Home / ಲೇಖನ / ಇತರೆ / ಡಾ. ವಿ. ನಾಗರಾಜುರವರು

ಡಾ. ವಿ. ನಾಗರಾಜುರವರು

ಅಂದು- ಶಾಲೆಗೆ ಡಾ. ವಿ.ನಾಗರಾಜುರವರು ಆಗಮಿಸಿದ್ದರು. ಮಕ್ಕಳಿಗೆ ಆರೋಗ್ಯ ಭಾಗ್ಯದ ಬಗೆಗೆ ವಿವರಿಸಿದರು.

ಅವರು ಹೇಳುವುದ ಕೇಳುತ್ತಾ ಕುಳಿತ ನಮಗೆಲ್ಲ ಐದಾರು ದಶಕಗಳ ಕೆಳಗೆ ನಾವೆಲ್ಲ ಕಡ್ಡಾಯವಾಗಿ ನಿತ್ಯ ಹಾಲು-ಮೊಸರು-ಮಜ್ಜಿಗೆ-ಬೆಣ್ಣೆ-ಗಿಣ್ಣು-ತುಪ್ಪ ಉಂಡು ಬೆಳದ ಆ ಸವಿಸವಿ… ದಿನಗಳು ಕಣ್ಣ ಮುಂದೆ ಮೆರವಣಿಗೆ ಹೊರಟವು. ಪ್ರತಿಯೊಬ್ಬರ ಮನೆಮನೆಗಳಲ್ಲಿ ಹತ್ತಾರು ದನಕರು ಕುರಿಮೇಕೆಗಳ ಹಿಂಡು ಹಿಂಡು…

ಡಾ. ವಿ.ನಾಗರಾಜು ಅವರ ಅನುಭವಾಮೃತವನ್ನು ಅಂದು ಅಲ್ಲಿದ್ದವರಿಗೆಲ್ಲ ಉಣಬಡಿಸತೊಡಗಿದರು. ನೀವು ಏನೆಲ್ಲ ಎಷ್ಟೆಲ್ಲ ಸೇವಿಸಿದರೂ ಕೊನೆಗೆ ಮಜ್ಜಿಗೆಯನ್ನು ಕಡ್ಡಾಯವಾಗಿ ಮೂರು ಹೊತ್ತು ಸೇವಿಸುವುದನ್ನು ಮರೆಯಬಾರದೆಂದು ಒತ್ತಿ ಹೇಳಿದರು. ಕಾರಣ- ಮಜ್ಜಿಗೆಯಲ್ಲಿ ಏನೆಲ್ಲ ಪ್ರೋಟೀನ್, ಪೊಟ್ಯಾಶಿಯಂ, ‘ಬಿ’ ಕಾಂಪ್ಲೆಕ್ಸ್ ಇತ್ಯಾದಿ ವಿಟಮಿನ್‌ಗಳ ಗಣಿಯಾಗಿದೆ. ತೂಕ ಇಳಿಸಲು ಮಜ್ಜಿಗೆ ಔಷಧಿಯ ಹಾಗೆ ಕೆಲಸ ಮಾಡುವುದು. ಬಾಯಿ ವಾಸನೆಯನ್ನು, ತೂಕವನ್ನು, ತಡೆಗಟ್ಟುವುದು, ಅಜೀರ್ಣವನ್ನು ನಿವಾರಿಸುವುದು. ಅಲರ್ಜಿಗೆ ರಾಮಬಾಣ, ಕರುಳು ಬೇನೆ, ಭೇದಿ, ಆಮಶಂಕೆ, ಗ್ಯಾಸ್, ಉರಿ, ಉಬ್ಬರ ವಿಳಿತ ಇತ್ಯಾದಿಗೆ ಮಜ್ಜಿಗೆ ಸೇವನೆ ಹೇಳಿಮಾಡಿಸಿದ ಪಾನೀಯ. ಜೀರ್ಣಕ್ರಿಯೆಗೆ ಸಹಕಾರಿ.

