Home / ಕವನ / ಕವಿತೆ / ಇಳೆ-ಮಳೆ

ಇಳೆ-ಮಳೆ

ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ
ಹುಯ್ಯೋ ಹುಯ್ಯೋ ಮಳೆರಾಯ ಹೂವಿನ ತೋಟಕೆ ನೀರಿಲ್ಲ.
-ಜಾನಪದ ಗೀತೆ


ಇವಳೊಂದು ಪ್ರತಿಮೆ ಇವನೊಂದು ಪ್ರತಿಮೆ
ಇವಳಿಗಾಗಿ ಇವನೋ ಇವನಿಗಾಗಿ ಇವಳೋ
ಋತು ಋತುವಿಗೂ ಬೇರೆ ಬೇರೆ ರೂಪ ಇವನದೇ ಬೆಳೆ
ಇವನಿಗಾಗಿ ಕಾದು ಕಾದು ಕಾಯುತ್ತಿರುವ ಇವಳೇ ಇಳೆ.
ಇಳಾ ಎಂದರು ಧರಿತ್ರೀ ಎಂದರು.
ಸುಳ್ಳು ಸುಳ್ಳೇ ಕ್ಷಮಯಾ
ಧರಿತ್ರಿ ಎಂದೂ ಅಂದುಕೊಂಡಿದ್ದರು. ಇವನ ಹೆಸರು
ಗಳೋ ಅಪರಿಮಿತ ಸ್ವಾತಿ, ಉತ್ತರಾ,
ಧನಿಷ್ಠಾ, ಮುಂಗಾರೇ ಇವನ ಮೊದಲ ರೂಪ, ಉಳಿದುದೆಲ್ಲಾ ಇವನದೇ ಬೇರೆ
ಬೇರೆ ಕೋಪ ತಾಪ.
ಇವನಾರ್‍ಭಟಕೆ ನಡುಗಿದರೂ
ಸಡಗರಗೊಂಡು ಮೆರೆಯುವ
ಇವಳು ತಪಿಸಿದ್ದಳು ತಾಪಿಸಿದ್ದಳು. ತನ್ನ ಸುತ್ತಮುತ್ತ
ಬಿರುಕು ಬಿಟ್ಟಿದ್ದಳು. ಮಕ್ಕಳ ತಲೆಗೂದಲ ಎಲೆ ಎಲೆ
ಉದುರಿಸಿದ್ದಳು. ಬಿಳಿ ಸೀರೆ ಉಡಿಸಿದ್ದಳು.
ಬೋಳು ಬೋಳಾಗಿಸಿದ್ದಳು
ಅಳಿಸಿದ್ದಳು. ಕಾಡಿಸಿದ್ದಳು ಹಾಗೇ ಕಾಯಿಸಿದ್ದಳು.


ಕಾದಿದ್ದ ಇವಳನು ಕಂಡ ಅವನು ಬಂದೇ ಬಂದ.
ಇಂಚಿಂಚು ನೆಲದಲ್ಲಿ ತನ್ನ ಬೇರಿಳಿಸಿ ರಸ್ತೆ ರಸ್ತೆ ಹರಿದು
ಹೊಂಡವಾಗಿಸಿ ಸುಮ್ಮನೇ ಸುರಿದು
ಸುರಿದ, ಅಂತರ್‍ಜಲವಾಗಿ
ನೀರಾಗಿ ಕೊಚ್ಚೆಯಾಗಿ ರಾಡಿಯಾಗಿ ಅಲಿಕಲ್ಲಾಗಿ ಹಿಮ
ಪಾತವಾಗಿ ಮೆರೆದ ತನ್ನ ಎರಡೂ ಮುಖ ತೋರಿದ.


ಕಾದಿದ್ದ ಕೆಂಡವಾಗಿದ್ದ ಜ್ವರವೇರಿದ್ದ
ಅವಳನು ತಣಿಸಲೋ
ದಣಿಸಲೋ ದಂಡಿಸಲೋ ಎಂಬಂತೆ ಒಂದೇ
ಸಮನೇ ಸುರಿದ.
ಒನಕೆ ಮಳೆ ಜಡಿತ, ಆ ಕ್ಷಣಕೆ ಸಂತೃಪ್ತಿ.
ತೇಗಿ ತೇವವಾದ
ಅವಳು ಕಣ್ಣೆವೆ ತೆರೆಯುವಷ್ಟರಲ್ಲಿ
ಮತ್ತೆ ಒಣಗಿ ಬಾಯಾ
ರಿದಳು ಇವಳ ಹಣೆಬರಹ ಇವಳದು ಇದೇ ಗೋಳು.


ತಣಿಸಿದರೆ ಸಾಯುವ ಮತ್ತೆ ಹುಟ್ಟುವ
ಇವಳ ಈ ದಾಹ ಇಂಗದ ಬಾಯ ತುಂಬಲು
ಋತು ಋತುವಿಗೂ ಬರುವ ಮಳೆರಾಯ
ಬಾರೋ ಬಾರೋ ನೀರಿಲ್ಲ ನೀರಿಲ್ಲ
ಕಾದಿದ ಧರೆಯಲ್ಲಾ
*****
-ಪ್ರಜಾವಾಣಿ ದೀಪಾವಳಿ ವಿಶೇಷಾಂಕ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...