Home / ಲೇಖನ / ಇತರೆ / ಹಚ್ಚೆ-ಹಕ್ಕು

ಹಚ್ಚೆ-ಹಕ್ಕು

ಹಚ್ಚೆ ಎಲ್ಲರ ಹಕ್ಕು. ಮನುಷ್ಯನ ಹಿಂದೆ ಹಚ್ಚೆ ಮಾತ್ರ ಹೋಗುವುದು! ಜೀವಿತದ ಅವಧಿಯಲ್ಲಿ ಬೇಕಾದ್ದು ಗಳಿಸಿದ್ದರೂ ಅದನ್ನು ಇಲ್ಲೇ ಬಿಟ್ಟು ಹೋಗುವರು. ಅದೇ ಹಚ್ಚೆ ಹಾಕಿಸಿಕೊಂಡರೆ ಅದನ್ನು ಹಿಂದಿಂದೆ ಒಯ್ಯುವರು. ಹೀಗಾಗಿ ಹಚ್ಚೆ-ಹಕ್ಕು ಅದನ್ನು ಯಾರು ಕಸಿಯುವಂತಿಲ್ಲ.

ಈ ಹಚ್ಚೆ ಕಲೆಗೆ ಸುಮಾರು ೫೦೦೦ ವರ್ಷಗಳಷ್ಟು ಇತಿಹಾಸವಿದೆ. ಇದು ನಮ್ಮ ಮೂಲನಿವಾಸಿಗಳ ಆಸ್ತಿ. ಇದನ್ನು ನಮಗೆ ಬಳುವಳಿಯಾಗಿ ಬಿಟ್ಟು ಹೋಗಿರುವರು. ಇದನ್ನು ಕಸಿಯುವ ಹಕ್ಕು ಯಾರಿಗಿದೆ?

ಇತ್ತೀಚೆಗೆ ಭಾರತೀಯ ಸೇನಾ ಸಿಬ್ಬಂದಿ, ಅಧಿಕಾರಿಗಳು, ಸೈನಿಕರು, ಹಚ್ಚೆಗಳನ್ನು ಹಾಕಿಸಿಕೊಳ್ಳುವಂತಿಲ್ಲ ಎಂದು ಸೇನಾ ಅಧಿಕಾರಿಗಳು ಆದೇಶಿಸಿದ್ದಾರೆ.

ಭವ್ಯ ಭಾರತೀಯ ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳು ಇನ್ನು ಮುಂದೆ ಹಚ್ಚೆ ಹಾಕಿಸಿಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಸಂಪ್ರದಾಯ ಆಚರಣೆಗಳ ಹಿತದೃಷ್ಟಿಯಿಂದ ಬುಡಕಟ್ಟು ಹಿಂದುಳಿದ ಜಾತಿ ಜನಾಂಗದವರಿಗೆ ಮಾತ್ರ ಹಚ್ಚೆ ಹಾಕಿಸಿಕೊಳ್ಳಲು ಆದೇಶದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಭವ್ಯ ಭಾರತೀಯ ಸೇನೆಗೆ ಸೇರಿದ ಮೇಲೆ ನಾನು ಯಾವುದೇ ರೀತಿಯ ಹಚ್ಚೆಗಳನ್ನು ಹಾಕಿಸಿಕೊಳ್ಳುವುದಿಲ್ಲ ಎಂದು ತರಬೇತಿಗೆ ತೆರಳುವ ಮುನ್ನ ಅಭ್ಯರ್ಥಿಗಳು ಪ್ರಮಾಣ ಪತ್ರವೊಂದಕ್ಕೆ ಸಹಿ ಮಾಡುವ ವಿಧಿವಿಧಾನ ನಿಯಮವೊಂದನ್ನು ಈಗಾಗಲೇ ರೂಪಿಸಿರುವರು.

ಇಷ್ಟೇ ಅಲ್ಲದೆ, ಸರ್‍ವೇ ಸಾಮಾನ್ಯ ಜನರು ತಮ್ಮ ಶಿಸ್ತು ದಕ್ಷತೆಗೆ ಧಕ್ಕೆಯಾಗದಂತೆ ಧಾರ್ಮಿಕ ಹಾಗೂ ಪ್ರೀತಿ ಪಾತ್ರರ ಹೆಸರು ಚಿಹ್ನೆ ಹಾಕಿಸಿಕೊಳ್ಳಲು ಸಂಪೂರ್ಣವಾಗಿ ಅವಕಾಶ ಕಲ್ಪಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ನಮ್ಮ ಭಾರತೀಯ ಸೈನ್ಯ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಬ್ರಿಟೀಶ್ ಮಾದರಿಯ ಆಡಳಿತ, ಸರ್ಕಾರ, ಸಲ್ಲವೆಂದು ಮತ್ತೊಮ್ಮೆ ಸಿಪಾಯಿ ದಂಗೆಗೆ ಕಾರಣವಾಗದಂತೆ ಇಂದಿನ ಘನ ಸರ್ಕಾರ ಎಚ್ಚೆತ್ತು ಕೊಳ್ಳಬೇಕಲ್ಲವೇ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...