Home / ಲೇಖನ / ಇತರೆ / ಸಂತೋಷ

ಸಂತೋಷ

ಸಂತೋಷ – ಹೆಪಿನೆಸ್ – ಎನ್ನುವುದು ಒಂದು ಮರೀಚಿಕೆ. ಹಿಡಿಯಲು ಹೋದರೆ ಜಾರಿಕೊಳ್ಳುತ್ತದೆ. ಹುಡುಕಲು ಹೋದರೆ ಸಿಗುವುದಿಲ್ಲ. ಯಾವುದನ್ನೋ ಗುರಿ ಇಟ್ಟುಕೊಂಡು ಹುಡುಕುತ್ತಾ ಹತ್ತಿರ ಹೋದರೆ ದೂರದೂರ ಓಡುತ್ತದೆ. ಇದರಲ್ಲೇ ನಮ್ಮ ಸಂತೋಷ ಇದೆ ಎಂದು ಯಾವುದಾದರೂ ಒಂದನ್ನು ಹಿಡಿದುಕೊಂಡರೆ ಮುಂದೊಂದು ದಿನ ಇದೇ ದುಃಖಕ್ಕೆ ನಾಂದಿಯಾಯಿತಲ್ಲ ಎನ್ನುವ ಕೊರಗು ಹುಟ್ಟಿಕೊಳ್ಳುತ್ತದೆ. ಸಂತೋಷ ಸಿಗುತ್ತದೆ ಎಂದು ಎಣಿಸಿದಲ್ಲಿ ಸಿಗುವುದಿಲ್ಲ. ಕೆಲವೊಮ್ಮೆ ಇಲ್ಲ ಎಂದು ಎಣಿಸಿದಲ್ಲಿ ಸಿಗುತ್ತದೆ. ಹಾಗಾಗಿ ಸಂತೋಷಕ್ಕೊಂದು ಇಕ್ವೆಶನ್ ಹಾಕುವುದೂ ಸಾಧ್ಯವಿಲ್ಲ. ಸಂತೋಷ ಎನ್ನುವುದು ನಮ್ಮ ಮನದ ಒಂದು ಭಾವನೆ.

ನಮ್ಮ ಮನೋಭೂಮಿಕೆ ಮಿತಿಯಿಲ್ಲದಷ್ಟು ವಿಶಾಲವಾಗಿದೆ. ಹಲವಾರು ಭಾವನೆಗಳ ಆಗರವಾಗಿದೆ. ಮನದಂಗಳದಲ್ಲಿ ಆಸೆಗಳ ಮೂಟೆಮೂಟೆಗಳೇ ರಾಶಿ ಬಿದ್ದಿರುತ್ತವೆ. ಎಡೆಬಿಡದ ಬೇಕು ಬೇಡಗಳು ಕಾಡಿಸುತ್ತಲೇ ಇರುತ್ತವೆ. ಅಳೆಯಲಾಗದ ಆಳದಿಂದ ಆಸೆಗಳು, ಅಗತ್ಯಗಳು, ನಿರೀಕ್ಷೆಗಳು ಉದ್ಭವವಾಗುತ್ತಲೇ ಇರುತ್ತವೆ. ಇವುಗಳಿಗೆ ತಕ್ಕ ಹಾಗೆ ಸಂತೋಷದ ಇಕ್ವೇಷನ್ ಬದಲಾಗುತ್ತಾ ಹೋಗುತ್ತದೆ.

ಹಾಗಾದರೆ ಸಂತೋಷ ಅಂದರೆ ಏನು? ಅದು ಎಲ್ಲಿ ಹೇಗೆ ಸಿಗುತ್ತದೆ? ಅದನ್ನು ನಮ್ಮದಾಗಿಸಿಕೊಳ್ಳುವುದು ಹೇಗೆ? ಸಂತೋಷದ ಹುಡುಕಾಟ ಎನ್ನುವುದು ಒಂದು ಭ್ರಮೆಯೇ? ಧರ್ಮಗ್ರಂಥಗಳಲ್ಲಿ ಇದಕ್ಕೆ ಉತ್ತರಗಳಿವೆ. ಸಂತರು, ಚಿಂತಕರು ಇದಕ್ಕೆ ಬೇರೆ ಬೇರೆ ರೀತಿಯಲ್ಲಿ ಉತ್ತರ ಹೇಳಿದ್ದಾರೆ. ಹೇಳುತ್ತಿದ್ದಾರೆ. ಆದರೆ ಒಬ್ಬ ಸಾಮಾನ್ಯ ಮನುಷ್ಯಳಾಗಿ ನನಗನಿಸುವುದು ಸಂತೋಷ ಎನ್ನುವುದು ಒಂದು ಭ್ರಮೆಯಲ್ಲದೆ ಬೇರೆ ಏನೂ ಅಲ್ಲ ಎಂದು. ನಾವು ಎಣಿಸಿದುದರಲ್ಲಿ ಸಂತೋಷ ಸಿಗುವುದಿಲ್ಲ ಎನ್ನುವುದು ಗೊತ್ತಿದ್ದರೂ ಅದನ್ನು ಹುಡುಕಿಕೊಂಡು ಹೋಗುತ್ತೇವೆಯಲ್ಲ ಅಲ್ಲೇ ಸಂತೋಷದ ಅವಸಾನವಾಗಿರುತ್ತದೆ. ಸಂತೋಷದ ಹುಡುಕಾಟವೇ ದುಃಖದ ಮೂಲ.

