Home / ಕವನ / ಕವಿತೆ / ಶೋಕ ಗೀತೆ

ಶೋಕ ಗೀತೆ

ಹೋದುದಲ್ಲಾ! ಎಲ್ಲಾ ಹೋದುದಲ್ಲಾ!

ಹೋದುದೆಲ್ಲವು ಕಣ್ಣ ಹಿಂದೆ
ಖೇದವಿನ್ನೆನಗುಳಿದುದೊಂದೆ
ಹೇ ದಯಾನಿಧೆ! ಪ್ರೇಮದಿಂದೆ
ಹಾದಿ ತೋರಿಸಿ ನಡಿಸು ಮುಂದೆ
ಹೋದುದಲ್ಲಾ, ಎಲ್ಲಾ ಹೋದುದಲ್ಲಾ.

ತೊಡೆಯ ತೊಟ್ಟಿಲೊಳೆನ್ನನಿಟ್ಟು,
ಕುಡಿಸಿ ಮಮತೆಯ ಗುಣವ ನೆಟ್ಟು,
ಬಿಡದೆ ವಿದ್ಯೆಯ ಬಾಯ್ಗೆಕೊಟ್ಟು
ನಡೆದನೆನ್ನನು ಮರುಗಬಿಟ್ಟು
ಹೋದನಲ್ಲಾ, ಅಪ್ಪ ಹೋದನಲ್ಲಾ.

ಆಟದಿಂದೆನ್ನೊಡನೆ ಬೆಳೆದು,
ಊಟಕೂಟದ ಪ್ರೇಮ ತಳೆದು,
ಕೋಟಲೆಯ ಸಂಸಾರ ಕಳೆದು
ದಾಟಿದನು ಮಮ ಹೃದಯ ಸೆಳೆದು
ಹೋದನಲ್ಲಾ, ತಮ್ಮ ಹೋದನಲ್ಲಾ.

ಮನದಿ ಕೃಷ್ಣತೆಯನ್ನು ಮುಚ್ಚಿ,
ಕನಕತನು ಸೌಂದರ್‍ಯ ಬಿಚ್ಚಿ
ಧನದ ಕಪಟ ಸ್ನೇಹ ಹಚ್ಚಿ
ಕೊನೆಗೆ ಮಿತ್ರ ಭುಜಂಗ ಕಚ್ಚಿ
ಹೋದನಲ್ಲಾ ಮಿತ್ರ ಹೋದನಲ್ಲಾ.

ಅಲೆಯ ಬಡಿತಕೆ ಜಾರ್‍ವ ಮಳಲೋಲ್
ಕೆಳಗಿಳಿವ ಹೊತ್ತರೆಯ ನೆಳಲೋಲ್
ತಳದ ತೂತಿನ ಗಡಿಗೆ ಜಲದೋಳ್
ತಿಳಿದು ತಿಳಿಯದೆ ನೂರಬುದದೋಲ್
ಹೋದುದಲ್ಲಾ, ಪ್ರಾಯ ಹೋದುದಲ್ಲಾ.

ತೋರದಂದದಿ ಸೇರಿ ತೋರುತ
ಭೂರಿ ಸುಖ ಸಂತಸವ ಕೋರುತ
ನೀರಿನೋಲ್ ಕೈಯಿಂದ ಜಾರುತ
ಹಾರಿ ಹೋದುದು ದುಃಖ ಕಾರುತ
ಹೋದುದಲ್ಲಾ, ದ್ರವ್ಯ ಹೋದುದಲ್ಲಾ.

ಅಕಟ! ಈ ಸಂಸಾರದೊಳಗೆ
ಸಕಲ ನಾಶಕೆ ಮೂರು ಗಳಿಗೆ
ಶಕಟ ನಂದದಿ ತಿರುಗಿ ಕೆಳಗೆ
ವಿಕಟ ಭಾರತನಾದೆನಿಳೆಗೆ

ಹೋದುದನು ನಾ ಮರುಗದಂದವ
ಗೈದು ಬಿಗಿ ವೈರಾಗ್ಯ ಬಂಧವ,
ಓ ದಯಾನಿಧೆ ಭಕ್ತಬಾಂಧವ
ಮೋದದಿಂದವತರಿಸಿ ಬಂದವ.
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