Home / ಲೇಖನ / ಇತರೆ / ಅಮವಾಸ್ಯೆಯ ಕಥೆ

ಅಮವಾಸ್ಯೆಯ ಕಥೆ

ಅಮವಾಸ್ಯೆ ಎಂದರೆ… ಕತ್ತಲು ಕಗ್ಗತ್ತಲು, ಭಯಾನಕ, ಕೇಡು, ಭಯ ಎಂದೂ… ಇದು ಸರಿಯಲ್ಲ. ಎಲ್ಲ ಅಮವಾಸ್ಯೆಗಳ ಲೆಕ್ಕ ಒಂದಾದರೆ… ಭೀಮನ ಅಮವಾಸ್ಯೆಯ ಕತೆ ಬೇರೇನೇ ಇದೆ.

ಭೀಮ- ಮಹಾಭಾರತದಲ್ಲಿ ಬರುವ ಶೂರ ಧೀರ ವೀರ ಗದೆ ಹಿಡಿದ ಶಕ್ತಿಮಾನ್, ದ್ರೌಪದಿ ಒಮ್ಮೆ ನನಗೆ ಬಲವಾದ ಗಂಡ ದೊರೆಯುವಂತಾಗಲಿ ಎಂದು ವ್ರತ ಆಚರಿಸಿದಳು. ಅದರಂತೆ ರಾಹುಕೇತು ಪ್ರತ್ಯಕ್ಷರಾಗಿ “ತಥಾಸ್ತು” ಎಂದರು. ಅದರಂತೆ ಬಲಭೀಮನೇ ಗಂಡನಾಗಿ ದ್ರೌಪದಿಗೆ ಸಿಕ್ಕಿದನೆಂಬ ಕಥೆಯುಂಟು.

ದ್ರೌಪದಿಗೆ ಐವರು ಗಂಡಂದಿರಿದ್ದರೂ ಭೀಮನ ಮೇಲೆ ಅತೀವಾದ ಜೀವವಿತ್ತು ಎಂಬುದು ಮಹಾಭಾರತದ ಕಥೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ ದ್ರೌಪದಿ ಅಮವಾಸ್ಯೆಯ ದಿನ ಭೀಮನನ್ನು ಪೂಜಿಸಿ ನೆನೆದು ತನ್ನ ಕಷ್ಟ ಅವಮಾನವನ್ನು ಹೇಳಿಕೊಳ್ಳುತ್ತಿದ್ದಳು! ಹೀಗಾಗಿ ಇದು “ಭೀಮನ ಅಮವಾಸ್ಯೆಯಾಯಿತು” ಎಂದು ಪುರಾಣಗಳಲ್ಲಿ ಉಲ್ಲೇಖವಿದೆ.

ಈ ಭೀಮನ ಅಮಾವಾಸ್ಯೆ ಬರುವುದು ಪ್ರತಿವರ್ಷ ಆಷಾಢದ ಅಂತಿಮದ ಕಾಲಘಟ್ಟದ ದಿನದಂದು. ಅಮವಾಸ್ಯೆ ಆಷಾಢವನ್ನು ಕಳಿಸಿದ ಶುಭ ದಿನವನ್ನು ಅದು ನೆನಪಿಸುವುದು.

