Home / ಕವನ / ಕವಿತೆ / ಇಳೆ-ಮಳೆ

ಇಳೆ-ಮಳೆ

ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ
ಹುಯ್ಯೋ ಹುಯ್ಯೋ ಮಳೆರಾಯ ಹೂವಿನ ತೋಟಕೆ ನೀರಿಲ್ಲ.
-ಜಾನಪದ ಗೀತೆ


ಇವಳೊಂದು ಪ್ರತಿಮೆ ಇವನೊಂದು ಪ್ರತಿಮೆ
ಇವಳಿಗಾಗಿ ಇವನೋ ಇವನಿಗಾಗಿ ಇವಳೋ
ಋತು ಋತುವಿಗೂ ಬೇರೆ ಬೇರೆ ರೂಪ ಇವನದೇ ಬೆಳೆ
ಇವನಿಗಾಗಿ ಕಾದು ಕಾದು ಕಾಯುತ್ತಿರುವ ಇವಳೇ ಇಳೆ.
ಇಳಾ ಎಂದರು ಧರಿತ್ರೀ ಎಂದರು.
ಸುಳ್ಳು ಸುಳ್ಳೇ ಕ್ಷಮಯಾ
ಧರಿತ್ರಿ ಎಂದೂ ಅಂದುಕೊಂಡಿದ್ದರು. ಇವನ ಹೆಸರು
ಗಳೋ ಅಪರಿಮಿತ ಸ್ವಾತಿ, ಉತ್ತರಾ,
ಧನಿಷ್ಠಾ, ಮುಂಗಾರೇ ಇವನ ಮೊದಲ ರೂಪ, ಉಳಿದುದೆಲ್ಲಾ ಇವನದೇ ಬೇರೆ
ಬೇರೆ ಕೋಪ ತಾಪ.
ಇವನಾರ್‍ಭಟಕೆ ನಡುಗಿದರೂ
ಸಡಗರಗೊಂಡು ಮೆರೆಯುವ
ಇವಳು ತಪಿಸಿದ್ದಳು ತಾಪಿಸಿದ್ದಳು. ತನ್ನ ಸುತ್ತಮುತ್ತ
ಬಿರುಕು ಬಿಟ್ಟಿದ್ದಳು. ಮಕ್ಕಳ ತಲೆಗೂದಲ ಎಲೆ ಎಲೆ
ಉದುರಿಸಿದ್ದಳು. ಬಿಳಿ ಸೀರೆ ಉಡಿಸಿದ್ದಳು.
ಬೋಳು ಬೋಳಾಗಿಸಿದ್ದಳು
ಅಳಿಸಿದ್ದಳು. ಕಾಡಿಸಿದ್ದಳು ಹಾಗೇ ಕಾಯಿಸಿದ್ದಳು.


ಕಾದಿದ್ದ ಇವಳನು ಕಂಡ ಅವನು ಬಂದೇ ಬಂದ.
ಇಂಚಿಂಚು ನೆಲದಲ್ಲಿ ತನ್ನ ಬೇರಿಳಿಸಿ ರಸ್ತೆ ರಸ್ತೆ ಹರಿದು
ಹೊಂಡವಾಗಿಸಿ ಸುಮ್ಮನೇ ಸುರಿದು
ಸುರಿದ, ಅಂತರ್‍ಜಲವಾಗಿ
ನೀರಾಗಿ ಕೊಚ್ಚೆಯಾಗಿ ರಾಡಿಯಾಗಿ ಅಲಿಕಲ್ಲಾಗಿ ಹಿಮ
ಪಾತವಾಗಿ ಮೆರೆದ ತನ್ನ ಎರಡೂ ಮುಖ ತೋರಿದ.


ಕಾದಿದ್ದ ಕೆಂಡವಾಗಿದ್ದ ಜ್ವರವೇರಿದ್ದ
ಅವಳನು ತಣಿಸಲೋ
ದಣಿಸಲೋ ದಂಡಿಸಲೋ ಎಂಬಂತೆ ಒಂದೇ
ಸಮನೇ ಸುರಿದ.
ಒನಕೆ ಮಳೆ ಜಡಿತ, ಆ ಕ್ಷಣಕೆ ಸಂತೃಪ್ತಿ.
ತೇಗಿ ತೇವವಾದ
ಅವಳು ಕಣ್ಣೆವೆ ತೆರೆಯುವಷ್ಟರಲ್ಲಿ
ಮತ್ತೆ ಒಣಗಿ ಬಾಯಾ
ರಿದಳು ಇವಳ ಹಣೆಬರಹ ಇವಳದು ಇದೇ ಗೋಳು.


ತಣಿಸಿದರೆ ಸಾಯುವ ಮತ್ತೆ ಹುಟ್ಟುವ
ಇವಳ ಈ ದಾಹ ಇಂಗದ ಬಾಯ ತುಂಬಲು
ಋತು ಋತುವಿಗೂ ಬರುವ ಮಳೆರಾಯ
ಬಾರೋ ಬಾರೋ ನೀರಿಲ್ಲ ನೀರಿಲ್ಲ
ಕಾದಿದ ಧರೆಯಲ್ಲಾ
*****
-ಪ್ರಜಾವಾಣಿ ದೀಪಾವಳಿ ವಿಶೇಷಾಂಕ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...