Home / ಲೇಖನ / ಇತರೆ / ಹಚ್ಚೆ-ಹಕ್ಕು

ಹಚ್ಚೆ-ಹಕ್ಕು

ಹಚ್ಚೆ ಎಲ್ಲರ ಹಕ್ಕು. ಮನುಷ್ಯನ ಹಿಂದೆ ಹಚ್ಚೆ ಮಾತ್ರ ಹೋಗುವುದು! ಜೀವಿತದ ಅವಧಿಯಲ್ಲಿ ಬೇಕಾದ್ದು ಗಳಿಸಿದ್ದರೂ ಅದನ್ನು ಇಲ್ಲೇ ಬಿಟ್ಟು ಹೋಗುವರು. ಅದೇ ಹಚ್ಚೆ ಹಾಕಿಸಿಕೊಂಡರೆ ಅದನ್ನು ಹಿಂದಿಂದೆ ಒಯ್ಯುವರು. ಹೀಗಾಗಿ ಹಚ್ಚೆ-ಹಕ್ಕು ಅದನ್ನು ಯಾರು ಕಸಿಯುವಂತಿಲ್ಲ.

ಈ ಹಚ್ಚೆ ಕಲೆಗೆ ಸುಮಾರು ೫೦೦೦ ವರ್ಷಗಳಷ್ಟು ಇತಿಹಾಸವಿದೆ. ಇದು ನಮ್ಮ ಮೂಲನಿವಾಸಿಗಳ ಆಸ್ತಿ. ಇದನ್ನು ನಮಗೆ ಬಳುವಳಿಯಾಗಿ ಬಿಟ್ಟು ಹೋಗಿರುವರು. ಇದನ್ನು ಕಸಿಯುವ ಹಕ್ಕು ಯಾರಿಗಿದೆ?

ಇತ್ತೀಚೆಗೆ ಭಾರತೀಯ ಸೇನಾ ಸಿಬ್ಬಂದಿ, ಅಧಿಕಾರಿಗಳು, ಸೈನಿಕರು, ಹಚ್ಚೆಗಳನ್ನು ಹಾಕಿಸಿಕೊಳ್ಳುವಂತಿಲ್ಲ ಎಂದು ಸೇನಾ ಅಧಿಕಾರಿಗಳು ಆದೇಶಿಸಿದ್ದಾರೆ.

ಭವ್ಯ ಭಾರತೀಯ ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳು ಇನ್ನು ಮುಂದೆ ಹಚ್ಚೆ ಹಾಕಿಸಿಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಸಂಪ್ರದಾಯ ಆಚರಣೆಗಳ ಹಿತದೃಷ್ಟಿಯಿಂದ ಬುಡಕಟ್ಟು ಹಿಂದುಳಿದ ಜಾತಿ ಜನಾಂಗದವರಿಗೆ ಮಾತ್ರ ಹಚ್ಚೆ ಹಾಕಿಸಿಕೊಳ್ಳಲು ಆದೇಶದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಭವ್ಯ ಭಾರತೀಯ ಸೇನೆಗೆ ಸೇರಿದ ಮೇಲೆ ನಾನು ಯಾವುದೇ ರೀತಿಯ ಹಚ್ಚೆಗಳನ್ನು ಹಾಕಿಸಿಕೊಳ್ಳುವುದಿಲ್ಲ ಎಂದು ತರಬೇತಿಗೆ ತೆರಳುವ ಮುನ್ನ ಅಭ್ಯರ್ಥಿಗಳು ಪ್ರಮಾಣ ಪತ್ರವೊಂದಕ್ಕೆ ಸಹಿ ಮಾಡುವ ವಿಧಿವಿಧಾನ ನಿಯಮವೊಂದನ್ನು ಈಗಾಗಲೇ ರೂಪಿಸಿರುವರು.

ಇಷ್ಟೇ ಅಲ್ಲದೆ, ಸರ್‍ವೇ ಸಾಮಾನ್ಯ ಜನರು ತಮ್ಮ ಶಿಸ್ತು ದಕ್ಷತೆಗೆ ಧಕ್ಕೆಯಾಗದಂತೆ ಧಾರ್ಮಿಕ ಹಾಗೂ ಪ್ರೀತಿ ಪಾತ್ರರ ಹೆಸರು ಚಿಹ್ನೆ ಹಾಕಿಸಿಕೊಳ್ಳಲು ಸಂಪೂರ್ಣವಾಗಿ ಅವಕಾಶ ಕಲ್ಪಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ನಮ್ಮ ಭಾರತೀಯ ಸೈನ್ಯ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಬ್ರಿಟೀಶ್ ಮಾದರಿಯ ಆಡಳಿತ, ಸರ್ಕಾರ, ಸಲ್ಲವೆಂದು ಮತ್ತೊಮ್ಮೆ ಸಿಪಾಯಿ ದಂಗೆಗೆ ಕಾರಣವಾಗದಂತೆ ಇಂದಿನ ಘನ ಸರ್ಕಾರ ಎಚ್ಚೆತ್ತು ಕೊಳ್ಳಬೇಕಲ್ಲವೇ?
*****

Tagged:

Leave a Reply

Your email address will not be published. Required fields are marked *

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...