Home / ಕವನ / ಕವಿತೆ / ಶೋಕ ಗೀತೆ

ಶೋಕ ಗೀತೆ

ಹೋದುದಲ್ಲಾ! ಎಲ್ಲಾ ಹೋದುದಲ್ಲಾ!

ಹೋದುದೆಲ್ಲವು ಕಣ್ಣ ಹಿಂದೆ
ಖೇದವಿನ್ನೆನಗುಳಿದುದೊಂದೆ
ಹೇ ದಯಾನಿಧೆ! ಪ್ರೇಮದಿಂದೆ
ಹಾದಿ ತೋರಿಸಿ ನಡಿಸು ಮುಂದೆ
ಹೋದುದಲ್ಲಾ, ಎಲ್ಲಾ ಹೋದುದಲ್ಲಾ.

ತೊಡೆಯ ತೊಟ್ಟಿಲೊಳೆನ್ನನಿಟ್ಟು,
ಕುಡಿಸಿ ಮಮತೆಯ ಗುಣವ ನೆಟ್ಟು,
ಬಿಡದೆ ವಿದ್ಯೆಯ ಬಾಯ್ಗೆಕೊಟ್ಟು
ನಡೆದನೆನ್ನನು ಮರುಗಬಿಟ್ಟು
ಹೋದನಲ್ಲಾ, ಅಪ್ಪ ಹೋದನಲ್ಲಾ.

ಆಟದಿಂದೆನ್ನೊಡನೆ ಬೆಳೆದು,
ಊಟಕೂಟದ ಪ್ರೇಮ ತಳೆದು,
ಕೋಟಲೆಯ ಸಂಸಾರ ಕಳೆದು
ದಾಟಿದನು ಮಮ ಹೃದಯ ಸೆಳೆದು
ಹೋದನಲ್ಲಾ, ತಮ್ಮ ಹೋದನಲ್ಲಾ.

ಮನದಿ ಕೃಷ್ಣತೆಯನ್ನು ಮುಚ್ಚಿ,
ಕನಕತನು ಸೌಂದರ್‍ಯ ಬಿಚ್ಚಿ
ಧನದ ಕಪಟ ಸ್ನೇಹ ಹಚ್ಚಿ
ಕೊನೆಗೆ ಮಿತ್ರ ಭುಜಂಗ ಕಚ್ಚಿ
ಹೋದನಲ್ಲಾ ಮಿತ್ರ ಹೋದನಲ್ಲಾ.

ಅಲೆಯ ಬಡಿತಕೆ ಜಾರ್‍ವ ಮಳಲೋಲ್
ಕೆಳಗಿಳಿವ ಹೊತ್ತರೆಯ ನೆಳಲೋಲ್
ತಳದ ತೂತಿನ ಗಡಿಗೆ ಜಲದೋಳ್
ತಿಳಿದು ತಿಳಿಯದೆ ನೂರಬುದದೋಲ್
ಹೋದುದಲ್ಲಾ, ಪ್ರಾಯ ಹೋದುದಲ್ಲಾ.

ತೋರದಂದದಿ ಸೇರಿ ತೋರುತ
ಭೂರಿ ಸುಖ ಸಂತಸವ ಕೋರುತ
ನೀರಿನೋಲ್ ಕೈಯಿಂದ ಜಾರುತ
ಹಾರಿ ಹೋದುದು ದುಃಖ ಕಾರುತ
ಹೋದುದಲ್ಲಾ, ದ್ರವ್ಯ ಹೋದುದಲ್ಲಾ.

ಅಕಟ! ಈ ಸಂಸಾರದೊಳಗೆ
ಸಕಲ ನಾಶಕೆ ಮೂರು ಗಳಿಗೆ
ಶಕಟ ನಂದದಿ ತಿರುಗಿ ಕೆಳಗೆ
ವಿಕಟ ಭಾರತನಾದೆನಿಳೆಗೆ

ಹೋದುದನು ನಾ ಮರುಗದಂದವ
ಗೈದು ಬಿಗಿ ವೈರಾಗ್ಯ ಬಂಧವ,
ಓ ದಯಾನಿಧೆ ಭಕ್ತಬಾಂಧವ
ಮೋದದಿಂದವತರಿಸಿ ಬಂದವ.
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...