Home / ಲೇಖನ / ವ್ಯಕ್ತಿ / ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್ ಅವರು ಬೆಂಗಳೂರಿನಲ್ಲಿ ಹುಟ್ಟಿದವರು ಅಪ್ಪಟ ಕನ್ನಡಿಗರೆಂಬ ಅಭಿಮಾನ.

ಇವರೊಬ್ಬ ವಿಜ್ಞಾನಿ. ರಾಷ್ಟ್ರೀಯ ಅಂತರರಾಷ್ಟ್ರೀಯ ವಿಜ್ಞಾನಿ.

ಭವ್ಯ ಭಾರತದ ಸಮಾಜ ಜೀವ ವಿಜ್ಞಾನಿಯೆಂದೇ ಖ್ಯಾತನಾಮರು.

ಇವರು- ಈಗ ಸದಸ್ಯ ಸೆಂಟರ್‌ ಫಾರ್‌ ಇಕೊಲಾಜಿಕಲ್ ಸೈನ್ಸಸ್ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಪ್ರೊಫೆಸರ್ ಎಂದು ಕಾರ್‍ಯ ನಿರ್ವಹಿಸುತ್ತಿರುವರು.

ಇತ್ತೀಚೆಗೆ ಇವರಿಗೆ ಜರ್ಮನಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ “ದಿ ಕ್ರಾಸ್ ಆಫ್ ಆರ್ಡರ್ ಆಫ್ ಮೆರಿಟ್” ಅನ್ನು ಗಳಿಸಿದ್ದಾರೆ. ಇದು ಇವರ ಜ್ಞಾನ ವಿಜ್ಞಾನಕ್ಕೆ ಸಂದ ಪ್ರಶಸ್ತಿ ಪುರಸ್ಕಾರವಾಗಿದೆ!

ಇತ್ತೀಚೆಗೆ ಆಗಸ್ಟ್ ೨೦೧೫ ರಲ್ಲಿ ಇವರಿಗೆ ಬೆಂಗಳೂರಿನಲ್ಲಿರುವ ಜರ್ಮನ್ ಕಾನ್ಸುಲೇಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ಇಡೀ ಕನ್ನಡ ನಾಡಿಗೇ ಸಂದ ಸ್ಥಾನಮಾನವಾಗಿದೆ.

ರಾಘವೇಂದ್ರ ಗದಗ್ ಕರ್‌ ಅವರು ವರ್ತನಾ ಪರಿಸರ ಹಾಗೂ ಸಾಮಾಜಿಕ ಜೀವಶಾಸ್ತ್ರಕ್ಕೆ ನೀಡಿರುವ ಅಮೋಘ ಅಮೂಲ್ಯ ಕೊಡುಗೆಗೆ ಹಾಗೂ ಭವ್ಯ ಭಾರತ ಜರ್ಮನಿಯ ನಡುವೆ ಸಂಶೋಧನಾ ಸಹಕಾರವನ್ನು ಇವರು ಇನ್ನಷ್ಟು ಬಲಪಡಿಸಿರುವುದನ್ನು ಗುರುತರವಾಗಿ ಪರಿಗಣಿಸಿ ಈ ಪ್ರಶಸ್ತಿ ಪುರಸ್ಕಾರವನ್ನು ಕೊಡಮಾಡಿರುವರು.

ಶ್ರೀಯುತರು ಕೀಟ ಸಮಾಜ ವಿಜ್ಞಾನದಲ್ಲೂ ತಜ್ಞರಾಗಿರುವ ಗದಗ್‌ಕರ್ ಅವರು ನ್ಯಾಷನಲ್ ಸೈನ್ಸ್ ಅಕಾಡೆಮಿಯ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಿವರು.

ಇವರ “ಸರ್‍ವೈವಲ್ ಸ್ಟ್ರಾಟಜೀಸ್”- ಪುಸ್ತಕ ಇಂಗ್ಲೀಷ್‌ನಿಂದ ಚೀನಿ ಹಾಗೂ ಕೊರಿಯನ್ ಭಾಷೆಗಳಿಗೆ ಅನುವಾದಗೊಂಡಿರುವುದು.

ಇವರು ಪ್ರತಿನಿತ್ಯ ನಿರಂತರವಾಗಿ ತಮ್ಮ ಕೆಲಸ ಕಾವ್ಯಗಳ ಮಧ್ಯೆ ವಿದ್ಯಾರ್ಥಿಗಳಿಗೆ ಹಾಗೂ ಯುವ ವಿಜ್ಞಾನಿಗಳಿಗೆ ಮಾರ್ಗದರ್ಶನ ಮಾಡುತ್ತಾ ವಿಜ್ಞಾನದಲ್ಲಿ ಸುಜ್ಞಾನವನ್ನು ಕಾಣುತ್ತಿರುವರು.

ಮುದ್ದು ಮಕ್ಕಳೆ… ರಾಘವೇಂದ್ರ ಗದಗ್‌ಕರ್‌ ಅವರು ನಿಮಗೆಲ್ಲ ಸ್ಫೂರ್ತಿದಾಯಕ ಚೈತನ್ಯದಾಯಕವಾಗಲಿ ಎಂದು ಈ ಪುಟ್ಟ ಬರಹವಾಗಿದೆ. ನೀವೂ ಈ ನಿಟ್ಟಿನಲ್ಲಿ ಸಾಗಲು ಸಲಹೆ ಮಾಡುವೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...