Home / ಲೇಖನ / ವಿಜ್ಞಾನ / ಸೊಳ್ಳೆಯ ಕತೆ

ಸೊಳ್ಳೆಯ ಕತೆ

ಸೊಳ್ಳೆ ಒಂದಾದರೂ ಅದರ ಅಡ್ಡ ಪರಿಣಾಮ ಹತ್ತಾರು. ಹೀಗಾದರೆ ಹೇಗೆಂದು ದೇಶ ವಿದೇಶದ ಜನ ತಲೆಗೆ ಕೈಹೊತ್ತು ಕುಳಿತು ಬಿಟ್ಟಿದ್ದಾರೆ.

ಸೊಳ್ಳೆಯಲ್ಲಿ ಹಲವು ಬಗೆ, ಕೆಲವು ವಿಷಕಾರಿ ಸೊಳ್ಳೆಗಳಿವೆಯೆಂದು ಸೊಳ್ಳೆ ಕಡಿತದಿಂದ ಚಿಕೂನ್ ಗುನ್ಯಾ ಡೆಂಗೆಯಂತ ತೀವ್ರತರದ ಜ್ವರ, ನೆಗಡಿ, ಕೆಮ್ಮು ಇತ್ಯಾದಿ ಕಾಣಿಸಿಕೊಳ್ಳವುದರಿಂದ ಅದನ್ನು ಕೇವಲ ನಿರ್ಲಕ್ಷಿಸುವಂತಿಲ್ಲ ಎಂದು ಲಂಡನ್ ವೈದ್ಯರು ಈಗಾಗಲೇ ದೃಢಪಡಿಸಿರುವರು.

ಸೊಳ್ಳೆ ಕಡಿತದಿಂದ ಕಣ್ಣಿನ ದೃಷ್ಟಿಯೂ ಕಳೆದು ಕೊಳ್ಳುವ ಅಪಾಯವಿದೆಯೊಂದು ಲಂಡನ್‌ಲ್ಲೊಂದು ಇಂತಹ ಪ್ರಕರಣವೊಂದು ಈಗಾಗಲೇ ವರದಿಯಾಗಿ ಇಡೀ ವಿಶ್ವವನ್ನೇ ಗಢಗಢ ನಡುಗಿಸಿರುವುದು.

ಹೌದು! ೬೯ ವರ್ಷದ ಲಂಡನ್ ಮಹಿಳೆಯೊಬ್ಬರು ರಜೆಯ ಪ್ರವಾಸದಲ್ಲಿ ಕೆರಿಬಿಯನ್ ರಾಷ್ಟ್ರಕ್ಕೆ ತೆರಳಿದ್ದಳು. ಅಲ್ಲಿ ಸೊಳ್ಳೆ ಕಡಿತದಿಂದ ಚಿಕೂನ್‌ಗುನ್ಯಾಗೆ ತುತ್ತಾಗಿ ಕಣ್ಣನ್ನೇ ಕಳೆದುಕೊಂಡಿದ್ದಾಳೆ!

೨೦೧೪ರಲ್ಲಿ ಕೆರಿಬಿಯನ್ ದ್ವೀಪ ಗ್ರೆನಡಾಗೆ ತೆರಳಿದ್ದ ಮಹಿಳೆಗೆ ಸೊಳ್ಳೆ ಕಡಿದಿವೆ. ಬಳಿಕ ಆಕೆಗೆ ಜ್ವರ, ಮಂಡಿ, ಮಣೆಕಟ್ಟುಗಳ ನೋವು, ಸುಸ್ತು ಕಾಡಲಾರಂಭಿಸಿದೆ. ಇದಾದ ಸ್ವಲ್ಪ ದಿನಗಳ ಬಳಿಕ ಬಲಗಣ್ಣಿನಲ್ಲಿ ದೃಷ್ಟಿದೋಷ ಕಾಣಿಸಿಕೊಂಡಿದೆ.

ಆಗಸ್ಟ್ ೨೦೧೫ ರಲ್ಲಿ ಸ್ವದೇಶಕ್ಕೆ ಹಿಂದಿರುಗಿದ ನಂತರ ಅವರ ಕಣ್ಣಿಗೆ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು! ವೈದ್ಯರ ಬಳಿಗೆ ಹೋದಾಗ ಇದು ಚಿಕೂನ್ ಗೂನ್ಯಾಗೆ ಜ್ವರದಿಂದ ಈ ದೋಷ ಕಾಣಿಸಿಕೊಂಡಿದೆಯೆಂದು ದೃಢಪಟ್ಟಿದೆ. ಚಿಕೂನ್‌ಗುನ್ಯಾಗ್ ತುತ್ತಾದವರು ಜೀವನ ಪರ್ಯಂತ ಕೆಲ ಸಮಸ್ಯೆಗಳಿಗೆ ಖಂಡಿತ ತುತ್ತಾಗುವುದುಂಟು. ಇದರಲ್ಲಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯೂ ದಟ್ಟವಾಗಿದೆಯೆಂದು ವೈದ್ಯರು ದೃಢಪಡಿಸಿರುವರು.

ಅಬ್ಬಾ! ಸೊಳ್ಳೆಗಳೆ… ಇನ್ನು ಬರುಬರುತ್ತಾ ಏನೆಲ್ಲಾ ಅನಾಹುತ ಮಾಡಬಲ್ಲವೆಂಬುದನ್ನು ಈಗಲೇ ಊಹಿಸುವುದು ಕಷ್ಟ ಸಾಧ್ಯವಾದರೂ ಸೊಳ್ಳೆಗಳಿಂದ ಬಲು ಎಚ್ಚರಿಕೆ ವಹಿಸುವುದೂ ಸಣ್ಣಪುಟ್ಟ ಮಕ್ಕಳನ್ನು ರಕ್ಷಿಸುವುದೂ ನಮ್ಮೆಲ್ಲರ ಕರ್ತವ್ಯಗಳಲ್ಲಿ ಒಂದು ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...