Home / ಕವನ / ಕವಿತೆ / ಚಿಕ್ಕಂದಿನ ನೆನಪುಗಳು

ಚಿಕ್ಕಂದಿನ ನೆನಪುಗಳು

ಚಿಕ್ಕ ಶಿಶುವಾಗಿದ್ದ ಕಾಲವಿತ್ತೊಂದು;
ಲೆಕ್ಕಿಸಲ್ಕೊಡಲಿತ್ತು ಅಡಿ ಎರಡು ಒಂದು;
ಫಕ್ಕನಾ ಸ್ಮರಣೆಗೊಸರುವುದಶ್ರು ಬಿಂದು;
ಮಿಕ್ಕ ನೆನಹುಗಳು ಕೊಡವಾ ತೋಷವೆಂದೂ.

ಅಂದು ಅಮ್ಮನ ಕಂಕುಳಲಿ ಆಡುತಿದ್ದೆ;
ಅಂದು ಅಪ್ಪನ ಕಾಲ ಕುದುರೆ ಮಾಡಿದ್ದೆ
ಅಂದು ಪಾಠವು ಕಾಟವೆಂದು ತಿಳಿದಿದ್ದೆ,
ಅಂದು ನಾಚಿಕೆ ಲಜ್ಜೆಗಳನರಿಯದಿದ್ದೆ.

ಆಗ ಧರೆ ಕಾಣಿಸಿತು ಬಲು ಚಿಕ್ಕದಾಗಿ;
ಆ ಗಲಭೆ ಗುಲ್ಲು ಕೇಳಿಸಿತು ಸವಿಯಾಗಿ;
ಆಗಸದ ಮಿಣುಕು ಗೋಲಿಯ ಹಿಡಿಯ ಹೋಗಿ,
ಆಗದಿರೆ ಅಳುತಿದ್ದೆ ಕೈನೆಗಹಿ ಕೂಗಿ.

ಬೆಟ್ಟ ತಲೆಯಲಿ ಕಂಡು ಹೊಳೆವ ಚಂದ್ರನನು,
ದಿಟ್ಟಿಸಿ ಅದರ ಸೊಬಗು ಸವಿಸೊಗಸುಗಳನು,
ತಟ್ಟನೆ ನುಡಿದೆ “ಅಲ್ಲಿ ನಾ ಹೋಗಲೇನು?
ಬಟ್ಟಲಂತಿಹ ಮಂಡಲದಲಿರುವುದೇನು?”

ಸಂಜೆಯಲಿ ನೀಲ ಪಡುಗಡಲು ನೋಡಿದೆನು,
ಅಂಜಲದರೊಡಲೊಳಗೆ ರವಿ ಹೋಗುವುದನು;
ಮುಂಜಾನೆ ಮಿಂದು ಬಂದಾ ನೇಸರನ್ನು,
ರಂಜಿಸುತ ಮೂಡು ಬಾನೊಳು ಹೊಳೆವುದನ್ನು.

ಮೊದಲು ಭಜಿಸಿದೆನು ಈಶನನು ಸ್ತುತಿಗೈದು;
ತೊದಲು ನಾಲಿಗೆಯಲ್ಲಿ ತಾಯುಡಿಯ ಹಿಡಿದು,
ಅದೆ ಭಜನೆ ಇಂದಿರಲಿ-“ಸದ್ಭುದ್ಧಿಗಳನು
ಒದಗಿಸೈ ದೇವ! ನಿನ್ನನೆ ಅನುಸರಿಪೆನು.”

ಎಲ್ಲಿ ಆ ಬಾಲ್ಯದಾ ಶುಭದಿನಗಳೆಲ್ಲಿ?
ಎಲ್ಲಿ ಆ ಸಂತೋಷ, ಸೌಖ್ಯ ಇನ್ನೆಲ್ಲಿ?
“ನಿಲ್ಲು, ಸರಿಹೋಗು” ಎಂದಾ ದೇವನೆಲ್ಲಿ?
ಇಲ್ಲ ಎಲ್ಲಿಯು ಹೊರತು ಈ ಸ್ಮರಣೆಯಲ್ಲಿ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...