Home / ಕವನ / ಕವಿತೆ / ನಿರ್‍ದಯಿಗಳು

ನಿರ್‍ದಯಿಗಳು

ಹೆಣ್ಣು ಹುಟ್ಟಿತೆಂದು ಮುಖ ಇಳಿಸಿದರು
ಸಂತೋಷದ ತಮಟೆ ಬಾರಿಸಲಿಲ್ಲ
ಸಮಾಧಾನಕ್ಕೆ ಮನೆಯಲಕ್ಷ್ಮಿ ಎಂದರೆ ಹೊರತಾಗಿ
ಖರ್‍ಚು ಜಾಸ್ತಿ ಎಂದು ನೊಂದರು

ರ್‍ಯಾಂಕ್ ಪಡೆದಳೆಂದು ಬೀಗಿ
ತಮಟೆ ಬಾರಿಸಲಿಲ್ಲ
ಹೆಚ್ಚು ಓದಿದವನನ್ನು ಹುಡುಕಬೇಕಲ್ಲ
ಬೆವರಿಳಿಸತೊಡಗಿದರು.

ಮಗಳ ಮದುವೆ ಎಂದೇನು
ಸಂಭ್ರಮದ ತಮಟೆ ಬಾರಿಸಲಿಲ್ಲ
ವಸ್ತ್ರ ಒಡವೆ ಹಾಕಿ ಅಕ್ಷತೆ ಉದುರಿಸಿ
ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆಂದು
ಆರತಿ ಎತ್ತಿದರು.


ಮಗನನ್ನು ಕಸಿದುಕೊಂಡಳೆಂದು
ಉರಿಯ ತಮಟೆ ಬಾರಿಸಿದರಿಲ್ಲಿ
ಗಳಿಸಿದ್ದೆಲ್ಲ ಇವಳ ಬೆಡಗು ಬಿನ್ನಾಣಕ್ಕೆಂದು
ಚುಚ್ಚಿದರು ಕಣ್ಣೀರು ಹರಿಸಿದರು.

ಬಂದವಳು ಹೆಣ್ಣೆ ಹಡೆದಳೆಂದು
ವಂಶೋದ್ಧಾರಕರಿವರು ತಮಟೆ ಬಾರಿಸಿದರು
ಗಂಡುಮಗಳ ಹೆರಲಾರದ ಬಂಜೆ
ಎಂದೇ ಬಿರುದುಕೊಟ್ಟು ಬೆಂಕಿಹಚ್ಚಿದರು.
ಬೈಕು ಕಾರು ಓಡಿಸುವ ಗಂಡುಬೀರಿ
ಮನೆಯವರ ಸೇವೆಮಾಡದ ಸೊಕ್ಕಿನಾಕೆ
ಎಲ್ಲೆಲ್ಲೂ ತಮಟೆ ಬಾರಿಸುವವರು
ಅಡುಗೆಮನೆಯ ಕಟಕಟೆಯಲ್ಲಿ ನಿಲ್ಲಿಸಿ
ನೂರುಬೈಗುಳ ಹೂವೇರಿಸುತ
ಮನೆಮುರುಕಿ ಹಣೆಪಟ್ಟಿ ಕಟ್ಟುವರು

ತನ್ನದೇ ಕರುಳಿನ ಕುಡಿಯ ಹೆಮ್ಮೆಗೆ
ತಮಟೆ ಬಾರಿಸದ ಅಪ್ಪ ಅಮ್ಮ
ಕ್ಷಣಕ್ಷಣಕೂ ಅಪರಾಧಿ ಇವಳೆಂದು
ತಮಟೆ ಬಾರಿಸುವ ಮಾವ ಅತ್ತೆ


ಪ್ರೀತಿವಾತ್ಸಲ್ಯದ ಹೆಣ್ಣು ಜೀವ
ಸ್ವಾರ್‍ಥಿಗಳ ಕೈಗೊಂಬೆಯಾಗಿ
ನೊಂದು ಬೆಂದು ತಳಮಳಿಸಿ
ಒಂದೊಮ್ಮೆ ಅರ್ಥೈಸಿಕೊಳ್ಳದ
ಕಿವುಡ ನಾಟಕಕಾರರನು ದಾಟಿ
ಮರುಭೂಮಿಯಾಗಿಯೋ
ಜಲಪಾತವಾಗಿಯೋ
ಹೀಗೆ ಕಣ್ಮರೆಯಾಗುವಳು

ಆದರೂ ಮತ್ತೆ ಮತ್ತೆ ತಮಟೆಗಳು
ಹಲಗೆ ಕಹಳೆಯಾಗಿ ಬಾರಿಸುತ್ತಲೇ ಇರುತ್ತವೆ
ನಿರ್‍ದಯಿಗಳ ಬಾಯಲ್ಲಿ
ಇವಳು ಹೀಗೆ ಹಾಗೆ ಎಂದಾಗಲಿ
ಹೆಣ್ಣುಜೀವ ಮುತ್ತೈದೆಸಾವು ಎಂದಾಗಲಿ….
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...