Home / ಲೇಖನ / ಇತರೆ / ಡಾ. ವಿ. ನಾಗರಾಜುರವರು

ಡಾ. ವಿ. ನಾಗರಾಜುರವರು

ಅಂದು- ಶಾಲೆಗೆ ಡಾ. ವಿ.ನಾಗರಾಜುರವರು ಆಗಮಿಸಿದ್ದರು. ಮಕ್ಕಳಿಗೆ ಆರೋಗ್ಯ ಭಾಗ್ಯದ ಬಗೆಗೆ ವಿವರಿಸಿದರು.

ಅವರು ಹೇಳುವುದ ಕೇಳುತ್ತಾ ಕುಳಿತ ನಮಗೆಲ್ಲ ಐದಾರು ದಶಕಗಳ ಕೆಳಗೆ ನಾವೆಲ್ಲ ಕಡ್ಡಾಯವಾಗಿ ನಿತ್ಯ ಹಾಲು-ಮೊಸರು-ಮಜ್ಜಿಗೆ-ಬೆಣ್ಣೆ-ಗಿಣ್ಣು-ತುಪ್ಪ ಉಂಡು ಬೆಳದ ಆ ಸವಿಸವಿ… ದಿನಗಳು ಕಣ್ಣ ಮುಂದೆ ಮೆರವಣಿಗೆ ಹೊರಟವು. ಪ್ರತಿಯೊಬ್ಬರ ಮನೆಮನೆಗಳಲ್ಲಿ ಹತ್ತಾರು ದನಕರು ಕುರಿಮೇಕೆಗಳ ಹಿಂಡು ಹಿಂಡು…

ಡಾ. ವಿ.ನಾಗರಾಜು ಅವರ ಅನುಭವಾಮೃತವನ್ನು ಅಂದು ಅಲ್ಲಿದ್ದವರಿಗೆಲ್ಲ ಉಣಬಡಿಸತೊಡಗಿದರು. ನೀವು ಏನೆಲ್ಲ ಎಷ್ಟೆಲ್ಲ ಸೇವಿಸಿದರೂ ಕೊನೆಗೆ ಮಜ್ಜಿಗೆಯನ್ನು ಕಡ್ಡಾಯವಾಗಿ ಮೂರು ಹೊತ್ತು ಸೇವಿಸುವುದನ್ನು ಮರೆಯಬಾರದೆಂದು ಒತ್ತಿ ಹೇಳಿದರು. ಕಾರಣ- ಮಜ್ಜಿಗೆಯಲ್ಲಿ ಏನೆಲ್ಲ ಪ್ರೋಟೀನ್, ಪೊಟ್ಯಾಶಿಯಂ, ‘ಬಿ’ ಕಾಂಪ್ಲೆಕ್ಸ್ ಇತ್ಯಾದಿ ವಿಟಮಿನ್‌ಗಳ ಗಣಿಯಾಗಿದೆ. ತೂಕ ಇಳಿಸಲು ಮಜ್ಜಿಗೆ ಔಷಧಿಯ ಹಾಗೆ ಕೆಲಸ ಮಾಡುವುದು. ಬಾಯಿ ವಾಸನೆಯನ್ನು, ತೂಕವನ್ನು, ತಡೆಗಟ್ಟುವುದು, ಅಜೀರ್ಣವನ್ನು ನಿವಾರಿಸುವುದು. ಅಲರ್ಜಿಗೆ ರಾಮಬಾಣ, ಕರುಳು ಬೇನೆ, ಭೇದಿ, ಆಮಶಂಕೆ, ಗ್ಯಾಸ್, ಉರಿ, ಉಬ್ಬರ ವಿಳಿತ ಇತ್ಯಾದಿಗೆ ಮಜ್ಜಿಗೆ ಸೇವನೆ ಹೇಳಿಮಾಡಿಸಿದ ಪಾನೀಯ. ಜೀರ್ಣಕ್ರಿಯೆಗೆ ಸಹಕಾರಿ.

