Home / ಕವನ / ಕವಿತೆ / ವೃಷಭಾವತಿ

ವೃಷಭಾವತಿ

ವೃಷಭಾವತಿ ಒಮ್ಮೆ ಹರಿದು ಉಕ್ಕೇರಿ ನೆಲ ಜಲ ಹೊಲ
ಭೇದ ಭಾವವಿಲ್ಲದೇ ಉಣಿಸಿದ್ದಳು ಎಲ್ಲರನೂ ತಣಿಸಿದ್ದಳು
ಈಗೇಕೆ ವಿಷವಾದೆ ನಾನು ಎಂದು ಪರಿತಪಿಸುತ್ತಾಳೆ. ತನಗೆ ವಿಷ
ವೂಡಿದವರ ಕಾಣಲಾಗದೇ ಹಿಡಿಯಲಾಗದೇ ತಡೆಯಲಾಗದೇ ಹೀಗೆ

ತುಂಬಿ ಹರಿಯುತ್ತಿದ್ದ ನದಿಗೆ ವಿಷವಿಕ್ಕಿದವರ್‍ಯಾರು ಕಾಲವೆ?
ಕಾಳಜಿಯೆ? ಸ್ವಾರ್‍ಥವೇ? ಮತ್ಸರವೇ? ಅಥವಾ ಒಳಗಿನದೇ
ಏನೋ ತಾಪವೆ? ತೋಚುವುದಿಲ್ಲ ನನಗಂತೂ ಏನೂ
ಈಗಿಲ್ಲಿ ಮಿಂದವರೇ ಪಾಪಿಗಳು ಅವರ ತಲೆ ತುಂಬ ಹೇನು.

ಉರಿವ ಸೂರ್‍ಯನಿಗೂ ಇಲ್ಲ ಕರುಣೆ
ಆವಿಯಾಗಿಸಿ ಬಿಡುತ್ತಾನೆ ನನ್ನೆಲ್ಲ ಬವಣೆ
ಸುರಿಸುವುದೂ ಇಲ್ಲ ನನ್ನೆದೆಯ ಜಲವ ನನಗೆ
ಮಳೆಯಾಗಿಸಿ ಕೊಂಡೊಯ್ಯುತ್ತಾನೆ ಇನ್ನೊಬ್ಬರ ಮನೆಗೆ

ಕಚ್ಚುವಂತಾದುದೇಕೆ ನಾನು ವಿಷ ಸರ್ಪದಂತೆ
ಕೇಳಿ ಭಾರತದ ಎಲ್ಲ ಕಾರ್‍ಖಾನೆಗಳ ತೆಗೆಸಿ ಅವರ
ಲೆಕ್ಕ ಪತ್ರದ ಕಂತೆ. ಅವರಿಗೆ ಬೇಕಿತ್ತೆ ಹೇಳಿ
ಹರಿವ ಜೀವದಾಯಿನಿಯಲ್ಲಿ ಅವರ ಕೊಳಕು ಜಲಕೇಳಿ

ಅಂದಿನೊಬ್ಬ ಪ್ರಿಯಕರ ಬಂದು ಕೇಳುತ್ತಾನೆ ಮತ್ತೆ ಮತ್ತೆ
ವೃಷಭಾವತಿ ಹರಿಯಲಾರೆಯ ನೀನು ಹಿಂದಿನಂತೆ
ಹರಿವ ಬಯಕೆ ನನಗಿದೆ ಗೆಳೆಯ ಹರಿದೇನು ನಾನು
ತುಂಬಿ ಸುರಿದೇನು ನಾನು ಸೋಸಿಬಿಡು ಈ ಕೊಳೆಯ
ಪಿಸು ಮಾತಿನಲಿ ಉಸುರುತ್ತೇನೆ ನಾನು

ದಿನ ದಿನದ ಧಾರೆಯಲಿ ಕಾಯುತ್ತೇನೆ ಅವನಿಗಾಗಿ
ಮತ್ತೊಮ್ಮೆ ಅಮೃತವಾಗಿ ಹರಿವ ಬಯಕೆ ಅದ್ಯಮವಾಗಿ
ಎತ್ತಿಕೋ ಗೆಳೆಯಾ ಹಿಡಿದಪ್ಪಿಕೋ ಹೀಗೆ, ಒಳಗಿನ ಕಲ್ಮಶ
ಒಳಗೇ ಉಳಿದು ತಿಳಿನೀರು ಬರುವ ಹಾಗೆ ಮತ್ತೊಮ್ಮೆ
ನನ್ನೆದೆಯ ಅಲೆಗಳಲಿ ಈ ಜೋಣ ಹೀಗೆ ಮತ್ತೆಂದೂ
ಒಳಸರಿಯದ ಹಾಗೆ ನೆಲಮುಗಿಲ ನಡುವಣ ಪ್ರಕೃತಿಯ ಹಾಗೆ

ತಡೆದು ನಿಲ್ಲಿಸು ಆ ಕಾರ್‍ಖಾನೆಗಳ ಕೊಳಕು ಧಾರೆ
ಹರಿಯ ಬಿಡು ಅವುಗಳನ್ನು ಆ ಸಮುದ್ರದ ಮೇರೆ
ಆ ದೈತ್ಯನಾದರೋ ಎಲ್ಲವನು ನುಂಗಿ ನೀರು ಕುಡಿದಾನು
ಹಬ್ಬಿಕೊಳ್ಳಲಿ ನಮಗೆ ನಮ್ಮ ನೆಲದಡಿಯ ಬಾನು
*****
-ಕರ್ಮವೀರ ದೀಪಾವಳಿ ವಿಶೇಷಾಂಕ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...