Home / ಕವನ / ಕವಿತೆ / ಸ್ವಚ್ಛ ಭಾರತ್

ಸ್ವಚ್ಛ ಭಾರತ್

ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಯಾನಕೆ
ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಮಾನಕೆ
ಕೈಜೋಡಿಸಿದೆವು ಪ್ರಮಾಣವಚನ ಮಾಡಿಸಿದಿರಿ ಬೀದಿಗಿಳಿಸಿದಿರಿ
ಆದ ಸಂತೋಷ ಅಷ್ಟಿಷ್ಟಲ್ಲ
ಆರೋಗ್ಯವೇ ಭಾಗ್ಯ: ಸರ್ವಂ ಸುಂದರಂ ಅಲ್ಲವೆ ಮತ್ತೆ
ಕಿವಿಗಳು ಕೇಳಿಯೇ ಪಾವನವಾದವು
ಕಣ್ಣುಗಳು ನೋಡಿಯೇ ಬಿಡಲು ಹಟಕ್ಕೆ ಬಿದ್ದವು
ದೇಶಭಕ್ತರೆಲ್ಲ ಪೊರಕೆ ಹಿಡಿದರು

ಫಳಫಳ ಹೊಳೆವ ದೊಡ್ಡದೊಡ್ಡ ಗಾಜು ಕಿಟಕಿಗಳ
ಆಫೀಸುಗಳ ತಾರುತಂತಿ ತಗಡು ಬೋರ್‍ಡು
ನಟ್ ಬೋಲ್ಟ್‌ಗಳ ಸಾಪ್ಟವೇರ್ ಕಸವೆಲ್ಲ
ಅವರವರ ಗೇಟ್ ಮುಂದೆ ಬಿದ್ದಿವೆ-
ಸ್ವಚ್ಛ ಭಾರತದ ಪೊರಕೆಯವರನು ನೋಡಿ
ಧೂಳ ಜಾಡಿಸಿ ಕಾರಿನ ಕಿಟಕಿ ಏರಿಸುತ
ಹೊರಟೇಬಿಡುವರು ಆರೆಂಟು ಅಂಕಿಯ
ಹಣಪಡೆವ ಜಾಣರು ಮೋದಿಜಿ!

ಪುಣ್ಯಕ್ಷೇತ್ರಗಳ ಒಳಗೆ ಕಣ್ಬಿಟ್ಟ ದೇವನೆದುರು
ಧೂಪ ದೀಪ ಹೂಹಾರ ಹಣ್ಣು ಪ್ರಸಾದ
ಮನಸಿಗೆ ತೃಪ್ತಿ ದೇವರ ದರುಶನ ಪಡೆದ ಭಾಗ್ಯ
ಈಚೆಗೆ ಬಂದದ್ದೆ ಆಚೀಚೆ ಕಣ್ಣಾಡಿಸಿದ್ದೇ ಕ್ಷಣ
ಎಲ್ಲೆಲ್ಲೂ ಕೊಳೆತ ಎಲೆಹೂವು ಹಣ್ಣುಗಳ ಚಿಲ್ಲಾಪಿಲ್ಲಿ
ದನಗಳ ಸಗಣಿ ಗಂಜಲಿನ ಗಬ್ಬುವಾಸನೆ ಪಿಚಿಪಿಚಿ.
ಸ್ವಚ್ಛ ಭಾರತ ಹುರುಪಿನ ಪೊರಕೆಯವರು
ಮುಂದಾದರೆ ಅವರ ಜಾತಿಮತ ಬಣ್ಣ ಕೆದಕಿ
ನಾಲ್ಕೈದು ಬೈಗುಳ ಬಯ್ದು
ಮೂಗು ಮುಚ್ಚಿ ಕಾರೇರಿ ಹೋರಟೇಬಿಡುತ್ತಾರೆ ಮೋದಿಜಿ!!

ಶಾಲೆ ಕಾಲೇಜು ಆಫೀಸುಗಳೊಳಗೂ
ಅಧಿಕಾರಿಗಳೆಂಬುವವರ ಕತ್ತಲೆಕೋಣೆಗಳೊಳಗೂ
ಜೀವ ಉಳಿಸುವ ಜೀವಾಲಯದೊಳಗೂ
ಭ್ರಷ್ಟರಾಜಕೀಯ ಅತ್ಯಾಚಾರಗಳ ದುರಂತ ಸರಮಾಲೆ
ದೇಶದ ರೈಲು ಹಳಿತಪ್ಪಿ ಎಲ್ಲೆಲ್ಲೊ ಸುತ್ತುತ್ತಿದೆ
ಹಳಿಗುಂಟ ಹಾದಿಗುಂಟ ಕಸವೋ ಕಸ ಮೋದಿಜಿ!

ಎಲುಬಿಲ್ಲದ ನಾಲಿಗೆಗಳ ಶಬ್ದಮಾಲಿನ್ಯ ಭ್ರಷ್ಟರಮಾಲಿನ್ಯ
ಅತ್ಯಾಚಾರಮಾಲಿನ್ಯ ಜಾತಿಮಾಲಿನ್ಯ ಗೂಡಿಸಿ ಗುಂಡಿಗೆ ಹಾಕಲು
ನಿಮ್ಮ ಪೊರಕೆಗಳು ಬೇಕಾಗಿವೆ ಮೋದಿಜಿ.

ಎಲ್ಲೆಲ್ಲೂ ಎಲ್ಲದಕ್ಕೂ ಬರೀ ವಾದ ಪ್ರತಿವಾದ
ಶಾಂತಿ ನೆಮ್ಮದಿ ಹಾಳುಗೆಡವಿ
ತಾವೂ ಹಾಳಾಗುವ ದ್ವಂದಿಗಳ ಮುಖವಾಡ
ಕಳಚುವ ವಾಸ್ತವದ ಅರಿವು ಗ್ರಹಿಸುವ
ಶುದ್ಧ ಸ್ವಚ್ಛ ಕಳಕಳಿಯ ಬೀಜಗಳು ಬಿತ್ತುವ
ಪೊರಕೆಯಂಥ ಮಾದರಿಗಳು ಬೇಕಾಗಿವೆ ಮೋದಿಜಿ
ದೇಶವೆಂಬ ಮನಸು; ಮನಸೆಂಬ ದೇಶ
ನಮ್ಮೊಳಗೆ ಅನುಗಾಲವೂ ಉಳಿಯಲು
ಮಾದರಿಯ ಪೊರಕೆಗಳು ಬೇಕೆ ಬೇಕು ಮೋದಿಜಿ
ಮಾದರಿಯ ಪೊರಕೆಗಳು ಬೇಕೇ ಬೇಕು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...