Home / ಲೇಖನ / ಇತರೆ / ಯುವಪೀಳಿಗೆ ಎತ್ತ ಸಾಗಿದೆ?

ಯುವಪೀಳಿಗೆ ಎತ್ತ ಸಾಗಿದೆ?

ಇಂದಿನ ಯುವ ಪೀಳಿಗೆ ಬಗ್ಗೆ ಕೇಳಿದರೆ, ಓದಿದರೆ, ನೋಡಿದರೆ ‘ಅಯ್ಯೋ ಪಾಪ!’ ಅನಿಸುವುದು.

ದುಡ್ಡಿಗಾಗಿ ಏನೆಲ್ಲ ಮಾಡುತ್ತಿರುವರು… ಎಂದಾಗ ಇಲ್ಲಿ ಬರೆಯಲು ಮನಸ್ಸು ಬರುತ್ತಿಲ್ಲ. ಆ ರೀತಿ ನಡೆದುಕೊಳ್ಳುತ್ತಿರುವರು. ದುಡ್ಡೇ ದೊಡ್ಡಪ್ಪ. ದುಡ್ಡಿನ ಮುಂದೆ ಬೇರೆ ದೇವರಿಲ್ಲವೆಂದು ಕೆಲವರು ಭಾವಿಸಿ, ದುಡ್ಡಿಗಾಗಿ, ಪಾಕೆಟ್ ಮನಿಗಾಗಿ, ಸ್ಮಾರ್ಟ್ ಫೋನಿಗಾಗಿ ಏನೆಲ್ಲ ಕಳೆದುಕೊಳ್ಳಲು ಸಿದ್ಧರು, ಬದ್ಧರು. ಶತಸಿದ್ಧರಾಗಿ ನಿಂತಿರುವರು.

ಇದು ಬರಿಯ ಲಖನೌದ ಕೊಯ್ಲಿಯಲ್ಲಿ ಜರುಗಿದ ಕಥೆ ವ್ಯಥೆಯಲ್ಲ. ಎಲ್ಲ ಕಡೆ ಜರುಗುತ್ತಿದೆ. ಇದನ್ನು ಬೆಳಕಿಗೆ ಬಂದಿಲ್ಲ ಅಷ್ಟೇ

ಶಾಲಾ ಕಾಲೇಜು ಮಕ್ಕಳು ಕೆಲವರಿಗೆ ಸ್ಮಾರ್ಟ್ ಫೋನ್ ಅಂದ್ರೆ ಜೀವ. ಕೊಳ್ಳಲು ಕಾಸಿಲ್ಲ. ಯಾರನ್ನು ಕೇಳುವುದು? ಅವರಿವರ ಕೈಯಲ್ಲಿ ಫೋನ್ ನೋಡಿ ತಾವೆ ಕೊಳ್ಳಲು ಮಾರ್ಗ ಹುಡುಕಿದರು! ಕೇವಲ ೫೦೦ ರೂಪಾಯಿಗೆ ರಕ್ತ ಮಾರಿಕೊಂಡರು. ವಯಸ್ಸು ೧೪ ವರ್‍ಷ ಮಾತ್ರ.

ಈ ರೀತಿ ಮೂರು ಜನ ತಮ್ಮ ರಕ್ತ ಮಾರಿದರು. ದಲ್ಲಾಳಿಗಳು ರಕ್ತ ನಿಧಿಗೆ ಕರೆದೊಯ್ಯುವರು. ಹಣ ಕೊಟ್ಟು ರಕ್ತ ಬಸಿದು ಕಳಿಸಿದರು. ನಾಲ್ಕು ವರ್ಷದ ಹಿಂದೆ ಇದೇ ಸಂಜಯ್‌ನ ಅಪ್ಪ ತೀರಿ ಹೋದ, ಕ್ಲಿನಿಕ್‌ನಲ್ಲಿ ಅಮ್ಮ ದುಡಿದರೆ ೩೦೦೦ ರೂಪಾಯಿ, ಸಂಜಯ್ ಬಟ್ಟೆ ಅಂಗಡಿಲಿ ೨೦೦೦ ರೂಪಾಯಿ ದುಡಿದರೂ ಹೊಟ್ಟೆ ಬಟ್ಟೆ ಮನೆ ಬಾಡಿಗೆ ಸಾಲುತ್ತಿರಲಿಲ್ಲ. ಹೀಗೆ ಸಂಜಯ್-ವಿನೂತ್-ಪುನೀತ್ ರಕ್ತ ನೀಡಿರುವರು.

ರಕ್ತದಾನ ಮಾಡಲು ಕಡ್ಡಾಯವಾಗಿ ೧೮ ವರ್‍ಷ ತುಂಬಿರಬೇಕು. ಆರೋಗ್ಯವಂತನಾಗಿರಬೇಕು.

ಹಿಮೊಗ್ಲೋಬಿನ್ ಮಟ್ಟ ಕನಿಷ್ಠ ೧೩ ಇರಲೇಬೇಕು. ಈಗಾಗಲೇ ರಕ್ತ ನೀಡಿ ೩ ತಿಂಗಳಾಗಿರಬೇಕು!

ಹೀಗಾಗಿ ಲಖನೌದ ಕೊಯ್ಲಿಯಲ್ಲಿರುವ ರಕ್ತ ನಿಧಿಗೆ ಬೀಗ ಹಾಕಿರುವ ಪೊಲೀಸರು ಮೂವರು ಏಜೆಂಟರನ್ನು ಬಂಧಿಸಿ ಪ್ರಕರಣವನ್ನು ದಾಖಲಿಸಿಕೊಂಡು ತಪ್ಪಿತಸ್ಥರನ್ನು ಕಟಕಟೆಗೆ ಹತ್ತಿಸಿರುವರು.

ಆದ್ದರಿಂದ ಮಕ್ಕಳೆ ಓದುವಾಗ ಓದಬೇಕು.

ಓದುವಾಗ ಗಳಿಕೆ ಸಲ್ಲ. ವಾಮ ಮಾರ್ಗದಿಂದ ಗಳಿಸಿದ್ದು ನರಕದ ಸಮಾನ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...