Home / ಕವನ / ಕವಿತೆ / ನಿರ್‍ದಯಿಗಳು

ನಿರ್‍ದಯಿಗಳು

ಹೆಣ್ಣು ಹುಟ್ಟಿತೆಂದು ಮುಖ ಇಳಿಸಿದರು
ಸಂತೋಷದ ತಮಟೆ ಬಾರಿಸಲಿಲ್ಲ
ಸಮಾಧಾನಕ್ಕೆ ಮನೆಯಲಕ್ಷ್ಮಿ ಎಂದರೆ ಹೊರತಾಗಿ
ಖರ್‍ಚು ಜಾಸ್ತಿ ಎಂದು ನೊಂದರು

ರ್‍ಯಾಂಕ್ ಪಡೆದಳೆಂದು ಬೀಗಿ
ತಮಟೆ ಬಾರಿಸಲಿಲ್ಲ
ಹೆಚ್ಚು ಓದಿದವನನ್ನು ಹುಡುಕಬೇಕಲ್ಲ
ಬೆವರಿಳಿಸತೊಡಗಿದರು.

ಮಗಳ ಮದುವೆ ಎಂದೇನು
ಸಂಭ್ರಮದ ತಮಟೆ ಬಾರಿಸಲಿಲ್ಲ
ವಸ್ತ್ರ ಒಡವೆ ಹಾಕಿ ಅಕ್ಷತೆ ಉದುರಿಸಿ
ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆಂದು
ಆರತಿ ಎತ್ತಿದರು.


ಮಗನನ್ನು ಕಸಿದುಕೊಂಡಳೆಂದು
ಉರಿಯ ತಮಟೆ ಬಾರಿಸಿದರಿಲ್ಲಿ
ಗಳಿಸಿದ್ದೆಲ್ಲ ಇವಳ ಬೆಡಗು ಬಿನ್ನಾಣಕ್ಕೆಂದು
ಚುಚ್ಚಿದರು ಕಣ್ಣೀರು ಹರಿಸಿದರು.

ಬಂದವಳು ಹೆಣ್ಣೆ ಹಡೆದಳೆಂದು
ವಂಶೋದ್ಧಾರಕರಿವರು ತಮಟೆ ಬಾರಿಸಿದರು
ಗಂಡುಮಗಳ ಹೆರಲಾರದ ಬಂಜೆ
ಎಂದೇ ಬಿರುದುಕೊಟ್ಟು ಬೆಂಕಿಹಚ್ಚಿದರು.
ಬೈಕು ಕಾರು ಓಡಿಸುವ ಗಂಡುಬೀರಿ
ಮನೆಯವರ ಸೇವೆಮಾಡದ ಸೊಕ್ಕಿನಾಕೆ
ಎಲ್ಲೆಲ್ಲೂ ತಮಟೆ ಬಾರಿಸುವವರು
ಅಡುಗೆಮನೆಯ ಕಟಕಟೆಯಲ್ಲಿ ನಿಲ್ಲಿಸಿ
ನೂರುಬೈಗುಳ ಹೂವೇರಿಸುತ
ಮನೆಮುರುಕಿ ಹಣೆಪಟ್ಟಿ ಕಟ್ಟುವರು

ತನ್ನದೇ ಕರುಳಿನ ಕುಡಿಯ ಹೆಮ್ಮೆಗೆ
ತಮಟೆ ಬಾರಿಸದ ಅಪ್ಪ ಅಮ್ಮ
ಕ್ಷಣಕ್ಷಣಕೂ ಅಪರಾಧಿ ಇವಳೆಂದು
ತಮಟೆ ಬಾರಿಸುವ ಮಾವ ಅತ್ತೆ


ಪ್ರೀತಿವಾತ್ಸಲ್ಯದ ಹೆಣ್ಣು ಜೀವ
ಸ್ವಾರ್‍ಥಿಗಳ ಕೈಗೊಂಬೆಯಾಗಿ
ನೊಂದು ಬೆಂದು ತಳಮಳಿಸಿ
ಒಂದೊಮ್ಮೆ ಅರ್ಥೈಸಿಕೊಳ್ಳದ
ಕಿವುಡ ನಾಟಕಕಾರರನು ದಾಟಿ
ಮರುಭೂಮಿಯಾಗಿಯೋ
ಜಲಪಾತವಾಗಿಯೋ
ಹೀಗೆ ಕಣ್ಮರೆಯಾಗುವಳು

ಆದರೂ ಮತ್ತೆ ಮತ್ತೆ ತಮಟೆಗಳು
ಹಲಗೆ ಕಹಳೆಯಾಗಿ ಬಾರಿಸುತ್ತಲೇ ಇರುತ್ತವೆ
ನಿರ್‍ದಯಿಗಳ ಬಾಯಲ್ಲಿ
ಇವಳು ಹೀಗೆ ಹಾಗೆ ಎಂದಾಗಲಿ
ಹೆಣ್ಣುಜೀವ ಮುತ್ತೈದೆಸಾವು ಎಂದಾಗಲಿ….
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...