ಆದರೂ ಎಲ್ಲರಿಗೂ ಬೇಕಾಗಿರುವುದು ಸುಖ, ಸಂತೋಷ, ಸರಿಯಾಗಿ ಆಲೋಚಿಸಿದರೆ, ಸಂತೋಷ ಸಿಗುವುದು ಹೊರಗಿನ ಸುಖಗಳಿಂದಲ್ಲ. ನಮ್ಮೊಳಗಿನ ಭಾವನೆಗಳಿಂದ. ನಮ್ಮ ಭಾವನೆಗಳನ್ನು ನಿಯಂತ್ರಿಸುವುದರಿಂದ ಅದನ್ನು ಪಡೆದುಕೊಳ್ಳುವುದು ಸಾಧ್ಯ. ನಾವು ಏನನ್ನಾದರೂ ಗೆದ್ದರೆ, ನಮಗೆ ಬೇಕಾದ್ದು ಏನಾದರೂ ಸಿಕ್ಕಿದರೆ, ನಮಗೆ ಬೇಕಾದಂತೆ ಎಲ್ಲವೂ ನಡೆದರೆ ಸಂತೋಷ ಸಿಗುತ್ತದೆ ಎನ್ನುವುದು ಒಂದು ಭ್ರಮೆ. ಇದರಕ್ಕಿಂತ ಏನಾದರೂ ಒಳ್ಳೆಯದನ್ನು ಯೋಚಿಸಿದರೆ ಯಾರಿಗಾದರೂ ಒಳ್ಳೆಯದನ್ನು ಮಾಡಿದರೆ ಸಂತೋಷ ಸಿಗುತ್ತದೆ. ಸಂತೋಷ ಎನ್ನುವುದು ನಮ್ಮೊಳಗೇ ಇದೆ. ನಮ್ಮ ಮನಸ್ಸಿನಲ್ಲಿ, ನಮ್ಮ ಹೃದಯದಲ್ಲಿ, ನಮ್ಮ ಅರಿವಿನಲ್ಲಿ, ನಮ್ಮ ಆಯ್ಕೆಯಲ್ಲಿ, ನಮ್ಮ ಗುರುತಿಸುವಿಕೆಯಲ್ಲಿ, ನಾವು ಜೀವನವನ್ನು ನೋಡುವ ದೃಷ್ಟಿಯಲ್ಲಿ, ನಾವು ಜೀವಿಸುವ ರೀತಿಯಲ್ಲಿ ಸಂತೋಷದ ಒಸರಿದೆ. ನಾವು ಅನುಭವಿಸುವ ದುಃಖದಲ್ಲಿ ಸಂತೋಷದ ಅಂಶವಿದೆ. ಅನುಭವಿಸುವ ಸಂತೋಷದಲ್ಲಿ ದುಃಖದ ಒಳಹರಿವಿದೆ. ಇದನ್ನು ಗುರುತಿಸುವ ದಾರಿಯನ್ನು ಕಂಡುಕೊಂಡರೆ ಸಂತೋಷ ಎನ್ನುವುದು ನಮ್ಮ ಹತ್ತಿರದಲ್ಲೇ ಎಲ್ಲೋ ಸುಳಿಯುತ್ತಿದೆ ಎನ್ನುವ ಅರಿವಾಗುತ್ತದೆ. ಉದಾಹರಣೆಗೆ ನಮ್ಮ ಅತ್ಯಂತ ಪ್ರೀತಿ ಪಾತ್ರರಿಂದ ದೂರವಾಗುವ ದುಃಖವನ್ನೇ ತೆಗೆದುಕೊಂಡರೆ ಆ ದುಃಖದಲ್ಲಿ ನಮಗೆ ಅವರೆಷ್ಟು ಪ್ರೀತಿಯವರು ಎನ್ನುವ ಸಂತೋಷದ ಅರಿವಿದೆ. ಈ ಪ್ರೀತಿಯೆನ್ನುವ ಸಂತೋಷದ ಅರಿವಿನಿಂದಲೇ ಅವರ ಅಗಲಿಕೆ ನಮಗೆ ನೋವನ್ನು ತರುತ್ತದೆ. ಸಂತೋಷ ಮತ್ತು ದುಃಖ ಒಂದರೊಳಗೊಂದು ಸೇರಿಕೊಂಡೇ ಇದೆ. ಸ್ವಲ್ಪ ಆಳವಾಗಿ ಯೋಚಿಸಿದರೆ ಇದಕ್ಕೆ ಉದಾಹರಣೆಗಳನ್ನು ನಾವೇ ಕಂಡುಕೊಳ್ಳಬಹುದು.

