Home / ಲೇಖನ / ವ್ಯಕ್ತಿ / ಸಾನಿಯಾ ಮಿರ್‍ಜಾ

ಸಾನಿಯಾ ಮಿರ್‍ಜಾ

ಕ್ರೀಡೆಯ ಅತ್ಯುನ್ನತ ವಿಶಿಷ್ಟ ಸಾಧನೆಗೆ ನೀಡಲಾಗುವ ಭವ್ಯ ಭಾರತದ ಅತ್ಯುನ್ನತ ಶ್ರೇಷ್ಠ ಪ್ರಶಸ್ತಿಯಾದ ರಾಜೀವ್‌ಗಾಂಧಿ ಖೇಲಾ ರತ್ನ ಪ್ರಶಸ್ತಿಗೆ ಹೈದ್ರಾಬಾದಿನ ಟೆನಿಸ್ ಆಟಗಾರ್‍ತಿ ಸಾನಿಯಾ ಮಿರ್‍ಜಾ ಭಾಜನರಾಗಿರುವುದು ಇಡೀ ದೇಶಕ್ಕೆ ಸಂದ ಗೌರವವಾಗಿದೆ.

ಈ ಕೀರ್ತಿಗೆ ಪಾತ್ರರಾದ ಮೊತ್ತಮೊದಲ ಮಹಿಳಾ ಟೆನಿಸ್ ಆಟಗಾರ್‍ತಿ ಎಂಬ ಖ್ಯಾತಿಗೆ ಪಾತ್ರರಾಗಿರುವರು.

ಈ ಮೊದಲು ಕ್ರೀಡಾ ಸಚಿವಾಲಯ ಖೇಲ್ ರತ್ನಕ್ಕೆ ಸಾನಿಯಾ ಮಿರ್‍ಜಾ ಅವರ ಹೆಸರನ್ನು ಶಿಫಾರಸು ಮಾಡಿ, ಪರಿಗಣಿಸುವ ಅಂತಿಮ ತೀರ್‍ಮಾವನ್ನು ಪ್ರಶಸ್ತಿ ಆಯ್ಕೆ ಸಮಿತಿಗೆ ಬಿಟ್ಟಿದ್ದು ಏಕೆಂದರೆ…. ಪ್ರಶಸ್ತಿ ಪೈಪೋಟಿಯಲ್ಲಿ ಈಗಾಗಲೇ ಸ್ಕಾಷ್ ಆಟಗಾರ್‍ತಿ ದೀಪಿಕಾ ಪಳ್ಳಿಕಲ್ – ಡಿಸ್ಕಸ್ ಎಸೆತಗಾರ ವಿಕಾಸ್ ಗೌಡರನ್ನು ಹಿಂದಿಕ್ಕಿ ಆಯ್ಕೆಯಾಗಬೇಕಾಗಿತ್ತು! ಇದು ಸುಲಭ ಸಾಧ್ಯವಲ್ಲದ ಮಾತೆಂದು ಹಲವರು ನಂಬಿದ್ದರು.

೧೯೯೬-೧೯೯೭ ರಲ್ಲಿ ಟೆನ್ನಿಸ್ ದಿಗ್ಗಜ ಲಿಯಾಂಡರ್ ಪೇಸ್ ಈ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೀಗ ಅದೇ ಎಂಬಲ್ಡನ್ ಡಬ್ಬಲ್ಸ್ ಚಾಂಪಿಯನ್ ಸಾನಿಯಾ ಟೆನ್ನಿಸ್ ಕ್ರೀಡೆಯಲ್ಲಿ ಈ ಸಾಧನೆ ಮೆರೆದ ಎರಡನೆಯ ಆಟಗಾರ್ತಿಯಾಗಿರುವರು!

ಸಾನಿಯಾ ಮಿರ್ಜಾ ಅವರು ಕಳೆದ ಜುಲೈ ೨೦೧೫ ರಲ್ಲಿ ಸ್ವಿಜರ್ಲೆಂಡಿನ ಮಾರ್ಟಿನಾ ಹಿಂಗಿಸ್ ಜತೆಗೂಡಿ ಎಂಬಲ್ಡನ್ ಡಬಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಈ ಮುನ್ನ ಡಬ್ಬಲ್ಸ್ ವಿಶ್ವ ರ್‍ಯಾಂಕಿಂಗ್‌ನಲ್ಲಿ ವಿಶ್ವದ ನಂಬರ್ ಒನ್ ಸ್ಥಾನ ಪಡೆಯುವಲ್ಲಿಯೂ ಅವರು ಈಗಾಗಲೇ ಯಶಸ್ವಿಯಾಗಿರುವರು. ಮಿಶ್ರ ಡಬ್ಬಲ್ಸ್ ವಿಭಾಗದಲ್ಲಿ ಮೂರು ಗ್ರಾನ್ ಸ್ಲ್ಯಾಮ್ ಜಯಿಸಿರುವ ಸಾನಿಯಾ ಮಿರ್ಜಾ ಅವರಿಗೆ ಈ ಪ್ರಶಸ್ತಿ ದಕ್ಕಿದೆ!

ಸಾನಿಯಾ ಮಿರ್ಜಾ ೨೦೧೪ ರಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಮಿಶ್ರ ಹಾಗೂ ಮಹಿಳಾ ಡಬಲ್ಸ್ ವಿಭಾಗದಲ್ಲಿ ಅನುಕ್ರಮವಾಗಿ ಚಿನ್ನ ಹಾಗೂ ಕಂಚಿನ ಪದಕ ಗಳಿಸಿದ್ದರು.

೨೦೦೪ ರಲ್ಲಿ ಅರ್ಜುನ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡ ಸಾನಿಯಾ ಮಿರ್ಜಾ ಅವರು ಭವ್ಯಭಾರತದ ನಾಲ್ಕನೆಯ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮಶ್ರೀಗೆ ಪಾತ್ರರಾಗಿರುವರು.

ಈಗ ಅವರ ಸಾಧನೆಗೆ ಖೇಲ್‌ರತ್ನ ಪ್ರಶಸ್ತಿಯೂ ಮುಡಿಗೇರಿರುವುದು. ನಾವು ನೀವು ಎಲ್ಲರೂ ಸಾನಿಯಾ ಮಿರ್‍ಜಾ ಅವರಿಗೆ ಆಲ್ ದಿ ಬೆಸ್ಟ್ ಹೇಳೋಣ. ಅವರ ಸಾಧನೆ ನಿಮಗೆಲ್ಲ ಸ್ಫೂರ್ತಿಯ ಸೆಲೆ, ದಾರಿ ದೀಪ, ಚೈತನ್ಯದ ಚಿಲುಮೆಯಾಗಲಿ ಸಾನಿಯಾ ಮಿರ್‍ಜಾ ಅವರಂತೆ ಹತ್ತಾರು ಮಹಾ ಸಾಧಕಿಯರೂ… ಪ್ರತಿಭೆಗಳೂ… ಇಲ್ಲಿ ಸದಾ ತಲೆಯೆತ್ತಲಿಯೆಂದು ಹರಸೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...