Home / ಕಥೆ / ಕಾದಂಬರಿ / ಸುಭದ್ರೆ – ೪

ಸುಭದ್ರೆ – ೪

ರಾಮರಾಯನು ರಾಮವುರದಲ್ಲಿ ಅಗ್ರಗಣ್ಯನಾದ ಮನುಷ್ಯ ; ದೊಡ್ಡ ಮನೆತನಕ್ವೆ ಸೇರಿದವನು. ತನ್ನ ಮಗಳನ್ನು ಅನುರೂಪನಾದ ವರನಿಗೆ ಕೊಟ್ಟು ಮದುವೆ ಮಾಡಬೇಕೆಂಬ ಆಶೆ ಯಿದ್ದಿತು. ಶಂಕರರಾಯನಿಗೂ ರಾಮರಾಯನಿಗೂ ಪೂರ್ವದಿಂದ ಲೂ ಸ್ನೇಹ, ಅಲ್ಲದೆ ಸ್ವಲ್ಪ ಬಂಧುತ್ವವೂ ಇದ್ದಿತು. ಆದುದರಿಂದ ಕಮಲೆಯನ್ನು ಮಾಧವನಿಗೆ ತಂದುಕೊಳ್ಳಬೇಕೆಂದು ೩-೪ ವರ್ಷಗಳ ಹಿಂದೆಯೆ ಶಂಕರರಾಯನಿಗೆ ಕಾಗದ ಬರೆದಿರಲಾಗಿ ಆತನು, ನಮ್ಮ ಹುಡುಗನಿಗೆ ೨೦ ವರ್ಷ ತುಂಬಿದಲ್ಲದೆ. ಮದುವೆಮಾಡುವುದಿಲ್ಲ ವೆಂದು ಉತ್ತರಕೊಟ್ಟಿದ್ದನು. ಆಗ್ಗೆ ರಾಮರಾಯನು ಸುಮ್ಮನಿದ್ಧು ಬಿಟ್ಟನು. ಹುಡುಗಿಗೆ ೧೨ ವರ್ಷವಾಗಲು, ಇನ್ಸು ‘ನಿಲ್ಲಿಸುವುದ ಕ್ಕಾಗುವುದಿಲ್ಲ, ಈ ವರ್ಷ ಖಂಡಿತವಾಗಿಯೂ ವಿವಾಹವನ್ನು ನೆರ ವೇರಿಸಲೇಬೇಕು` ಎಂದು ತಿರಿಗಿ, ಬರೆದನು. ಶಂಕರರಾಯನಿಗೆ ಸಕಾ ಲವಾಗಿ, ಕಂಡುದರಿಂದಲೂ, ರಾಮರಾಯನಿಗಿಂತ ಯೋಗ್ಯರೂ, ಕುಲೀನರೂ ಸಿಕ್ಕುವುದು ಕಷ್ಟವಾಗಿದ್ದುದರಿಂದಲೂ – “ನಮ್ಮ ಹುಡುಗನು ರಾಮ ಪುರಕ್ವೆ ಬಂದಿದ್ದಾನೆ, ಅವನಿಗೆ ವಯಸ್ಸಾಗಿರು ವುದರಿಂದ ಕನ್ಯೆಯನ್ನೊವ ಭಾರವು ಅವನದಾಗಿದೆ, ಅವನೊ ಪ್ಪಿದರೆ ನನ್ನ ಅಡ್ಡಿಯೇನೂ ಇಲ್ಲ. ನಕ್ಷತ್ರಾನುಕೂಲವಾದರೆ ಸರಿ“. ಎಂದು ಪ್ರತ್ಯುತ್ತರವನ್ನು ಬರೆದನು. ಅದು ಮಾಧವನು ರಾಮ ಪು ರಕ್ಕೆ ಬಂದ ಮಾರನೆಯದಿನ ರಾಮರಾಯನ ಕೈಸೇರಿತು, ಆ˜ಕಾಗದ ವನ್ನು, ತೆಗೆದುಕೊಂಡು ರಾಮರಾಯನು ಮಾಧವನನ್ನು ನೋಡುವು ದಕ್ಕೋಸ್ಕರ ಗಂಗಾಬಾಯಿಯ ಮನೆಗೆ ಹೋದನು. . ಗಂಗಾಬಾ ಯಿಯು ಪಾಠಶಾಲೆಗೆ. ಹೋಗಿದ್ದಳು, ಮಾಧವನೊಬ್ಬನೇ ಮನೆಯ ಲ್ಲಿದ್ದನು. ಮಾಧವನಿಗೂ ರಾಮರಾಯನಿಗೂ ಕುಶಲಪ್ರಶ್ನೆಗಳು ನಡೆದ ಬಳಿಕ ರಾಮರಾಯನು, ಶಂಕರರಾಯನ ಕಾಗದವನ್ನು ತೆಗೆದು ಮಾಧವನ ಕೈಲಿಟ್ಟನು. ಅದನ್ನು ನೋಡಿದಕೂಡಲೆ ಮಾಧವನು “ಸ್ವಾಮೀ ! ನಮ್ಮ ತಂದೆಗಳ ಮಾತಿಗೆ ನಾನುಯಾವಾಗಲೂ ಪ್ರತಿ ಹೇಳುದುದಿಲ್ಲ. ಇದರಲ್ಲಿ ನನಗೆ ಅಭಿಪ್ರಾಯವು ಅನ್ಯಥಾ ಇದ್ದಾಗ್ಗೂ ಅವರ ಅಪ್ಷಣೆಯಾದರೆ ನನ್ನ ಯತ್ನವೇನಿದೆ” ಎಂದನು. ಅದಕ್ಕೆ ರಾಮರಾಯನು –“ಹಾಗಲ್ಲ, ನಮ್ಮ ಮನೆಗೆ ಬಂದು ಕನ್ಯೆಯನ್ನು ನೋಡಿಕೊಂಡು. ಹೋಗುವುದು ಈಗಿನ ಕಾಲದ ಪದ್ಬತಿ. ದಯ ವಿಟ್ಟು ಬಂದು ನೋಡಿಕೊಂಡು ಹೋಗಬೇಕು“ ಎಂದನು. ಮಾಧ ವನು ‘ಮಧ್ಯಾಹ್ನ ಒಂದು ತಮ್ಮ ದರ್ಶನ ತೆಗೆದು ಕೊಳ್ಳುತ್ತೇನೆ“` ಎಂದು ಹೇಳಿ ರಾಮರಾಯನನ್ನು ಕಳುಹಿಸಿಕೊಟ್ಟನು.

