Home / ಲೇಖನ / ವ್ಯಕ್ತಿ / ಸುಪ್ರಿಯಾ ದಯಾನಂದ್

ಸುಪ್ರಿಯಾ ದಯಾನಂದ್

ಕನ್ನಡ ನಾಡು ಪ್ರತಿಭಾವಂತರ ಬೀಡು. ಅದರಲ್ಲಿಯೂ ಕೊಡಗು ಎಂದಾಕ್ಷಣ ಕಣ್ಣ ಮುಂದೆ ಕಾಶ್ಮೀರ ಬಂದು ಹೋಗುವುದು. ವೀರ ಸೇನಾನಿಗಳ ನಾಡು ಕೆಚ್ಚೆದೆಯ ಬೀಡು.

ಕೊಡಗು ದೇಶ ಸೇವೆಗೂ ಮುಂದೆ ಪ್ರತಿಭಾವಂತರಿಗೆ ಮುಂದೆ ಎನ್ನುವುದಕ್ಕೆ ಸುಪ್ರಿಯಾ ದಯಾನಂದ್ ಅವರು ನಮಗೆಲ್ಲ ಇಂದು ಹಿರಿಸಾಕ್ಷಿಯಾಗಿರುವರು. ಸುಪ್ರಿಯಾ ದಯಾನಂದ್ ಕೊಡಗಿನ ಸೋಮವಾರ ಪೇಟೆ ತಾಲ್ಲೂಕಿನ ಗೆಜ್ಜೆ ಹಣಕೋಡು ಗ್ರಾಮದ ಹೆಮ್ಮೆಯ ಸುಪುತ್ರಿ.ತಂದೆ- ಸಿದ್ಧಿ ಪ್ರಸಿದ್ಧಿ ಕಾಫಿ ಬೆಳೆಗಾರರಾದ ದಯಾನಂದ್ ತಾಯಿ- ಅಮ್ಮ ಕಾವೇರಮ್ಮನ ವರಪುತ್ರಿ ಕವಿತಾ.

ಸುಪ್ರಿಯಾ ದಯಾನಂದ್ ಈಗ ಬೆಂಗಳೂರಿನ ಜಿಕೆವಿಕೆಯಲ್ಲಿ ಎಂಎಸ್ಸಿ ಕೃಷಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿ.

ದಿನಾಂಕ ೧೨-೦೮-೨೦೧೫ ರಿಂದ ೨೨-೦೮-೨೦೧೫ ರವರೆಗೆ ಫ್ರಾನ್ಸ್‌ನ ಪ್ಯಾರೀಸ್‌ನಲ್ಲಿ ಜರುಗಲಿರುವ ಜಾಗತಿಕ ಮಟ್ಟದ ಆಹಾರ ಪದ್ಧತಿ ಕುರಿತು ಬೃಹತ್ ವಿಚಾರ ಸಂಕೀರ್ಣಕ್ಕೆ ಭವ್ಯ ಭಾರತದಿಂದ ಏಕೈಕ ಪ್ರತಿನಿಧಿಯಾಗಿ ಇವರು ಹೋಗಿ ಬರಲಿದ್ದಾರೆ.

ಇಲ್ಲಿ ವಿಶ್ವದ ೫೦ ದೇಶದ ಪ್ರತಿನಿಧಿಗಳು ತಮ್ಮ ತಮ್ಮ ದೇಶಗಳಲ್ಲಿನ ಆಹಾರ- ಬೀಜ-ದವಸ-ಧಾನ್ಯ-ತಳಿಗಳ ಉತ್ಪಾದನೆ, ಆಮದು, ರಫ್ತು ಗುಣಮಟ್ಟ, ಮಾರುಕಟ್ಟೆಯ ಬಗ್ಗೆ ವ್ಯಾಪಕ ಚರ್ಚೆ, ಪ್ರಬಂಧ ವಿಚಾರ ವಿನಿಮಯ ನಡೆಯಲಿದೆ.

ದಿನಾಂಕ ೧೬-೦೯-೨೦೧೫ ರಿಂದ ೨೦೧೬ ರ ಫೆಬ್ರವರಿವರೆಗೆ ಬೆಲ್ಲಿಯಂನ ಗೆಂಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳುವ ಸುವರ್ಣಾವಕಾಶವನ್ನು ಸುಪ್ರಿಯಾ ದಯಾನಂದ್ ಅವರು ಪಡೆದುಕೊಂಡಿರುವರು.

ಹೀಗೆ ಸುಪ್ರಿಯಾ ದಯಾನಂದ್ ತಾನುಟ್ಟಿದ ಊರಿಗೆ, ತಂದೆತಾಯಿಗೆ, ಕಲಿತ ಶಾಲೆ ಕಾಲೇಜಿಗೆ ಕೀರ್ತಿ ತಂದಿರುವರು. ಇವರ ಪ್ರತಿಭೆ, ಉತ್ಪತ್ತಿ, ವಿದ್ವತ್ ಉಳಿದವರಿಗೆ ಸ್ಫೂರ್ತಿದಾಯಕ ಹರ್ಷದಾಯಕವಾಗಿದೆ.

ಕಲಿತರೆ ಇದ್ದರೆ ಇರಬೇಕು ಸುಪ್ರಿಯಾ ದಯಾನಂದ್‌ವರಂತೆ, ಪ್ರತಿಭಾವಂತ ಮಕ್ಕಳು ಅಲ್ಲವೇ?

ನಾವು ನೀವು ಎಲ್ಲರೂ ಸುಪ್ರಿಯಾ ದಯಾನಂದ್ ಅವರಿಗೆ ಆಲ್ ದಿ ಬೆಸ್ಟ್, ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...