Home / ಕವನ / ಕವಿತೆ / ಸ್ವಚ್ಛ ಭಾರತ್

ಸ್ವಚ್ಛ ಭಾರತ್

ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಯಾನಕೆ
ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಮಾನಕೆ
ಕೈಜೋಡಿಸಿದೆವು ಪ್ರಮಾಣವಚನ ಮಾಡಿಸಿದಿರಿ ಬೀದಿಗಿಳಿಸಿದಿರಿ
ಆದ ಸಂತೋಷ ಅಷ್ಟಿಷ್ಟಲ್ಲ
ಆರೋಗ್ಯವೇ ಭಾಗ್ಯ: ಸರ್ವಂ ಸುಂದರಂ ಅಲ್ಲವೆ ಮತ್ತೆ
ಕಿವಿಗಳು ಕೇಳಿಯೇ ಪಾವನವಾದವು
ಕಣ್ಣುಗಳು ನೋಡಿಯೇ ಬಿಡಲು ಹಟಕ್ಕೆ ಬಿದ್ದವು
ದೇಶಭಕ್ತರೆಲ್ಲ ಪೊರಕೆ ಹಿಡಿದರು

ಫಳಫಳ ಹೊಳೆವ ದೊಡ್ಡದೊಡ್ಡ ಗಾಜು ಕಿಟಕಿಗಳ
ಆಫೀಸುಗಳ ತಾರುತಂತಿ ತಗಡು ಬೋರ್‍ಡು
ನಟ್ ಬೋಲ್ಟ್‌ಗಳ ಸಾಪ್ಟವೇರ್ ಕಸವೆಲ್ಲ
ಅವರವರ ಗೇಟ್ ಮುಂದೆ ಬಿದ್ದಿವೆ-
ಸ್ವಚ್ಛ ಭಾರತದ ಪೊರಕೆಯವರನು ನೋಡಿ
ಧೂಳ ಜಾಡಿಸಿ ಕಾರಿನ ಕಿಟಕಿ ಏರಿಸುತ
ಹೊರಟೇಬಿಡುವರು ಆರೆಂಟು ಅಂಕಿಯ
ಹಣಪಡೆವ ಜಾಣರು ಮೋದಿಜಿ!

ಪುಣ್ಯಕ್ಷೇತ್ರಗಳ ಒಳಗೆ ಕಣ್ಬಿಟ್ಟ ದೇವನೆದುರು
ಧೂಪ ದೀಪ ಹೂಹಾರ ಹಣ್ಣು ಪ್ರಸಾದ
ಮನಸಿಗೆ ತೃಪ್ತಿ ದೇವರ ದರುಶನ ಪಡೆದ ಭಾಗ್ಯ
ಈಚೆಗೆ ಬಂದದ್ದೆ ಆಚೀಚೆ ಕಣ್ಣಾಡಿಸಿದ್ದೇ ಕ್ಷಣ
ಎಲ್ಲೆಲ್ಲೂ ಕೊಳೆತ ಎಲೆಹೂವು ಹಣ್ಣುಗಳ ಚಿಲ್ಲಾಪಿಲ್ಲಿ
ದನಗಳ ಸಗಣಿ ಗಂಜಲಿನ ಗಬ್ಬುವಾಸನೆ ಪಿಚಿಪಿಚಿ.
ಸ್ವಚ್ಛ ಭಾರತ ಹುರುಪಿನ ಪೊರಕೆಯವರು
ಮುಂದಾದರೆ ಅವರ ಜಾತಿಮತ ಬಣ್ಣ ಕೆದಕಿ
ನಾಲ್ಕೈದು ಬೈಗುಳ ಬಯ್ದು
ಮೂಗು ಮುಚ್ಚಿ ಕಾರೇರಿ ಹೋರಟೇಬಿಡುತ್ತಾರೆ ಮೋದಿಜಿ!!

ಶಾಲೆ ಕಾಲೇಜು ಆಫೀಸುಗಳೊಳಗೂ
ಅಧಿಕಾರಿಗಳೆಂಬುವವರ ಕತ್ತಲೆಕೋಣೆಗಳೊಳಗೂ
ಜೀವ ಉಳಿಸುವ ಜೀವಾಲಯದೊಳಗೂ
ಭ್ರಷ್ಟರಾಜಕೀಯ ಅತ್ಯಾಚಾರಗಳ ದುರಂತ ಸರಮಾಲೆ
ದೇಶದ ರೈಲು ಹಳಿತಪ್ಪಿ ಎಲ್ಲೆಲ್ಲೊ ಸುತ್ತುತ್ತಿದೆ
ಹಳಿಗುಂಟ ಹಾದಿಗುಂಟ ಕಸವೋ ಕಸ ಮೋದಿಜಿ!

ಎಲುಬಿಲ್ಲದ ನಾಲಿಗೆಗಳ ಶಬ್ದಮಾಲಿನ್ಯ ಭ್ರಷ್ಟರಮಾಲಿನ್ಯ
ಅತ್ಯಾಚಾರಮಾಲಿನ್ಯ ಜಾತಿಮಾಲಿನ್ಯ ಗೂಡಿಸಿ ಗುಂಡಿಗೆ ಹಾಕಲು
ನಿಮ್ಮ ಪೊರಕೆಗಳು ಬೇಕಾಗಿವೆ ಮೋದಿಜಿ.

ಎಲ್ಲೆಲ್ಲೂ ಎಲ್ಲದಕ್ಕೂ ಬರೀ ವಾದ ಪ್ರತಿವಾದ
ಶಾಂತಿ ನೆಮ್ಮದಿ ಹಾಳುಗೆಡವಿ
ತಾವೂ ಹಾಳಾಗುವ ದ್ವಂದಿಗಳ ಮುಖವಾಡ
ಕಳಚುವ ವಾಸ್ತವದ ಅರಿವು ಗ್ರಹಿಸುವ
ಶುದ್ಧ ಸ್ವಚ್ಛ ಕಳಕಳಿಯ ಬೀಜಗಳು ಬಿತ್ತುವ
ಪೊರಕೆಯಂಥ ಮಾದರಿಗಳು ಬೇಕಾಗಿವೆ ಮೋದಿಜಿ
ದೇಶವೆಂಬ ಮನಸು; ಮನಸೆಂಬ ದೇಶ
ನಮ್ಮೊಳಗೆ ಅನುಗಾಲವೂ ಉಳಿಯಲು
ಮಾದರಿಯ ಪೊರಕೆಗಳು ಬೇಕೆ ಬೇಕು ಮೋದಿಜಿ
ಮಾದರಿಯ ಪೊರಕೆಗಳು ಬೇಕೇ ಬೇಕು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...