ಸಂತೋಷವನ್ನು ಹುಡುಕಿಕೊಂಡು ಅಲೆಯುವವನಿಗಿಂತ ಏನು ಲಭ್ಯವಾಗಿದೆಯೋ ಆದರಲ್ಲಿಯೇ ಸಂತೋಷವನ್ನು ಕಂಡುಕೊಳ್ಳುವವನಿಗೆ ನಿಜವಾದ ಸಂತೋಷ ಯಾವಾಗಲೂ ಸಿಗುತ್ತದೆ. ಇದ್ದುದರಲ್ಲಿಯೇ ಸಂತೋಷವನ್ನು ಹುಡುಕಿಕೊಳ್ಳುವ ಮನೋಭಾವ ಜೀವನದ ರೀತಿಯೇ ಆದಾಗ ಸಂತೋಷವನ್ನು ಹುಡುಕುವ, ಹುಡುಕಿಕೊಂಡು ಹೋಗಿ ಸಿಗದಾಗ ನಿರಾಶರಾಗುವ ಪ್ರಮೇಯವೇ ಎದುರಾಗುವುದಿಲ್ಲ. ಸಂತೋಷ ಯಾವಾಗಲೂ ನಮ್ಮ ಜೊತೆಗೇ ಇರುತ್ತದೆ. ನಮ್ಮ ಒಳಗೇ ಇರುತ್ತದೆ.

ಒಂದು ಸುಂದರವಾದ ಮಾತಿದೆ. ಸಂತೋಷವೆನ್ನುವುದು ಕೈಗೆಟಕುವ ಹೂಗಳಿಂದಲೇ ತಯಾರಿಸಿದ ಒಂದು ಸುಂದರವಾದ ಹೂಗೊಂಚಲಿನ ಹಾಗೆ. ಸುಂದರವಾದ ಹೂಗೊಂಚಲಿಗೆ ಇದೇ ಹೂವಾಗಬೇಕೆನ್ನುವ ಚೌಕಟ್ಟು ಇಲ್ಲ. ಯಾವ ಹೂ ಕೈಗೆ ಸಿಗುವುದೋ ಅದರಿಂದಲೇ ಹೂ ಗೊಂಚಲನ್ನು ತಯಾರಿಸಬಹುದು. ಮನಸೆಳೆಯುವ ಅಂತಹ ಹೂಗೊಂಚಲೊಂದನ್ನು ತಯಾರಿಸುವ ಕಲೆಯಂತಹ ಕಲೆ ಸಂತೋಷ. ಜೀವನದಲ್ಲಿಯೂ ಹಾಗೆ, ನಮಗೆ ಸಿಕ್ಕಿದುದರಲ್ಲಿಯೇ ಸಂತೋಷವನ್ನು ಕಂಡು ಹುಡುಕುವ ಮನೋಭೂಮಿಕೆಯನ್ನು ನಮ್ಮದಾಗಿಸಿಕೊಂಡರೆ ಸಂತೋಷ ನಮ್ಮ ಹತ್ತಿರವೇ ಇದೆ, ನಮ್ಮ ಒಳಗೇ ಇದೆ ಎನ್ನುವ ಅರಿವಾಗುತ್ತದೆ. ಅರಿಯುವ ಕಲೆಯನ್ನು ಸಿದ್ಧಿಸಿಕೊಂಡರೆ ಈ ಸಂತೋಷಕ್ಕಾಗಿ ಪರದಾಡುವ ಕಷ್ಟವಿಲ್ಲ. ಸಂತೋಷ ಭ್ರಮನಿರಸನವಿಲ್ಲ. ಸಿಗದಾಗ ಸಂತೋಷವನ್ನು ಹುಡುಕಿಕೊಂಡು ಹೋಗುವ ಜಂಜಾಟವಿಲ್ಲ.
*****
(ಚಿಂತನ – ಆಕಾಶವಾಣಿ, ಮಂತಣಿ)

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...