Home / ಲೇಖನ / ವಿಜ್ಞಾನ / ಸೊಳ್ಳೆಯ ಕತೆ

ಸೊಳ್ಳೆಯ ಕತೆ

ಸೊಳ್ಳೆ ಒಂದಾದರೂ ಅದರ ಅಡ್ಡ ಪರಿಣಾಮ ಹತ್ತಾರು. ಹೀಗಾದರೆ ಹೇಗೆಂದು ದೇಶ ವಿದೇಶದ ಜನ ತಲೆಗೆ ಕೈಹೊತ್ತು ಕುಳಿತು ಬಿಟ್ಟಿದ್ದಾರೆ.

ಸೊಳ್ಳೆಯಲ್ಲಿ ಹಲವು ಬಗೆ, ಕೆಲವು ವಿಷಕಾರಿ ಸೊಳ್ಳೆಗಳಿವೆಯೆಂದು ಸೊಳ್ಳೆ ಕಡಿತದಿಂದ ಚಿಕೂನ್ ಗುನ್ಯಾ ಡೆಂಗೆಯಂತ ತೀವ್ರತರದ ಜ್ವರ, ನೆಗಡಿ, ಕೆಮ್ಮು ಇತ್ಯಾದಿ ಕಾಣಿಸಿಕೊಳ್ಳವುದರಿಂದ ಅದನ್ನು ಕೇವಲ ನಿರ್ಲಕ್ಷಿಸುವಂತಿಲ್ಲ ಎಂದು ಲಂಡನ್ ವೈದ್ಯರು ಈಗಾಗಲೇ ದೃಢಪಡಿಸಿರುವರು.

ಸೊಳ್ಳೆ ಕಡಿತದಿಂದ ಕಣ್ಣಿನ ದೃಷ್ಟಿಯೂ ಕಳೆದು ಕೊಳ್ಳುವ ಅಪಾಯವಿದೆಯೊಂದು ಲಂಡನ್‌ಲ್ಲೊಂದು ಇಂತಹ ಪ್ರಕರಣವೊಂದು ಈಗಾಗಲೇ ವರದಿಯಾಗಿ ಇಡೀ ವಿಶ್ವವನ್ನೇ ಗಢಗಢ ನಡುಗಿಸಿರುವುದು.

ಹೌದು! ೬೯ ವರ್ಷದ ಲಂಡನ್ ಮಹಿಳೆಯೊಬ್ಬರು ರಜೆಯ ಪ್ರವಾಸದಲ್ಲಿ ಕೆರಿಬಿಯನ್ ರಾಷ್ಟ್ರಕ್ಕೆ ತೆರಳಿದ್ದಳು. ಅಲ್ಲಿ ಸೊಳ್ಳೆ ಕಡಿತದಿಂದ ಚಿಕೂನ್‌ಗುನ್ಯಾಗೆ ತುತ್ತಾಗಿ ಕಣ್ಣನ್ನೇ ಕಳೆದುಕೊಂಡಿದ್ದಾಳೆ!

೨೦೧೪ರಲ್ಲಿ ಕೆರಿಬಿಯನ್ ದ್ವೀಪ ಗ್ರೆನಡಾಗೆ ತೆರಳಿದ್ದ ಮಹಿಳೆಗೆ ಸೊಳ್ಳೆ ಕಡಿದಿವೆ. ಬಳಿಕ ಆಕೆಗೆ ಜ್ವರ, ಮಂಡಿ, ಮಣೆಕಟ್ಟುಗಳ ನೋವು, ಸುಸ್ತು ಕಾಡಲಾರಂಭಿಸಿದೆ. ಇದಾದ ಸ್ವಲ್ಪ ದಿನಗಳ ಬಳಿಕ ಬಲಗಣ್ಣಿನಲ್ಲಿ ದೃಷ್ಟಿದೋಷ ಕಾಣಿಸಿಕೊಂಡಿದೆ.

ಆಗಸ್ಟ್ ೨೦೧೫ ರಲ್ಲಿ ಸ್ವದೇಶಕ್ಕೆ ಹಿಂದಿರುಗಿದ ನಂತರ ಅವರ ಕಣ್ಣಿಗೆ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು! ವೈದ್ಯರ ಬಳಿಗೆ ಹೋದಾಗ ಇದು ಚಿಕೂನ್ ಗೂನ್ಯಾಗೆ ಜ್ವರದಿಂದ ಈ ದೋಷ ಕಾಣಿಸಿಕೊಂಡಿದೆಯೆಂದು ದೃಢಪಟ್ಟಿದೆ. ಚಿಕೂನ್‌ಗುನ್ಯಾಗ್ ತುತ್ತಾದವರು ಜೀವನ ಪರ್ಯಂತ ಕೆಲ ಸಮಸ್ಯೆಗಳಿಗೆ ಖಂಡಿತ ತುತ್ತಾಗುವುದುಂಟು. ಇದರಲ್ಲಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯೂ ದಟ್ಟವಾಗಿದೆಯೆಂದು ವೈದ್ಯರು ದೃಢಪಡಿಸಿರುವರು.

ಅಬ್ಬಾ! ಸೊಳ್ಳೆಗಳೆ… ಇನ್ನು ಬರುಬರುತ್ತಾ ಏನೆಲ್ಲಾ ಅನಾಹುತ ಮಾಡಬಲ್ಲವೆಂಬುದನ್ನು ಈಗಲೇ ಊಹಿಸುವುದು ಕಷ್ಟ ಸಾಧ್ಯವಾದರೂ ಸೊಳ್ಳೆಗಳಿಂದ ಬಲು ಎಚ್ಚರಿಕೆ ವಹಿಸುವುದೂ ಸಣ್ಣಪುಟ್ಟ ಮಕ್ಕಳನ್ನು ರಕ್ಷಿಸುವುದೂ ನಮ್ಮೆಲ್ಲರ ಕರ್ತವ್ಯಗಳಲ್ಲಿ ಒಂದು ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...