Home / ಕವನ / ಕವಿತೆ / ಉತ್ತಮ ರಾಜ್ಯ

ಉತ್ತಮ ರಾಜ್ಯ

“ಕಂದ, ಕೇಳುತ್ತಮದ ರಾಜ್ಯ ಒಂದಿಹುದು:
ಮಂದಿ ಎಲ್ಲವು ಸುಖದಿ ಬಾಳುತ್ತಲಿಹುದು;”
ಎಂದು ನೀನಾಡುವಾ ರಾಜ್ಯವೆಲ್ಲಿಹುದು?
ಕಂದನಲಿ ಕರುಣಿಸುತ ಇಂದು ತಿಳಿಸಮ್ಮಾ!

“ಕಿತ್ತಳೆಯ ಮರಗಳಲಿ ಹೂಗಳರಳುತ್ತ
ಎತ್ತಲೂ ಮಿಂಚುಹುಳು ಚಿಮ್ಮಿ ಕುಣಿಯುತ್ತ,
ಮುತ್ತಿಕೊಂಡಿಹ ದೇಶದೊಳಗಿಹುದೆ ತಾಯೆ!”
“ಅತ್ತಲಿಲ್ಲಾ ರಾಜ್ಯ, ಅತ್ತಲಿಲ್ಲಣುಗಾ!”

“ತಾಳೆಗಳು ಬೆಳೆದು, ಖರ್‍ಜೂರದಲಿ ಹಣ್ಣು
ಜೋಲುತಿಹ ಬಿಸಿಲ ಸೀಮೆಯಲಿ ನೆಲಸಿಹುದೇ?
ಆಲಿಗಳಿಗಚ್ಚ ಹಸುರಾಗಿ ಸೊಗಸುತ್ತಾ
ಸಾಲು ಸಾಲಾಗೆಸೆದು ಸಾಗರದ ನಡುವೆ?-

“ಹಳುವಗಳ ಪರಿಮಳವ ಗಾಳಿಗೊಪ್ಪಿಸುತ್ತಾ,
ಹಲವು ಬಣ್ಣದ ಗರಿಯ ಪಕ್ಷಿ ಸಂಕುಲದಿ
ತೊಳಗುವಾ ದ್ವೀಪಂಗಳಲ್ಲಿಹುದೆ? ತಾಯೆ!”
“ಎಲೆ ಮಗುವೆ! ಕೇಳ್, ಅತ್ತಲಿಲ್ಲತ್ತಲಿಲ್ಲ.”

“ಹೊಳೆವ ಹೊನ್ನಿನ ಮರಳ ಮೇಲೆ ಹೊಳೆ ಹರಿವ,
ತೊಳಗುತಿಹ ಕೆಂಪುಗಳ ಕೆಂಬೆಳಗನುಗುಳ್ವ,
ತಳಿತಳಿಪ ವಜ್ರಗಳ ಗಣಿಗಳಿಂದೆಸೆವ
ತಿಳಿಮುತ್ತುಗಳ ನಗೆಯ ಬೆಳಕಿಂದ ಹೊಳೆವ-

“ಜಲದೊಳಗೆ ನೆಲೆಗೊಂಡ ಹವಳಗಳ ಕೆಳಗೆ
ತಳಿರ ಬಣ್ಣವ ತಳೆದ ಸಾಗರದ ನಡುವೆ
ಹೊಳೆವ ದ್ವೀಪಂಗಳಲಿ ನೆಲಸಿಹುದೆ? ತಾಯೆ!”
“ಎಲೆ ಮಗುವೆ! ಕೇಳತ್ತಲಿಲ್ಲತ್ತಲಿಲ್ಲ.

“ಅದರ ಸೊಗಸಿನ ಸಿರಿಯ ಕಣ್ಣು ಕಂಡಿಲ್ಲ.
ಅದರ ಗಾನದ ಸವಿಯ ಕಿವಿಯು ಕೇಳಿಲ್ಲ.
ಅದರಂದವನು ಕನಸು ಕಂಡರಿದುದಿಲ್ಲ.
ಅದರ ನೆಲೆಯನು ಸಾವು ನೋವರಿದುದಿಲ್ಲ.

“ಎಂದೆಂದುಮಾ ಪರಮರಾಜ್ಯ ವಿಭವಗಳು.
ಕುಂದುಕೊರತೆಗೆ ಸಿಲುಕದೊಂದೆ ತೆರವಿಹವು.
ಕಂದ! ಕೇಳದು ಸಾವಿನಿಂದತ್ತಲತ್ತ
ನಿಂದು ತಾನನಿಗಾಲ ಎಸೆದೊಪ್ಪುತ್ತಿಹುದು.”
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...