Home / ಲೇಖನ / ಇತರೆ / ಸಾಧಕರು

ಸಾಧಕರು

ವಿಶ್ವ ಮಟ್ಟದ ಕೊರಿಯಾದ ಇಂಚಿಯಾನ್‌ಗಳಲ್ಲಿ ಜರುಗಿದ ೨೦೧೪ ರ ಏಷ್ಯನ್ ಗೇಮ್ಸ್‌ನ ರಿಲೆಯಲ್ಲಿ ಬಂಗಾರದ ಸಾಧನೆ ಮಾಡಿರುವ ರಾಜ್ಯದ ಹೆಮ್ಮೆಯ ಓಟಗಾರ್‍ತಿ ಚಿನ್ನದ ಜಿಂಕೆಯೆಂದೇ ಖ್ಯಾತರಾಗಿರುವ ಎಂ.ಆರ್‌. ಪೂವಮ್ಮ ಅವರಿಗೆ ಕನ್ನಡ ನಾಡಿನ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಕೊರಿಯಾದ ಇಂಚಿಯಾನ್‌ನಲ್ಲಿ ನಡೆದ ೨೦೧೪ ರ ಏಷ್ಯನ್ ಗೇಮ್ಸ್‌ನಲ್ಲಿ ಮಿಂಚಿದ ಮಹಾಸಾಧಕಿ ಚಿನ್ನದ ರಾಣಿ ಎಂ.ಆರ್‌. ಪೂವಮ್ಮ ೪೦೦ ಮೀ ಓಟದಲ್ಲಿ ಕಂಚು ಹಾಗೂ ೪೦೦ x ೪ ಮೀ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ ವಿಖ್ಯಾತಿ ಇವರದು!

ಎಂ.ಆರ್. ಪೂವಮ್ಮ ೨೦೧೩ ರಲ್ಲಿ ಪುಣೆಯಲ್ಲಿ ನಡೆದ ಏಷ್ಯನ್ ಚಾಂಪಿಯನ್ ಷಿಪ್‌ನಲ್ಲಿಯೂ ೪೦೦ ಮೀ ಓಟದಲ್ಲಿ ಬೆಳ್ಳಿ ಹಾಗೂ ರಿಲೆಯಲ್ಲಿ ಬಂಗಾರ ಪದಕವನ್ನು ತಮ್ಮ ಸ್ವಂತ ಮಾಡಿಕೊಂಡಿರುವರು.

ಇನ್ನು ತಮ್ಮ ಭುಜದ ಮೇಲೆ ಗಾಯದ ಸಮಸ್ಯೆಯ ಮಧ್ಯೆಯೂ ಏಷ್ಯನ್ ಗೇಮ್ಸ್‌ನಲ್ಲಿ ಹುರುಪಲಿ ಸ್ಪರ್ಧಿಸಿದ್ದ ಪ್ಯಾರಾ ಈಜು ಪಟು ಭವ್ಯ ಭಾರತೀಯ ಎಂಬ ನವ ಇತಿಹಾಸ ಬರೆದ ಬೆಂಗಳೂರಿನ ಶರತ್‌ಗಾಯಕ್ವಾಡ್ ಅವರಿಗೂ ಕನ್ನಡ ನಾಡಿನ ಹೆಮ್ಮೆಯ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಶ್ರೀಯುತರು- ಈ ಗೇಮ್ಸ್‌ನಲ್ಲಿ ಆರು ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಈ ಹಿಂದೆ ಇದೇ ಗೇಮ್ಸ್‌ನಲ್ಲಿ ಅತ್ಲೀಟ್ ಚಿನ್ನದ ರಾಣಿ ಪಿ.ಟಿ. ಉಷಾ ಅವರು ಗೆದ್ದಿದ್ದ ಐದು ಪದಕಗಳ ದಾಖಲೆಯನ್ನೂ ಇವರು ಮುರಿದು, ಅತ್ಯಾಮೋಘ ಸಾಧನೆ ಮಾಡಿ ಮಹಾಸಾಧಕರ ಪಟ್ಟಿಗೆ ಸೇರ್ಪಡೆಯಾಗಿರುವರು.

ಮುದ್ದು ಪುಟಾಣಿಗಳೆ… ನಾನು ಇಂಜಿನಿಯರ್, ಡಾಕ್ಟರ್, ಐ‌ಎ‌ಎಸ್, ಐಪಿ‌ಎಸ್…. ಆಗುವನೆಂದು ಗುರಿ ಹೊಂದಬೇಡಿ! ನಾನು ಒಳ್ಳೆಯ ಕ್ರೀಡಾ ಪಟುವಾಗುವೆ. ದೇಶಕ್ಕೆ ಕೀರ್ತಿ ತರುವೆ. ವಿಶ್ವಮಟ್ಟದಲ್ಲಿ ಭವ್ಯ ಭಾರತದ ಕೀರ್ತಿಪಾತಕೆಯನ್ನು ಮುಗಿಲಿಗೇರಿಸುವೆ ಎಂಬ ಗುರಿನೂ ಹೊಂದಿರಿ. ಅಲ್ಲವೇ??
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...