ಮಜ್ಜಿಗೆಯನ್ನು ಯಥೇಚ್ಛವಾಗಿ ಸೇವಿಸುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳಿಲ್ಲ ಎಂಬುದನ್ನು ಆರೋಗ್ಯ ಪರಿಣಿತರು ಈಗಾಗಲೇ ರುಜುವಾತು ಪಡಿಸಿರುವುದನ್ನು ಅವರು ಒತ್ತಿ‌ಒತ್ತಿ ಹೇಳಿದರು. ಅವರ ಮಾತೇ ಹಾಗೇ ಹಾಲು ಜೇನಿನಾ ಹಾಗೇ ಕಲ್ಲು ಸಕ್ಕರೆಯಾ ಹಾಗೇ.. ಹೌದೌದು ಎನ್ನುವ ಹಾಗೇ ತುಂಬ ಸೊಗಸಾಗಿ ಹೇಳುತ್ತಾ ಹೋದರು…

ಮಜ್ಜಿಗೆಗೆ ಮಸಾಲೆ ಹಾಕುವುದು ಒಗ್ಗರಣೆ ಕೊಡುವುದು ಹಸಿಮೆಣಸಿನಕಾಯಿ ಸೇರಿಸುವುದು ಸಕ್ಕರೆ ಬೆಲ್ಲ ಇತ್ಯಾದಿ ಏನೆಲ್ಲ ಸೇರಿಸಿ ಕುದಿಸಿ ಕುಡಿಯುವುದೂ… ಇದೆಲ್ಲ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಡ್ಡ ಪರಿಣಾಮಕ್ಕೆ ರಹದಾರಿಗಳು…….. ಮಜ್ಜಿಗೆಯಲ್ಲಿ ಕಣ್ಣಿಗೆ ಕಾಣದಂಥ ಬ್ಯಾಕ್ಟಿರಿಯಾಗಳಿರುತ್ತವೆ! ಇವು ಆರೋಗ್ಯಕ್ಕೆ ಬೇಕೇ ಬೇಕು…! ಬೇಕಾದ ಬ್ಯಾಕ್ಟಿರಿಯಾಗಳು…. ಇವು ವಿನಾಶವಾಗದಂತೆ ಎಚ್ಚರಿಕೆ ವಹಿಸುವುದು ಎಲ್ಲರಿಗೆ ತಿಳಿದಿರಲೇಬೇಕು! ಇವನ್ನು ನಾಶ ಮಾಡಿಕೊಂಡು ಅಂದಚೆಂದಕ್ಕೆ ಮಂಜುಗಡ್ಡೆ ಹಾಕಿ ಕುಡಿಯುವುದರಿಂದ ಆರೋಗ್ಯದ ಮೇಲೆ ಅನಗತ್ಯವಾದ ಕೆಟ್ಟ ಪರಿಣಾಮ ಬೀರುವುದೆಂದು ಡಾಕ್ಟರ್ ವಿ. ನಾಗರಾಜು ಅವರು ವಿವರಿಸುತ್ತಾ ನಿಂತರು.

ಕಾಲ ಸರಿದಿದ್ದೇ ಗೊತ್ತಾಗಲಿಲ್ಲ. ಅಲ್ಲಿದ್ದ ಮಕ್ಕಳೇನು… ಶಿಕ್ಷಕರೆಲ್ಲ… ನಾವೆಲ್ಲ ಕೇಳಿ ಬಲು ಸಂಭ್ರಮಿಸಿದೆವು…. ಅವರಿಗೆ ಶಾಲಾವತಿಯಿಂದ ಸನ್ಮಾನಿಸಿದರು.

ಅಲ್ಲಿಗೆ ಅಂದಿಗೆ ‘ಜ್ಞಾನ ವಿಜ್ಞಾನ’ ಮಾಲಿಕೆಯ ಉಪನ್ಯಾಸ ಮುಕ್ತಾಯಗೊಂಡಿತು.

ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.

ಡಾ. ವಿ.ನಾಗರಾಜು ಅವರು ಮಕ್ಕಳತ್ತ ಕೈಬೀಸಿ ಖುಷಿಲಿ ಶಾಲೆಯಿಂದ ನಿರ್ಗಮಿಸಿದರು.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...