ಹಿಂದೆ-ಬಲು ಹಿಂದೆ ನಮ್ಮ ಜನಪದರು “ಗಂಡನ ಪಾದ ಪೂಜೆಯ ಮಾಡಬೇಕಮ್ಮಾ… ಗಂಡನ ಮನಸು ಒಳಿತಾಗಿದ್ದರೆ ನೀನಾಗುವೆ ಮುತ್ತೈದೆಯಮ್ಮ ನಿನ್ನಯ ಹರಕೆ ಹಾರೈಕೆ ಆತನಿಗೆ ಭೀಮಬಲವಮ್ಮಽ… ನೀ ತಿಳಿ ತಂಗಿವ್ವ… ಗಂಡನ ಗೆದ್ದವಳು ಕೈಲಾಸ ಗೆದ್ದವಳು ಮೂಜಗವ ಗೆದ್ದವಳು… ಗಂಡನ ತೇಜಸ್ಸು ನಿನ್ನಯ ಶ್ರೇಯಸ್ಸು ಪೂಜೆಯ ಫಲವಮ್ಮ…” ಎಂದು ಹಾಡುತ್ತಿದ್ದುದ್ದನ್ನು ಗಂಡನ ಪೂಜಿಸಿ ಆಶೀರ್ವಾದ ಪಡೆಯುತ್ತಿದ್ದುದ್ದನ್ನು ನಾನು ಸುಮಾರು ಐದಾರು ದಶಕಗಳಿಂದ ಕಂಡುಂಡವನಾಗಿದ್ದೇನೆ.

ಇಲ್ಲಿ ನಂಬಿಕೆಯೇ ವ್ರತ-ಪೂಜೆ-ಆಚರಣೆ-ಸಂಪ್ರದಾಯ-ಒಳಿತು-ಬಾಳ್ವೆ- ದಾಂಪತ್ಯ-ಪ್ರೀತಿ-ಪ್ರೇಮ-ನೆಮ್ಮದಿ-ತೃಪ್ತಿ-ಆನಂದ-ಬಿಡುಗಡೆ ಎಂದು ನಂಬಿ ನಚ್ಚಿ ನಡೆಸುವ ಎಷ್ಟೋ ಹಳ್ಳಿ ಪಟ್ಟಣ ನಗರ ದೇಶಗಳಿವೆ.

ಆಷಾಢದಲ್ಲಿ ಹೆಂಡತಿ ಕಡ್ಡಾಯವಾಗಿ ನಾಲ್ಕೈದು ವಾರ ತವರು ಮನೆ ಸೇರಬೇಕೆಂಬ ನಿಯಮವಿದೆ.

“ಆಷಾಢವೆಂದು ಕಳೆವುದು ಅಮ್ಮಯ್ಯ ಗಂಜಿಯ ಕುಡಿದರೂ ಗಂಡನೂ ಇರಬೇಕು. ಗಂಡನ ಆಗಲಿಕೆ ಬೇಸರಿಕೆ ತಂದಿರಲು ಆಷಾಢದ ಗುಮ್ಮವೇಕೆ ಹಡೆದವ್ವಽಽ….” ಎಂದು ಗರತಿಯೊಬ್ಬಳು ಹಾಡಿ ಕಣ್ಣೀರ ಕೋಡಿ ಹರಸುವುದಿದೆ.

“ಆಷಾಢ ಕಳೆದು ದಿನವಾಗಿಲ್ಲ ಗಂಡನಾಗಲೆ ಅತ್ತೆಯ ಹೊಸ್ತಿಲಲ್ಲಿ… ಅಳಿಯ ಬಂದಿಹನು ಆಷಾಢ ಕಳೆದಿಹದ ಪೂಜೆಗೆ ಬನ್ನಿರಿ ನೀವೆಲ್ಲ… ಆರತಿ ಎತ್ತಿರಿ ದಿನವೆಲ್ಲ….” ಎಂದು ಅತ್ತೆಯು ಸಡಗರದಿ ಹಾಡುವ ಪರಿಯು ಕತೆಯಾಗಿ ಹರಿಯುವುದು.

ಎಲ್ಲ ಅಮವಾಸ್ಯೆಗಳಂತಲ್ಲ ಇದು ಭೀಮನ ಅಮವಾಸ್ಯೆ ಒಳಿತಿನ ಲೆಕ್ಕ. ಮಂಗಳಪ್ರದಾಯಕವೆಂದೇ ಇದು ಸಿದ್ಧಿ ಪ್ರಸಿದ್ಧ ವರಸಿದ್ಧಿ ಅಮವಾಸ್ಯೆಯಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...