Home / ಲೇಖನ / ವ್ಯಕ್ತಿ / ಸುಪ್ರಿಯಾ ದಯಾನಂದ್

ಸುಪ್ರಿಯಾ ದಯಾನಂದ್

ಕನ್ನಡ ನಾಡು ಪ್ರತಿಭಾವಂತರ ಬೀಡು. ಅದರಲ್ಲಿಯೂ ಕೊಡಗು ಎಂದಾಕ್ಷಣ ಕಣ್ಣ ಮುಂದೆ ಕಾಶ್ಮೀರ ಬಂದು ಹೋಗುವುದು. ವೀರ ಸೇನಾನಿಗಳ ನಾಡು ಕೆಚ್ಚೆದೆಯ ಬೀಡು.

ಕೊಡಗು ದೇಶ ಸೇವೆಗೂ ಮುಂದೆ ಪ್ರತಿಭಾವಂತರಿಗೆ ಮುಂದೆ ಎನ್ನುವುದಕ್ಕೆ ಸುಪ್ರಿಯಾ ದಯಾನಂದ್ ಅವರು ನಮಗೆಲ್ಲ ಇಂದು ಹಿರಿಸಾಕ್ಷಿಯಾಗಿರುವರು. ಸುಪ್ರಿಯಾ ದಯಾನಂದ್ ಕೊಡಗಿನ ಸೋಮವಾರ ಪೇಟೆ ತಾಲ್ಲೂಕಿನ ಗೆಜ್ಜೆ ಹಣಕೋಡು ಗ್ರಾಮದ ಹೆಮ್ಮೆಯ ಸುಪುತ್ರಿ.ತಂದೆ- ಸಿದ್ಧಿ ಪ್ರಸಿದ್ಧಿ ಕಾಫಿ ಬೆಳೆಗಾರರಾದ ದಯಾನಂದ್ ತಾಯಿ- ಅಮ್ಮ ಕಾವೇರಮ್ಮನ ವರಪುತ್ರಿ ಕವಿತಾ.

ಸುಪ್ರಿಯಾ ದಯಾನಂದ್ ಈಗ ಬೆಂಗಳೂರಿನ ಜಿಕೆವಿಕೆಯಲ್ಲಿ ಎಂಎಸ್ಸಿ ಕೃಷಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿ.

ದಿನಾಂಕ ೧೨-೦೮-೨೦೧೫ ರಿಂದ ೨೨-೦೮-೨೦೧೫ ರವರೆಗೆ ಫ್ರಾನ್ಸ್‌ನ ಪ್ಯಾರೀಸ್‌ನಲ್ಲಿ ಜರುಗಲಿರುವ ಜಾಗತಿಕ ಮಟ್ಟದ ಆಹಾರ ಪದ್ಧತಿ ಕುರಿತು ಬೃಹತ್ ವಿಚಾರ ಸಂಕೀರ್ಣಕ್ಕೆ ಭವ್ಯ ಭಾರತದಿಂದ ಏಕೈಕ ಪ್ರತಿನಿಧಿಯಾಗಿ ಇವರು ಹೋಗಿ ಬರಲಿದ್ದಾರೆ.

ಇಲ್ಲಿ ವಿಶ್ವದ ೫೦ ದೇಶದ ಪ್ರತಿನಿಧಿಗಳು ತಮ್ಮ ತಮ್ಮ ದೇಶಗಳಲ್ಲಿನ ಆಹಾರ- ಬೀಜ-ದವಸ-ಧಾನ್ಯ-ತಳಿಗಳ ಉತ್ಪಾದನೆ, ಆಮದು, ರಫ್ತು ಗುಣಮಟ್ಟ, ಮಾರುಕಟ್ಟೆಯ ಬಗ್ಗೆ ವ್ಯಾಪಕ ಚರ್ಚೆ, ಪ್ರಬಂಧ ವಿಚಾರ ವಿನಿಮಯ ನಡೆಯಲಿದೆ.

ದಿನಾಂಕ ೧೬-೦೯-೨೦೧೫ ರಿಂದ ೨೦೧೬ ರ ಫೆಬ್ರವರಿವರೆಗೆ ಬೆಲ್ಲಿಯಂನ ಗೆಂಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳುವ ಸುವರ್ಣಾವಕಾಶವನ್ನು ಸುಪ್ರಿಯಾ ದಯಾನಂದ್ ಅವರು ಪಡೆದುಕೊಂಡಿರುವರು.

ಹೀಗೆ ಸುಪ್ರಿಯಾ ದಯಾನಂದ್ ತಾನುಟ್ಟಿದ ಊರಿಗೆ, ತಂದೆತಾಯಿಗೆ, ಕಲಿತ ಶಾಲೆ ಕಾಲೇಜಿಗೆ ಕೀರ್ತಿ ತಂದಿರುವರು. ಇವರ ಪ್ರತಿಭೆ, ಉತ್ಪತ್ತಿ, ವಿದ್ವತ್ ಉಳಿದವರಿಗೆ ಸ್ಫೂರ್ತಿದಾಯಕ ಹರ್ಷದಾಯಕವಾಗಿದೆ.

ಕಲಿತರೆ ಇದ್ದರೆ ಇರಬೇಕು ಸುಪ್ರಿಯಾ ದಯಾನಂದ್‌ವರಂತೆ, ಪ್ರತಿಭಾವಂತ ಮಕ್ಕಳು ಅಲ್ಲವೇ?

ನಾವು ನೀವು ಎಲ್ಲರೂ ಸುಪ್ರಿಯಾ ದಯಾನಂದ್ ಅವರಿಗೆ ಆಲ್ ದಿ ಬೆಸ್ಟ್, ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...