Home / ಕವನ / ಕವಿತೆ / ತಾಯಿ-ಭೂಮಿ

ತಾಯಿ-ಭೂಮಿ

ತಾಯಿಯಂತೆ ಭರಿಸುವೆ ನಾ ಈ ಇವರುಗಳ
ನನ್ನನ್ನು ಹಂಚಿಕೊಂಡವರ ದೇಶದ ನೆಲವ
ಇಂಚಿಂಚು ತಿಂದವರ ನನ್ನ ಮನಸ್ಸೆಂಬ
ಸರೋವರದಲೀಸಾಡ ಬಂದವರ, ನನ್ನ
ಒಂದೊಂದು
ಮೂಲೆಯನೂ ತಮ್ಮದೆಂದು ಕೊಂಡವರ
ಗಲ್ಲಿಯ ಗುರುವೊಬ್ಬ ಜಗದ್ಗುರುವಾದಂತೆ
ನನ್ನ ಸಹಿಷ್ಣುತೆಯ ಅನಿವಾರ್ಯತೆಯ
ನರಿಯವರ,
ಒಲ್ಲದವರ, ತಮ್ಮ ಪೌರುಷಕೆಂದೇ ನೆಲವೆಂದವರ
ಹುಸಿ ಭ್ರಮೆಯಲಿ ಮಿಂದವರ ಮುನ್ನ ಶತ
ಕೋಟಿ ರಾಯರುಗಳಾಳಿದ ನೆಲವ ತನ್ನದೆಂದೆನುತ
ಶಾಸನವ ಬರೆಸಿದವರ, ಗರ್‍ವರಸ ಸೋರಿದವರ.

ಒಂದು ಮಳೆಗೆಂದೂ ನೆನೆಯದ ಭೂಮಿ
ಕಾದಿರುವಂತೆ ಹತ್ತಾರು ಮಳೆಗೆ ಕಾದಿರುವೆ
ನಾನು, ತೆರೆದಂತೆ ಭಾನು ಈ ಜಗದ
ಮೂಲೆ ಮೂಲೆಯಲಿರುವ ಈ ಇವರ
ಒಂದೊಂದೇ ಫೋನಿಗಾಗಿ, ಒಂದೊಂದೇ ಪತ್ರ
ಕಾಗಿ, ಒಂದೊಂದೇ ಭೇಟಿಗಾಗಿ, ತನ್ನಿಂದಲೇ
ಇವಳು ಎಂಬ ಇವರ ಭ್ರಮೆಗಾಗಿ

ಏಕಿವರು ಅರ್ಥಮಾಡಿಕೊಳ್ಳುವುದಿಲ್ಲ
ಎಂದು ಕೊರಗಿದ್ದೇನೆ, ಏಕಿವರು
ಸಹಿಸುವುದಿಲ್ಲ ಎಂದು ಮರುಗಿದ್ದೇನೆ.
ಚಲನೆಯ ನಿಯಮದ ಆಳ ತಿಳಿಯದ
ಇವರ ಅಜ್ಞಾನಕೆ ಅತ್ತಿದ್ದೇನೆ. ತಾನು
ತುಂಬಲಾರದ ಶೂನ್ಯವ ತುಂಬಲಿರುವ
ಇನ್ನೊಂದು ಬರುವಿಕೆಯನಿವರೇಕೆ
ಅರಿಯಬಾರದು ಎಂದು ವಾದಿಸಿದ್ದೇನೆ.
ಮುಖ ಊದಿಸಿದ್ದೇನೆ ಬಾಯಿಮಾತ್ರ
ಬಿಡಲಾರೆ, ಬಿಟ್ಟರೆ ಮಾರಾಮಾರಿ.

ಇವರೇ ರಾವಣ ಕುಂಭಕರ್‍ಣರಾಗುತ್ತಾರೆ
ತಾವು ರಾಮ ಲಕ್ಷ್ಮಣರೆಂದೇ ಭಾವಿಸುತ್ತಾರೆ.
ದುರ್ಯೋಧನನ ಒಳಗೇ ಅಡಗಿ ಕುಳಿತು ಕೃಷ್ಣ
ನಂತೆ ನಟಿಸುತ್ತಾರೆ ಇವರು ಯಾವ ರಾಮಾ
ಯಣ ಭಾರತ ಬರೆಯುವುದು ಬೇಡ.
ಮಳೆ ಹನಿ ಹೇಗೆ ಹಸಿರೊಡೆಸಿ ಕರ್ತವ್ಯ ತೀರಿಸಿ
ನಡೆಯುವುದೋ ಹಾಗೆ ಬಾಳಿರೋ
ಎಂದು ಬುದ್ದಿ ಹೇಳಿದ್ದೇನೆ. ಏಕಾಂತದಲಿ
ಕಚ್ಚಾಡಿದ್ದೇನೆ.
ಅವನ ಸುದ್ದಿ ಇವನ ಬಳಿ ಇವನ ಸುದ್ದಿ ಅವನ
ಬಳಿ ಎತ್ತುವಂತಿಲ್ಲ ಕುರುಕ್ಷೇತ್ರ ಕಣ್ಣ
ಪಟ್ಟಿ, ಕಟ್ಟಿದ ಗಾಂಧಾರಿಯಂತ ಒಳಗೊಳಗೇ
ಕುದ್ದಿದ್ದೇನೆ. ಇವರು ಹರಿದು ಚಿಂದಿ
ಮಾಡಿದ ಈ ತೇಪೆ ದೇಹದ ಮೇಲೆಲ್ಲಾ
ನನ್ನ ಕರುಣೆಯ ವರ್ಷ ಸುರಿಸಿದ್ದೇನೆ.
ಒಂದೇ ತಟ್ಟೆಯಲಿವರಿಗೆ ಉಣಬಡಿಸಿದ್ದೇನೆ.
ಉಣ್ಣುತ್ತಲೇ ತನ್ನದು ತಟ್ಟೆ ಎಂದು ಭಾವಿಸುವ
ಅವರ ಮೂರ್‍ಖತನವ ಸೆರಗಿನಲಿ ಮುಚ್ಚಿ
ಇನ್ನೊಬ್ಬನಿಗೆ ತುತ್ತಿಕ್ಕಿದ್ದೇನೆ. ಸದಾ ಇವರಿ
ಗಾಗಿ ಬಿಕ್ಕಿದ್ದೇನೆ ಮತ್ತು ಇನ್ನೂ ಬದುಕಿದ್ದೇನೆ.
*****
-ಗಾಂಧಿ ಬಜಾರ್ ಪತ್ರಿಕೆ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...