Home / ಲೇಖನ / ಇತರೆ / ಅಮವಾಸ್ಯೆಯ ಕಥೆ

ಅಮವಾಸ್ಯೆಯ ಕಥೆ

ಅಮವಾಸ್ಯೆ ಎಂದರೆ… ಕತ್ತಲು ಕಗ್ಗತ್ತಲು, ಭಯಾನಕ, ಕೇಡು, ಭಯ ಎಂದೂ… ಇದು ಸರಿಯಲ್ಲ. ಎಲ್ಲ ಅಮವಾಸ್ಯೆಗಳ ಲೆಕ್ಕ ಒಂದಾದರೆ… ಭೀಮನ ಅಮವಾಸ್ಯೆಯ ಕತೆ ಬೇರೇನೇ ಇದೆ.

ಭೀಮ- ಮಹಾಭಾರತದಲ್ಲಿ ಬರುವ ಶೂರ ಧೀರ ವೀರ ಗದೆ ಹಿಡಿದ ಶಕ್ತಿಮಾನ್, ದ್ರೌಪದಿ ಒಮ್ಮೆ ನನಗೆ ಬಲವಾದ ಗಂಡ ದೊರೆಯುವಂತಾಗಲಿ ಎಂದು ವ್ರತ ಆಚರಿಸಿದಳು. ಅದರಂತೆ ರಾಹುಕೇತು ಪ್ರತ್ಯಕ್ಷರಾಗಿ “ತಥಾಸ್ತು” ಎಂದರು. ಅದರಂತೆ ಬಲಭೀಮನೇ ಗಂಡನಾಗಿ ದ್ರೌಪದಿಗೆ ಸಿಕ್ಕಿದನೆಂಬ ಕಥೆಯುಂಟು.

ದ್ರೌಪದಿಗೆ ಐವರು ಗಂಡಂದಿರಿದ್ದರೂ ಭೀಮನ ಮೇಲೆ ಅತೀವಾದ ಜೀವವಿತ್ತು ಎಂಬುದು ಮಹಾಭಾರತದ ಕಥೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ ದ್ರೌಪದಿ ಅಮವಾಸ್ಯೆಯ ದಿನ ಭೀಮನನ್ನು ಪೂಜಿಸಿ ನೆನೆದು ತನ್ನ ಕಷ್ಟ ಅವಮಾನವನ್ನು ಹೇಳಿಕೊಳ್ಳುತ್ತಿದ್ದಳು! ಹೀಗಾಗಿ ಇದು “ಭೀಮನ ಅಮವಾಸ್ಯೆಯಾಯಿತು” ಎಂದು ಪುರಾಣಗಳಲ್ಲಿ ಉಲ್ಲೇಖವಿದೆ.

ಈ ಭೀಮನ ಅಮಾವಾಸ್ಯೆ ಬರುವುದು ಪ್ರತಿವರ್ಷ ಆಷಾಢದ ಅಂತಿಮದ ಕಾಲಘಟ್ಟದ ದಿನದಂದು. ಅಮವಾಸ್ಯೆ ಆಷಾಢವನ್ನು ಕಳಿಸಿದ ಶುಭ ದಿನವನ್ನು ಅದು ನೆನಪಿಸುವುದು.

