Home / ಲೇಖನ / ವಿಜ್ಞಾನ / ಮರೆಗುಳಿತನ

ಮರೆಗುಳಿತನ

ಕೆಲವರಿಗೆ ಮರೆಗುಳಿತನ ವಂಶ ಪರಂಪರೆಯಾಗಿ ಬಂದಿರುತ್ತದೆ. ವಯಸ್ಸು ಸಣ್ಣದಿರಲಿ ದೊಡ್ಡದಿರಲಿ ಮರೆಗುಳಿತನ ಜಾಸ್ತಿಯಿರುವುದು, ಮರೆವು ಒಂದು ವರದಾನ. ಕಹಿಯನ್ನು ಮರೆಯಲು ದೇವರಿತ್ತ ವರವು. ಇದರಿಂದಾಗಿ ತುಸು ನೆಮ್ಮದಿ, ತೃಪ್ತಿ, ಶಾಂತಿ ಲಭಿಸಲು ಕಾರಣವಾಗಿದೆ. ಮರೆವು ಬೇಕು. ಆದರೆ ಅದೇ ಜಾಸ್ತಿಯಾದರೆ…. ಜೀವನ ನೀರಸನವಾಗುವುದು.

ಈ ಮರೆಗುಳಿತನಕ್ಕೆ ಕಾರಣವೇನು? ವಯಸ್ಸಾಗುತ್ತಾ… ಬರುಬರುತ್ತಾ… ಮರೆವು ಸಹಜವೇ? ನಿಜಕ್ಕೂ ಮರೆವು ಒಂದು ವರದಾನವೇ? ಇದೊಂದು ಕಾಯಿಲೆಯೇ?

– ಹೀಗೆ ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಶಾಶ್ವತ ಪರಿಹಾರ ನೀಡುವ ಔಷಧಿ ಕಂಡು ಹಿಡಿಯಲು ವಿಶ್ವದಾದ್ಯಂತ ನಿರಂತರವಾಗಿ…. ಹಲವು ಸಂಶೋಧನೆಗಳು ಈಗಾಗಲೇ ಜರುಗುತ್ತಿವೆ.

ಈಗೀಗ ಘಟಾನುಘಟಿ ವೈದ್ಯರು, ನರತಜ್ಞರು, ವಿಜ್ಞಾನಿಗಳು… ಈಗಲೂ ಈ ಕಾಯಿಲೆಗೆ ಔಷಧಿಯನ್ನು ನಿಖರ ಕಾರ್‍ಯ ಕಾರಣವನ್ನು ಪರಿಹಾರವನ್ನು ಕಂಡು ಹಿಡಿಯಲು ಶ್ರಮಿಸುತ್ತಿದ್ದಾರೆ.

ಆದರೆ… ಜುಲೈ ೨೦೧೫ ರಲ್ಲಿ ಸರ್ರೆಯ ಕ್ರಿಟಿನ್ ನಿತ್ಯಾನಂದನ್ ಲಂಡನ್ ಶಾಲಾ ಬಾಲಕ ವಯಸ್ಸು ೧೫ ವರ್ಷ ಭಾರತೀಯ ಮೂಲದ ಬ್ರಿಟೀಶ್ ಪ್ರಜೆಯಾದ ಈತ ಈಗ ಮರೆಗುಳಿತನಕ್ಕೆ ಪರಿಹಾರ ಕಂಡು ಹಿಡಿದು, ಇಡೀ ಜಗತ್ತನ್ನು ನಿಬ್ಬೆರಗುಗೊಳಿಸಿದ್ದಾನೆ. ಅಬ್ಬಾ! ವಯಸ್ಸು ಕಿರಿದು ಸಾಧನೆ ಹಿರಿದು ಎಂದು ಹುಬ್ಬೇರುವಂತೆ ಮಾಡಿದ್ದಾನೆ. ಈ ಮರೆಗುಳಿತನ ಕಾಣಿಸಿಕೊಳ್ಳುವ ಹತ್ತು ವರ್ಷ ಮೊದಲೇ ಈ ರೋಗ ಲಕ್ಷಣಗಳನ್ನು ಗುರ್ತಿಸಿ ತಡೆಗಟ್ಟುವ ವಿಧಿವಿಧಾನವನ್ನು ಕಂಡು ಹಿಡಿದಿರುವನು.