ಗಂಗಾಬಾಯಿ ಪಾಠಶಾಲೆಯಿಂದ ಬಂದಕೂಡಲೆ ಮಾಧ ವನ್ನು ಆಕೆಗೆ. ಈ ವೃತ್ತಾಂತವನ್ನು ತಿಳಿಸಿದನು. ಅವಳು –“ಅಪ್ಪಾ ಕಮಲೆಯು ಗರ್ವಿತಳು, ನಿನಗೆ ತಕ್ಕವಳಲ್ಲ, ನಿಮ್ಮ ತಂದೆಯು ರಾಮ ರಾಯನ ಭಾಗ್ಯಕ್ಕೆ ಬೆರಗಾಗಿ ಬಂಧುತ್ವ ಬಳೆಸಬೇಕೆಂದು ಇಷ್ಟ ಪಟ್ಟಿರಬಹುದು,, ಮಧ್ಯಾಹ್ನ ಹೋಗಿ ನೋಡಿಕೊಂಡ್ಲು. ಬಾ. ಮುಂದಿನ ಕೆಲಸ ನೋಡೋಣ” ಎಂದಳು.

ಮಧ್ಯಾಹ್ನ ರಾಮರಾಯನು ಬಂದು ಮಾಧವನನ್ನು ಮನೆಗೆ ಕರೆದುಕೊಂಡು ಹೋಗಿ ಉಪ್ಪರಿಗೆಯಮೇಲೆ “ಸೋಫಾ”ದ ಮೇಲೆ ಕುಳ್ಳಿರಿಸಿದನು. ಅನಂತರ ಹೆಂಡತಿಯನ್ನು ಕರೆದು “ನಿನ್ನ ಅಳಿಯನನ್ನು ನೋಡು ಬಾ” ಎಂದನು. ಆಕೆಯು ಎಷ್ಟಾವೃತ್ತಿ ನೋಡಿದರೂ ತೃಪ್ತಿಯಾಗದೆ ನೆರೆಹೊರೆಯವರನ್ನು ಕರೆದುಕೊಂಡು ಬಂದಳು. ಹಾಗೆಯೆ ಕಮಲೆಯನ್ನು ಮಾಧವನ ಬಳಿ ನಿಲ್ಲಿಸಿ ಅನಂ ತರ ಸೋಘಾದ ಮೇಲೆ ಕುಳ್ಳಿರಿಸಿದರು. ಮಾಧವನಿಗೆ, ಅವಳನ್ನು ನೋಡಿದೊಡನೆಯೆ ಜಿಗುಪ್ಸೆಯುಂಟಾಯಿತು. ಅವಳ ರೂಪಲಾವ ಣ್ಯವೆಲ್ಲವೂ ಉಡಿಗೆ, ತೊಡಿಗೆಗಳನ್ನು ಸೇರಿದ್ದಿತೇ ಹೊರತು ಅವಳಲ್ಲಿ ನೈಜವಾದ ಸೊಬಗಾವುದೂ ಕಂಡುಬರಲಿಲ್ಲ, ಅಲ್ಲದೆ ಮುಖದಲ್ಲಿ ಗರ್ವವು ಉಕ್ಕಿ ಬರುವಂತಿದ್ದಿತು. ಕೂಡಲೆ ಮಾಧವನಿಗೆ ಸುಭದ್ರೆಯ ಜ್ಞಾಪಕವು ಬಂದಿತು. ಆವಳಿಗೂ ಇವಳಿಗೂ ಇರುವ ತಾರತಮ್ಯ ವನ್ನು ಮನಸ್ಸಿನಲ್ಲೆ ಗಣಿಸುತ್ತಿದ್ದನು.

ನೆರಹೊರಿಯ ಹೆಂಗಸರಲ್ಲರೂ ಬಂದು ನೋಡಿ ವರಸಾಮ್ಯ ವನ್ನು ಬಹಳ ಶ್ಲಾಘನೆಮಾಡಿದರು. ಕಮಲೆಯ ತಾಯಿಯ ಸಂ ತೋ ಷವೆಷ್ಟೆಂದು ಹೇಳಬೇಕಾದುದೇ ಇಲ್ಲ. ಬಂದಿದ್ದವರೆಲ್ಲರಿಗೂ ಯಥೋಚಿತವಾಗಿ ಸತ್ಕಾರಮಾಡಿ ಕಳುಹಿಸಿದಳು.. ಮಾಧವನೂ ರಾಮರಾಯನ ಅಪ್ಪಣೆ ತೆಗೆದುಕೊಂಡು. ಹೊರಟುಹೋದನು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...