ಹಿಂದೆ-ಬಲು ಹಿಂದೆ ನಮ್ಮ ಜನಪದರು “ಗಂಡನ ಪಾದ ಪೂಜೆಯ ಮಾಡಬೇಕಮ್ಮಾ… ಗಂಡನ ಮನಸು ಒಳಿತಾಗಿದ್ದರೆ ನೀನಾಗುವೆ ಮುತ್ತೈದೆಯಮ್ಮ ನಿನ್ನಯ ಹರಕೆ ಹಾರೈಕೆ ಆತನಿಗೆ ಭೀಮಬಲವಮ್ಮಽ… ನೀ ತಿಳಿ ತಂಗಿವ್ವ… ಗಂಡನ ಗೆದ್ದವಳು ಕೈಲಾಸ ಗೆದ್ದವಳು ಮೂಜಗವ ಗೆದ್ದವಳು… ಗಂಡನ ತೇಜಸ್ಸು ನಿನ್ನಯ ಶ್ರೇಯಸ್ಸು ಪೂಜೆಯ ಫಲವಮ್ಮ…” ಎಂದು ಹಾಡುತ್ತಿದ್ದುದ್ದನ್ನು ಗಂಡನ ಪೂಜಿಸಿ ಆಶೀರ್ವಾದ ಪಡೆಯುತ್ತಿದ್ದುದ್ದನ್ನು ನಾನು ಸುಮಾರು ಐದಾರು ದಶಕಗಳಿಂದ ಕಂಡುಂಡವನಾಗಿದ್ದೇನೆ.

ಇಲ್ಲಿ ನಂಬಿಕೆಯೇ ವ್ರತ-ಪೂಜೆ-ಆಚರಣೆ-ಸಂಪ್ರದಾಯ-ಒಳಿತು-ಬಾಳ್ವೆ- ದಾಂಪತ್ಯ-ಪ್ರೀತಿ-ಪ್ರೇಮ-ನೆಮ್ಮದಿ-ತೃಪ್ತಿ-ಆನಂದ-ಬಿಡುಗಡೆ ಎಂದು ನಂಬಿ ನಚ್ಚಿ ನಡೆಸುವ ಎಷ್ಟೋ ಹಳ್ಳಿ ಪಟ್ಟಣ ನಗರ ದೇಶಗಳಿವೆ.

ಆಷಾಢದಲ್ಲಿ ಹೆಂಡತಿ ಕಡ್ಡಾಯವಾಗಿ ನಾಲ್ಕೈದು ವಾರ ತವರು ಮನೆ ಸೇರಬೇಕೆಂಬ ನಿಯಮವಿದೆ.

“ಆಷಾಢವೆಂದು ಕಳೆವುದು ಅಮ್ಮಯ್ಯ ಗಂಜಿಯ ಕುಡಿದರೂ ಗಂಡನೂ ಇರಬೇಕು. ಗಂಡನ ಆಗಲಿಕೆ ಬೇಸರಿಕೆ ತಂದಿರಲು ಆಷಾಢದ ಗುಮ್ಮವೇಕೆ ಹಡೆದವ್ವಽಽ….” ಎಂದು ಗರತಿಯೊಬ್ಬಳು ಹಾಡಿ ಕಣ್ಣೀರ ಕೋಡಿ ಹರಸುವುದಿದೆ.

“ಆಷಾಢ ಕಳೆದು ದಿನವಾಗಿಲ್ಲ ಗಂಡನಾಗಲೆ ಅತ್ತೆಯ ಹೊಸ್ತಿಲಲ್ಲಿ… ಅಳಿಯ ಬಂದಿಹನು ಆಷಾಢ ಕಳೆದಿಹದ ಪೂಜೆಗೆ ಬನ್ನಿರಿ ನೀವೆಲ್ಲ… ಆರತಿ ಎತ್ತಿರಿ ದಿನವೆಲ್ಲ….” ಎಂದು ಅತ್ತೆಯು ಸಡಗರದಿ ಹಾಡುವ ಪರಿಯು ಕತೆಯಾಗಿ ಹರಿಯುವುದು.

ಎಲ್ಲ ಅಮವಾಸ್ಯೆಗಳಂತಲ್ಲ ಇದು ಭೀಮನ ಅಮವಾಸ್ಯೆ ಒಳಿತಿನ ಲೆಕ್ಕ. ಮಂಗಳಪ್ರದಾಯಕವೆಂದೇ ಇದು ಸಿದ್ಧಿ ಪ್ರಸಿದ್ಧ ವರಸಿದ್ಧಿ ಅಮವಾಸ್ಯೆಯಾಗಿದೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...