ಈತನು ತನ್ನೆಲ್ಲ ಪ್ರಯೋಗ ವಿವರವಾದ ಸಂಶೋಧನಾ ವರದಿಗಳನ್ನು ಈಗಾಗಲೇ “ಗೂಗಲ್ ಸೈನ್ಸ್ ಫೇರ್ ಪ್ರೈಜ್‌ಗೆ” ಕಳಿಸಿದ್ದಾನೆ. ಅಲ್ಲಿ ಅಂತಿಮವಾಗಿದ್ದು ಬಹುಮಾನ ಕೂಡಾ ಬಂದಿದೆ!

ಈತನಕ ಮರೆಗುಳಿಗೆ ದಿವ್ಯ ಔಷಧಿಯನ್ನು ಕಂಡು ಹಿಡಿಯಲು ಹಲವು ಥರದ ಅರಿವಿನ ನಾನಾ ಪರೀಕ್ಷೆಗಳನ್ನು ನಡೆಸಬೇಕಾಗಿತ್ತು! ಇಲ್ಲವೆ ವ್ಯಕ್ತಿಯ ಸಾವಿನ ತರುವಾಯ ಆತನ ಮೆದುಳನ್ನು ಪರೀಕ್ಷೆಗೆ ಒಡ್ಡಬೇಕಾಗಿತ್ತು. ಇದು ಪೋಸ್ಟ್‌ಮಾರ್‍ಟಂ ಕೆಲಸವಾಗಿತ್ತು!

ಆದರೆ… ಸರ್ರೆಯ ಕ್ರಿಟನ್ ನಿತ್ಯಾನಂದನ್ ಈಗ ತಾನು ಟ್ರೋಜನ್ ಹಾರ್ಸ್ ಎಂಬ ಪ್ರತಿಕಾಯವನ್ನು ಬಹಳ ಕಷ್ಟಪಟ್ಟು ಸಂಶೋಧಿಸಿದ್ದು ಅದು ಮೆದುಳನ್ನು ಸಲೀಸಾಗಿ ಹೊಕ್ಕು ಅಲ್ಲಿರುವ ಮರೆಗುಳಿತನ ತರುವ ನ್ಯೂರೋಟಾಕ್ಸಿಕ್ ಪ್ರೋಟಿನ್‌ಗಳ ಜತೆ ಕೂಡಿಕೊಳ್ಳುವುವು…. ಹೀಗಾಗಿ ಮೊತ್ತ ಮೊದಲ ಪ್ರಯತ್ನದಲ್ಲಿಯೇ ಮರೆಗುಳಿತನವನ್ನು ಗುರ್ತಿಸಿದ್ದು ಪರಿಹಾರವೂ ದೊರಕಿರುವುದು!

ಈಗೀಗ ಬ್ರಿಟನ್ ದೇಶದಲ್ಲೇನು… ಇತರ ದೇಶ ವಿದೇಶಗಳಲ್ಲಿ ಕೂಡಾ ಮರೆಗುಳಿತನ ಬಹುದೊಡ್ಡ ಕಾಯಿಲೆಯಾಗಿ ಉಲ್ಬಣಗೊಳ್ಳುತ್ತಿದ್ದು ಇದಕ್ಕೊಂದು ಪರಿಹಾರ ಸಿಕ್ಕಂತಾಗಿದೆಯೆಂದು ನಿತ್ಯಾನಂದನ್ ಈಗಾಗಲೇ ಅಭಿಮಾನದಿಂದ ಸಾರಿಕೊಂಡಿದ್ದಾನೆ.

ನಾವು ನೀವು ಎಲ್ಲರೂ ನಿತ್ಯಾನಂದನ್‌ಗೆ ಆಲ್ ದಿ ಬೆಸ್ಟ್ ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...