Home / ಲೇಖನ / ವಿಜ್ಞಾನ / ವಾಟರ್‌ಬೈಕ್ ಕಥೆ

ವಾಟರ್‌ಬೈಕ್ ಕಥೆ

ಪೆಟ್ರೋಲ್- ಡಿಸೇಲ್ ಇತ್ಯಾದಿ ಬಳಕೆಯ ಬದಲು ಪರ್‍ಯಾಯ ಇಂಧನದ ಬಳಕೆಯ ಬಗ್ಗೆ ಸುದೀರ್‍ಘ ಚಿಂತನೆ ಸಂಶೋಧನೆಗಳು ನಿರಂತರವಾಗಿ ನಡೆಯುತ್ತಲೇ ಇದೆ.

ಹಣ ಉಳಿಸುವ ಆಲೋಚನೆ ಒಂದೆಡೆಯಾದರೆ, ಪೆಟ್ರೋಲ್ ಡಿಸೇಲ್ ಕೊರತೆಯನ್ನು ನೀಗಿಸುವ ಯೋಚನೆಯು ನಿರಂತರವಾಗಿ ಸಾಗುತ್ತಲೇ ಇದೆ.

ಆದರೆ… ಇಷ್ಟು ವರ್ಷಗಳಾದರೂ ಹರ್ಷದ ಸುದ್ದಿ ಮಾತ್ರ ಇಲ್ಲವೇ ಇಲ್ಲ ಎನಬೇಡಿ!

ಬ್ರೆಜಿಲ್‌ನ ಸಾವೋಪೌಲೊದ ರಿಕಾರ್‍ಡೋ ಜಿವಡೋ ನೀರಿನಿಂದ ಬೈಕ್ ಓಡಿಸುತ್ತಿದ್ದಾನೆ! ಬರೋಬ್ಬರಿ ಒಂದು ಲೀಟರ್ ನೀರಿಗೆ ಈತನಲ್ಲಿರುವ ಬೈಕ್ ೩೦೦ ಮೈಲಿ ಓಡುವುದು. ಇವರು ಇಂಧನದ ಬದಲು ನೀರನ್ನು ತುಂಬಿಸಿ ಬೈಕ್ ಓಡಿಸುವ ವೀಡಿಯೋವನ್ನು ಕೂಡಾ ಈಗಾಗಲೇ ಬಿಡುಗಡೆಗೊಳಿಸಿರುವರು.

ಇವರ ಬಳಿ ಇರುವ ಬೈಕಿನ ಹೆಸರು- ಟಿ ಪವರ್ ಎಚ್‌ಓ ಎಂದು. ಇದೊಂದು ಸುಂದರ ವಾಟರ್ ಬೈಕ್, ಅಂದರೆ ನೀರ ಮೇಲೆ ಚಲಿಸುವುದಲ್ಲ. ರಸ್ತೆ ಮೇಲೆ ಸಲಿಸಾಗಿ ಓಡುವುದು.

ಸಾವೋಪೌಲೊದ ರಿಕಾರ್‍ಡೊ ಅವರ ಸಂಶೋಧನೆಯ ಪ್ರಕಾರ ಬೈಕ್‌ನಲ್ಲಿ ಕಾರ್ ಬ್ಯಾಟರಿಯೊಂದನ್ನು ಅಳವಡಿಸಿರುವರು. ಇದರಿಂದಾಗಿ ಇದು ವಿದ್ಯುತ್ ಉತ್ಪಾದಿಸಿ ನೀರಿನ ಕಣಗಳಿಂದ ಜಲಜನಕ ಪ್ರತ್ಯೇಕಿಸುತ್ತದೆ. ಹೀಗಾಗಿ ದಹನ ಕ್ರಿಯೆಯುಂಟಾಗಿ, ಅದರಿಂದ ಬಿಡುಗಡೆಯಾಗುವ ಶಕ್ತಿಯಿಂದ ಬೈಕ್ ಓಡುವುದು!

ಅಬ್ಬಾ! ಇಂಧನ ಉಳಿತಾಯ ಹಾಗೂ ವಾಯುಮಾಲಿನ್ಯ ಇತ್ಯಾದಿ ತಪ್ಪಿಸಿ ಪರ್‍ಯಾಯ ಇಂಧನದ ವ್ಯವಸ್ಥೆಯಾಗುವ ಎಲ್ಲ ಮೂಲಗಳನ್ನು ಈಗಾಗಲೇ ಸಂಶೋಧಿಸಲಾಗಿದೆ.

ಆದ್ದರಿಂದ ಇವೆಲ್ಲ ಪರ್‍ಯಾಯ ಇಂಧನಗಳಾಗಿ ಎಲ್ಲ ಕಡೆ ಬಳಕೆಯಾದರೆ ಬಹಳಷ್ಟು ಸಮಸ್ಯೆಗಳು ಇಲ್ಲವಾಗಿ ಹೊಸಹೊಸ ಆವಿಷ್ಕಾರಗಳಿಗೆ ಎಡೆ ಮಾಡಿಕೊಡುತ್ತವೆಂದು ಭಾವಿಸಲಾಗಿದೆ.

ಅಂತೂ ಇಂತೂ ನಾವು ನೀವು ಕಾಯೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...