Home / ಕವನ / ಕವಿತೆ / ಸ್ವಚ್ಛ ಭಾರತ್

ಸ್ವಚ್ಛ ಭಾರತ್

ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಯಾನಕೆ
ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಮಾನಕೆ
ಕೈಜೋಡಿಸಿದೆವು ಪ್ರಮಾಣವಚನ ಮಾಡಿಸಿದಿರಿ ಬೀದಿಗಿಳಿಸಿದಿರಿ
ಆದ ಸಂತೋಷ ಅಷ್ಟಿಷ್ಟಲ್ಲ
ಆರೋಗ್ಯವೇ ಭಾಗ್ಯ: ಸರ್ವಂ ಸುಂದರಂ ಅಲ್ಲವೆ ಮತ್ತೆ
ಕಿವಿಗಳು ಕೇಳಿಯೇ ಪಾವನವಾದವು
ಕಣ್ಣುಗಳು ನೋಡಿಯೇ ಬಿಡಲು ಹಟಕ್ಕೆ ಬಿದ್ದವು
ದೇಶಭಕ್ತರೆಲ್ಲ ಪೊರಕೆ ಹಿಡಿದರು

ಫಳಫಳ ಹೊಳೆವ ದೊಡ್ಡದೊಡ್ಡ ಗಾಜು ಕಿಟಕಿಗಳ
ಆಫೀಸುಗಳ ತಾರುತಂತಿ ತಗಡು ಬೋರ್‍ಡು
ನಟ್ ಬೋಲ್ಟ್‌ಗಳ ಸಾಪ್ಟವೇರ್ ಕಸವೆಲ್ಲ
ಅವರವರ ಗೇಟ್ ಮುಂದೆ ಬಿದ್ದಿವೆ-
ಸ್ವಚ್ಛ ಭಾರತದ ಪೊರಕೆಯವರನು ನೋಡಿ
ಧೂಳ ಜಾಡಿಸಿ ಕಾರಿನ ಕಿಟಕಿ ಏರಿಸುತ
ಹೊರಟೇಬಿಡುವರು ಆರೆಂಟು ಅಂಕಿಯ
ಹಣಪಡೆವ ಜಾಣರು ಮೋದಿಜಿ!

ಪುಣ್ಯಕ್ಷೇತ್ರಗಳ ಒಳಗೆ ಕಣ್ಬಿಟ್ಟ ದೇವನೆದುರು
ಧೂಪ ದೀಪ ಹೂಹಾರ ಹಣ್ಣು ಪ್ರಸಾದ
ಮನಸಿಗೆ ತೃಪ್ತಿ ದೇವರ ದರುಶನ ಪಡೆದ ಭಾಗ್ಯ
ಈಚೆಗೆ ಬಂದದ್ದೆ ಆಚೀಚೆ ಕಣ್ಣಾಡಿಸಿದ್ದೇ ಕ್ಷಣ
ಎಲ್ಲೆಲ್ಲೂ ಕೊಳೆತ ಎಲೆಹೂವು ಹಣ್ಣುಗಳ ಚಿಲ್ಲಾಪಿಲ್ಲಿ
ದನಗಳ ಸಗಣಿ ಗಂಜಲಿನ ಗಬ್ಬುವಾಸನೆ ಪಿಚಿಪಿಚಿ.
ಸ್ವಚ್ಛ ಭಾರತ ಹುರುಪಿನ ಪೊರಕೆಯವರು
ಮುಂದಾದರೆ ಅವರ ಜಾತಿಮತ ಬಣ್ಣ ಕೆದಕಿ
ನಾಲ್ಕೈದು ಬೈಗುಳ ಬಯ್ದು
ಮೂಗು ಮುಚ್ಚಿ ಕಾರೇರಿ ಹೋರಟೇಬಿಡುತ್ತಾರೆ ಮೋದಿಜಿ!!

ಶಾಲೆ ಕಾಲೇಜು ಆಫೀಸುಗಳೊಳಗೂ
ಅಧಿಕಾರಿಗಳೆಂಬುವವರ ಕತ್ತಲೆಕೋಣೆಗಳೊಳಗೂ
ಜೀವ ಉಳಿಸುವ ಜೀವಾಲಯದೊಳಗೂ
ಭ್ರಷ್ಟರಾಜಕೀಯ ಅತ್ಯಾಚಾರಗಳ ದುರಂತ ಸರಮಾಲೆ
ದೇಶದ ರೈಲು ಹಳಿತಪ್ಪಿ ಎಲ್ಲೆಲ್ಲೊ ಸುತ್ತುತ್ತಿದೆ
ಹಳಿಗುಂಟ ಹಾದಿಗುಂಟ ಕಸವೋ ಕಸ ಮೋದಿಜಿ!

ಎಲುಬಿಲ್ಲದ ನಾಲಿಗೆಗಳ ಶಬ್ದಮಾಲಿನ್ಯ ಭ್ರಷ್ಟರಮಾಲಿನ್ಯ
ಅತ್ಯಾಚಾರಮಾಲಿನ್ಯ ಜಾತಿಮಾಲಿನ್ಯ ಗೂಡಿಸಿ ಗುಂಡಿಗೆ ಹಾಕಲು
ನಿಮ್ಮ ಪೊರಕೆಗಳು ಬೇಕಾಗಿವೆ ಮೋದಿಜಿ.

ಎಲ್ಲೆಲ್ಲೂ ಎಲ್ಲದಕ್ಕೂ ಬರೀ ವಾದ ಪ್ರತಿವಾದ
ಶಾಂತಿ ನೆಮ್ಮದಿ ಹಾಳುಗೆಡವಿ
ತಾವೂ ಹಾಳಾಗುವ ದ್ವಂದಿಗಳ ಮುಖವಾಡ
ಕಳಚುವ ವಾಸ್ತವದ ಅರಿವು ಗ್ರಹಿಸುವ
ಶುದ್ಧ ಸ್ವಚ್ಛ ಕಳಕಳಿಯ ಬೀಜಗಳು ಬಿತ್ತುವ
ಪೊರಕೆಯಂಥ ಮಾದರಿಗಳು ಬೇಕಾಗಿವೆ ಮೋದಿಜಿ
ದೇಶವೆಂಬ ಮನಸು; ಮನಸೆಂಬ ದೇಶ
ನಮ್ಮೊಳಗೆ ಅನುಗಾಲವೂ ಉಳಿಯಲು
ಮಾದರಿಯ ಪೊರಕೆಗಳು ಬೇಕೆ ಬೇಕು ಮೋದಿಜಿ
ಮಾದರಿಯ ಪೊರಕೆಗಳು ಬೇಕೇ ಬೇಕು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...