Home / ಕವನ / ಕವಿತೆ / ಶೋಕ ಗೀತೆ

ಶೋಕ ಗೀತೆ

ಹೋದುದಲ್ಲಾ! ಎಲ್ಲಾ ಹೋದುದಲ್ಲಾ!

ಹೋದುದೆಲ್ಲವು ಕಣ್ಣ ಹಿಂದೆ
ಖೇದವಿನ್ನೆನಗುಳಿದುದೊಂದೆ
ಹೇ ದಯಾನಿಧೆ! ಪ್ರೇಮದಿಂದೆ
ಹಾದಿ ತೋರಿಸಿ ನಡಿಸು ಮುಂದೆ
ಹೋದುದಲ್ಲಾ, ಎಲ್ಲಾ ಹೋದುದಲ್ಲಾ.

ತೊಡೆಯ ತೊಟ್ಟಿಲೊಳೆನ್ನನಿಟ್ಟು,
ಕುಡಿಸಿ ಮಮತೆಯ ಗುಣವ ನೆಟ್ಟು,
ಬಿಡದೆ ವಿದ್ಯೆಯ ಬಾಯ್ಗೆಕೊಟ್ಟು
ನಡೆದನೆನ್ನನು ಮರುಗಬಿಟ್ಟು
ಹೋದನಲ್ಲಾ, ಅಪ್ಪ ಹೋದನಲ್ಲಾ.

ಆಟದಿಂದೆನ್ನೊಡನೆ ಬೆಳೆದು,
ಊಟಕೂಟದ ಪ್ರೇಮ ತಳೆದು,
ಕೋಟಲೆಯ ಸಂಸಾರ ಕಳೆದು
ದಾಟಿದನು ಮಮ ಹೃದಯ ಸೆಳೆದು
ಹೋದನಲ್ಲಾ, ತಮ್ಮ ಹೋದನಲ್ಲಾ.

ಮನದಿ ಕೃಷ್ಣತೆಯನ್ನು ಮುಚ್ಚಿ,
ಕನಕತನು ಸೌಂದರ್‍ಯ ಬಿಚ್ಚಿ
ಧನದ ಕಪಟ ಸ್ನೇಹ ಹಚ್ಚಿ
ಕೊನೆಗೆ ಮಿತ್ರ ಭುಜಂಗ ಕಚ್ಚಿ
ಹೋದನಲ್ಲಾ ಮಿತ್ರ ಹೋದನಲ್ಲಾ.

ಅಲೆಯ ಬಡಿತಕೆ ಜಾರ್‍ವ ಮಳಲೋಲ್
ಕೆಳಗಿಳಿವ ಹೊತ್ತರೆಯ ನೆಳಲೋಲ್
ತಳದ ತೂತಿನ ಗಡಿಗೆ ಜಲದೋಳ್
ತಿಳಿದು ತಿಳಿಯದೆ ನೂರಬುದದೋಲ್
ಹೋದುದಲ್ಲಾ, ಪ್ರಾಯ ಹೋದುದಲ್ಲಾ.

ತೋರದಂದದಿ ಸೇರಿ ತೋರುತ
ಭೂರಿ ಸುಖ ಸಂತಸವ ಕೋರುತ
ನೀರಿನೋಲ್ ಕೈಯಿಂದ ಜಾರುತ
ಹಾರಿ ಹೋದುದು ದುಃಖ ಕಾರುತ
ಹೋದುದಲ್ಲಾ, ದ್ರವ್ಯ ಹೋದುದಲ್ಲಾ.

ಅಕಟ! ಈ ಸಂಸಾರದೊಳಗೆ
ಸಕಲ ನಾಶಕೆ ಮೂರು ಗಳಿಗೆ
ಶಕಟ ನಂದದಿ ತಿರುಗಿ ಕೆಳಗೆ
ವಿಕಟ ಭಾರತನಾದೆನಿಳೆಗೆ

ಹೋದುದನು ನಾ ಮರುಗದಂದವ
ಗೈದು ಬಿಗಿ ವೈರಾಗ್ಯ ಬಂಧವ,
ಓ ದಯಾನಿಧೆ ಭಕ್ತಬಾಂಧವ
ಮೋದದಿಂದವತರಿಸಿ ಬಂದವ.
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...