ್ಕಳಿಗೆ
ಅಪಾತ್ರನಾದ ರಾಮರಾಮ ಅದ್ಹೇಗೆ ದೇವಮಾನವನಂತೆ?-
ಅವನೊಬ್ಬ ಪುರುಷರಲಿ ಪುರುಷನಷ್ಟೇ
ಅವನ ಬಯೋಡಾಟಾ ಬದಲಿಸಬೇಕು.

ನಿರ್ಭಿಡೆಯ ಮಕ್ಕಳು ಕಥೆ ಹಿಂಜುತ್ತಿವೆ
ನೀನೇ ಉತ್ತರಹೇಳು ರಾಮಾ.
ವಿಜ್ಞಾನ ದೇವಕಣ ಸೃಷ್ಠಿಯ ಆದಿ ಅನಂತದ
ನಿಗೂಢದೊಳಹೊಕ್ಕು ಝಾಲಾಡಿಸಿ ಸತ್ಯ ಬಹಿರಂಗಿಸುವ
ಈ ಹೊಸ ದೇವರುಗಳಿಗೆ ಬೆರಗಾಗುವುದಬಿಟ್ಟು
ಬೇರೇನೂ ಉಳಿಯಲಿಲ್ಲ ರಾಮಾ
ರಾಮ ರಾಮಾ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...