ಮಜ್ಜಿಗೆಯನ್ನು ಯಥೇಚ್ಛವಾಗಿ ಸೇವಿಸುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳಿಲ್ಲ ಎಂಬುದನ್ನು ಆರೋಗ್ಯ ಪರಿಣಿತರು ಈಗಾಗಲೇ ರುಜುವಾತು ಪಡಿಸಿರುವುದನ್ನು ಅವರು ಒತ್ತಿ‌ಒತ್ತಿ ಹೇಳಿದರು. ಅವರ ಮಾತೇ ಹಾಗೇ ಹಾಲು ಜೇನಿನಾ ಹಾಗೇ ಕಲ್ಲು ಸಕ್ಕರೆಯಾ ಹಾಗೇ.. ಹೌದೌದು ಎನ್ನುವ ಹಾಗೇ ತುಂಬ ಸೊಗಸಾಗಿ ಹೇಳುತ್ತಾ ಹೋದರು…

ಮಜ್ಜಿಗೆಗೆ ಮಸಾಲೆ ಹಾಕುವುದು ಒಗ್ಗರಣೆ ಕೊಡುವುದು ಹಸಿಮೆಣಸಿನಕಾಯಿ ಸೇರಿಸುವುದು ಸಕ್ಕರೆ ಬೆಲ್ಲ ಇತ್ಯಾದಿ ಏನೆಲ್ಲ ಸೇರಿಸಿ ಕುದಿಸಿ ಕುಡಿಯುವುದೂ… ಇದೆಲ್ಲ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಡ್ಡ ಪರಿಣಾಮಕ್ಕೆ ರಹದಾರಿಗಳು…….. ಮಜ್ಜಿಗೆಯಲ್ಲಿ ಕಣ್ಣಿಗೆ ಕಾಣದಂಥ ಬ್ಯಾಕ್ಟಿರಿಯಾಗಳಿರುತ್ತವೆ! ಇವು ಆರೋಗ್ಯಕ್ಕೆ ಬೇಕೇ ಬೇಕು…! ಬೇಕಾದ ಬ್ಯಾಕ್ಟಿರಿಯಾಗಳು…. ಇವು ವಿನಾಶವಾಗದಂತೆ ಎಚ್ಚರಿಕೆ ವಹಿಸುವುದು ಎಲ್ಲರಿಗೆ ತಿಳಿದಿರಲೇಬೇಕು! ಇವನ್ನು ನಾಶ ಮಾಡಿಕೊಂಡು ಅಂದಚೆಂದಕ್ಕೆ ಮಂಜುಗಡ್ಡೆ ಹಾಕಿ ಕುಡಿಯುವುದರಿಂದ ಆರೋಗ್ಯದ ಮೇಲೆ ಅನಗತ್ಯವಾದ ಕೆಟ್ಟ ಪರಿಣಾಮ ಬೀರುವುದೆಂದು ಡಾಕ್ಟರ್ ವಿ. ನಾಗರಾಜು ಅವರು ವಿವರಿಸುತ್ತಾ ನಿಂತರು.

ಕಾಲ ಸರಿದಿದ್ದೇ ಗೊತ್ತಾಗಲಿಲ್ಲ. ಅಲ್ಲಿದ್ದ ಮಕ್ಕಳೇನು… ಶಿಕ್ಷಕರೆಲ್ಲ… ನಾವೆಲ್ಲ ಕೇಳಿ ಬಲು ಸಂಭ್ರಮಿಸಿದೆವು…. ಅವರಿಗೆ ಶಾಲಾವತಿಯಿಂದ ಸನ್ಮಾನಿಸಿದರು.

ಅಲ್ಲಿಗೆ ಅಂದಿಗೆ ‘ಜ್ಞಾನ ವಿಜ್ಞಾನ’ ಮಾಲಿಕೆಯ ಉಪನ್ಯಾಸ ಮುಕ್ತಾಯಗೊಂಡಿತು.

ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.

ಡಾ. ವಿ.ನಾಗರಾಜು ಅವರು ಮಕ್ಕಳತ್ತ ಕೈಬೀಸಿ ಖುಷಿಲಿ ಶಾಲೆಯಿಂದ ನಿರ್ಗಮಿಸಿದರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...