Home / ಕವನ / ಕವಿತೆ / ತಾಯಿ-ಭೂಮಿ

ತಾಯಿ-ಭೂಮಿ

ತಾಯಿಯಂತೆ ಭರಿಸುವೆ ನಾ ಈ ಇವರುಗಳ
ನನ್ನನ್ನು ಹಂಚಿಕೊಂಡವರ ದೇಶದ ನೆಲವ
ಇಂಚಿಂಚು ತಿಂದವರ ನನ್ನ ಮನಸ್ಸೆಂಬ
ಸರೋವರದಲೀಸಾಡ ಬಂದವರ, ನನ್ನ
ಒಂದೊಂದು
ಮೂಲೆಯನೂ ತಮ್ಮದೆಂದು ಕೊಂಡವರ
ಗಲ್ಲಿಯ ಗುರುವೊಬ್ಬ ಜಗದ್ಗುರುವಾದಂತೆ
ನನ್ನ ಸಹಿಷ್ಣುತೆಯ ಅನಿವಾರ್ಯತೆಯ
ನರಿಯವರ,
ಒಲ್ಲದವರ, ತಮ್ಮ ಪೌರುಷಕೆಂದೇ ನೆಲವೆಂದವರ
ಹುಸಿ ಭ್ರಮೆಯಲಿ ಮಿಂದವರ ಮುನ್ನ ಶತ
ಕೋಟಿ ರಾಯರುಗಳಾಳಿದ ನೆಲವ ತನ್ನದೆಂದೆನುತ
ಶಾಸನವ ಬರೆಸಿದವರ, ಗರ್‍ವರಸ ಸೋರಿದವರ.

ಒಂದು ಮಳೆಗೆಂದೂ ನೆನೆಯದ ಭೂಮಿ
ಕಾದಿರುವಂತೆ ಹತ್ತಾರು ಮಳೆಗೆ ಕಾದಿರುವೆ
ನಾನು, ತೆರೆದಂತೆ ಭಾನು ಈ ಜಗದ
ಮೂಲೆ ಮೂಲೆಯಲಿರುವ ಈ ಇವರ
ಒಂದೊಂದೇ ಫೋನಿಗಾಗಿ, ಒಂದೊಂದೇ ಪತ್ರ
ಕಾಗಿ, ಒಂದೊಂದೇ ಭೇಟಿಗಾಗಿ, ತನ್ನಿಂದಲೇ
ಇವಳು ಎಂಬ ಇವರ ಭ್ರಮೆಗಾಗಿ

ಏಕಿವರು ಅರ್ಥಮಾಡಿಕೊಳ್ಳುವುದಿಲ್ಲ
ಎಂದು ಕೊರಗಿದ್ದೇನೆ, ಏಕಿವರು
ಸಹಿಸುವುದಿಲ್ಲ ಎಂದು ಮರುಗಿದ್ದೇನೆ.
ಚಲನೆಯ ನಿಯಮದ ಆಳ ತಿಳಿಯದ
ಇವರ ಅಜ್ಞಾನಕೆ ಅತ್ತಿದ್ದೇನೆ. ತಾನು
ತುಂಬಲಾರದ ಶೂನ್ಯವ ತುಂಬಲಿರುವ
ಇನ್ನೊಂದು ಬರುವಿಕೆಯನಿವರೇಕೆ
ಅರಿಯಬಾರದು ಎಂದು ವಾದಿಸಿದ್ದೇನೆ.
ಮುಖ ಊದಿಸಿದ್ದೇನೆ ಬಾಯಿಮಾತ್ರ
ಬಿಡಲಾರೆ, ಬಿಟ್ಟರೆ ಮಾರಾಮಾರಿ.

ಇವರೇ ರಾವಣ ಕುಂಭಕರ್‍ಣರಾಗುತ್ತಾರೆ
ತಾವು ರಾಮ ಲಕ್ಷ್ಮಣರೆಂದೇ ಭಾವಿಸುತ್ತಾರೆ.
ದುರ್ಯೋಧನನ ಒಳಗೇ ಅಡಗಿ ಕುಳಿತು ಕೃಷ್ಣ
ನಂತೆ ನಟಿಸುತ್ತಾರೆ ಇವರು ಯಾವ ರಾಮಾ
ಯಣ ಭಾರತ ಬರೆಯುವುದು ಬೇಡ.
ಮಳೆ ಹನಿ ಹೇಗೆ ಹಸಿರೊಡೆಸಿ ಕರ್ತವ್ಯ ತೀರಿಸಿ
ನಡೆಯುವುದೋ ಹಾಗೆ ಬಾಳಿರೋ
ಎಂದು ಬುದ್ದಿ ಹೇಳಿದ್ದೇನೆ. ಏಕಾಂತದಲಿ
ಕಚ್ಚಾಡಿದ್ದೇನೆ.
ಅವನ ಸುದ್ದಿ ಇವನ ಬಳಿ ಇವನ ಸುದ್ದಿ ಅವನ
ಬಳಿ ಎತ್ತುವಂತಿಲ್ಲ ಕುರುಕ್ಷೇತ್ರ ಕಣ್ಣ
ಪಟ್ಟಿ, ಕಟ್ಟಿದ ಗಾಂಧಾರಿಯಂತ ಒಳಗೊಳಗೇ
ಕುದ್ದಿದ್ದೇನೆ. ಇವರು ಹರಿದು ಚಿಂದಿ
ಮಾಡಿದ ಈ ತೇಪೆ ದೇಹದ ಮೇಲೆಲ್ಲಾ
ನನ್ನ ಕರುಣೆಯ ವರ್ಷ ಸುರಿಸಿದ್ದೇನೆ.
ಒಂದೇ ತಟ್ಟೆಯಲಿವರಿಗೆ ಉಣಬಡಿಸಿದ್ದೇನೆ.
ಉಣ್ಣುತ್ತಲೇ ತನ್ನದು ತಟ್ಟೆ ಎಂದು ಭಾವಿಸುವ
ಅವರ ಮೂರ್‍ಖತನವ ಸೆರಗಿನಲಿ ಮುಚ್ಚಿ
ಇನ್ನೊಬ್ಬನಿಗೆ ತುತ್ತಿಕ್ಕಿದ್ದೇನೆ. ಸದಾ ಇವರಿ
ಗಾಗಿ ಬಿಕ್ಕಿದ್ದೇನೆ ಮತ್ತು ಇನ್ನೂ ಬದುಕಿದ್ದೇನೆ.
*****
-ಗಾಂಧಿ ಬಜಾರ್ ಪತ್ರಿಕೆ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...