Home / ಕವನ / ಕವಿತೆ / ಉತ್ತಮ ರಾಜ್ಯ

ಉತ್ತಮ ರಾಜ್ಯ

“ಕಂದ, ಕೇಳುತ್ತಮದ ರಾಜ್ಯ ಒಂದಿಹುದು:
ಮಂದಿ ಎಲ್ಲವು ಸುಖದಿ ಬಾಳುತ್ತಲಿಹುದು;”
ಎಂದು ನೀನಾಡುವಾ ರಾಜ್ಯವೆಲ್ಲಿಹುದು?
ಕಂದನಲಿ ಕರುಣಿಸುತ ಇಂದು ತಿಳಿಸಮ್ಮಾ!

“ಕಿತ್ತಳೆಯ ಮರಗಳಲಿ ಹೂಗಳರಳುತ್ತ
ಎತ್ತಲೂ ಮಿಂಚುಹುಳು ಚಿಮ್ಮಿ ಕುಣಿಯುತ್ತ,
ಮುತ್ತಿಕೊಂಡಿಹ ದೇಶದೊಳಗಿಹುದೆ ತಾಯೆ!”
“ಅತ್ತಲಿಲ್ಲಾ ರಾಜ್ಯ, ಅತ್ತಲಿಲ್ಲಣುಗಾ!”

“ತಾಳೆಗಳು ಬೆಳೆದು, ಖರ್‍ಜೂರದಲಿ ಹಣ್ಣು
ಜೋಲುತಿಹ ಬಿಸಿಲ ಸೀಮೆಯಲಿ ನೆಲಸಿಹುದೇ?
ಆಲಿಗಳಿಗಚ್ಚ ಹಸುರಾಗಿ ಸೊಗಸುತ್ತಾ
ಸಾಲು ಸಾಲಾಗೆಸೆದು ಸಾಗರದ ನಡುವೆ?-

“ಹಳುವಗಳ ಪರಿಮಳವ ಗಾಳಿಗೊಪ್ಪಿಸುತ್ತಾ,
ಹಲವು ಬಣ್ಣದ ಗರಿಯ ಪಕ್ಷಿ ಸಂಕುಲದಿ
ತೊಳಗುವಾ ದ್ವೀಪಂಗಳಲ್ಲಿಹುದೆ? ತಾಯೆ!”
“ಎಲೆ ಮಗುವೆ! ಕೇಳ್, ಅತ್ತಲಿಲ್ಲತ್ತಲಿಲ್ಲ.”

“ಹೊಳೆವ ಹೊನ್ನಿನ ಮರಳ ಮೇಲೆ ಹೊಳೆ ಹರಿವ,
ತೊಳಗುತಿಹ ಕೆಂಪುಗಳ ಕೆಂಬೆಳಗನುಗುಳ್ವ,
ತಳಿತಳಿಪ ವಜ್ರಗಳ ಗಣಿಗಳಿಂದೆಸೆವ
ತಿಳಿಮುತ್ತುಗಳ ನಗೆಯ ಬೆಳಕಿಂದ ಹೊಳೆವ-

“ಜಲದೊಳಗೆ ನೆಲೆಗೊಂಡ ಹವಳಗಳ ಕೆಳಗೆ
ತಳಿರ ಬಣ್ಣವ ತಳೆದ ಸಾಗರದ ನಡುವೆ
ಹೊಳೆವ ದ್ವೀಪಂಗಳಲಿ ನೆಲಸಿಹುದೆ? ತಾಯೆ!”
“ಎಲೆ ಮಗುವೆ! ಕೇಳತ್ತಲಿಲ್ಲತ್ತಲಿಲ್ಲ.

“ಅದರ ಸೊಗಸಿನ ಸಿರಿಯ ಕಣ್ಣು ಕಂಡಿಲ್ಲ.
ಅದರ ಗಾನದ ಸವಿಯ ಕಿವಿಯು ಕೇಳಿಲ್ಲ.
ಅದರಂದವನು ಕನಸು ಕಂಡರಿದುದಿಲ್ಲ.
ಅದರ ನೆಲೆಯನು ಸಾವು ನೋವರಿದುದಿಲ್ಲ.

“ಎಂದೆಂದುಮಾ ಪರಮರಾಜ್ಯ ವಿಭವಗಳು.
ಕುಂದುಕೊರತೆಗೆ ಸಿಲುಕದೊಂದೆ ತೆರವಿಹವು.
ಕಂದ! ಕೇಳದು ಸಾವಿನಿಂದತ್ತಲತ್ತ
ನಿಂದು ತಾನನಿಗಾಲ ಎಸೆದೊಪ್ಪುತ್ತಿಹುದು.”
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...