Home / ಕವನ / ಕವಿತೆ / ಸಬ್ಬಂಬು ರಾತೂರಿ

ಸಬ್ಬಂಬು ರಾತೂರಿ

ಸಬ್ಬಂಬು ರಾತೂರಿ ಒಬ್ಬಕ್ಕಿ ನಾ ಇದ್ದ|
ನೀವೆಲ್ಲಿ ಹೋಗಿ ಬಂದ್ರಿಽ| ನೀವೆಲ್ಲಿ ಆಡಿ ಬಂದ್ರಿಽ ||೧||

ಜಾಣಿ | ಬೆಟ್ಟಂಬು ಬ್ಯಾಸಗಿ| ಕಣ್ಣೀಗಿ ನಿದ್ದಿಲ್ಲ|
ತನುಗಾಳಿಗ್ಹೋಗಿದ್ದೇವ| ತನುಗಾಳಿಗ್ಹೋಗಿದ್ದೇವ ||೨||

ಎದಿಯ ಮ್ಯಾಲಿನ ಘಾಯಿ ಎಳಿಯ ಚಂದ್ರಮನಂಗ|
ನೀವೆಲ್ಲಿ ಹಾದು ಬಂದ್ರಿಽ| ನೀವೆಲ್ಲಿ ಹೋಗಿ ಬಂದ್ರಿ ||೩||

ಜಾಣಿ| ಬಾಳಿಽಯ ಬನದಾಗ| ಹಾದು ನಾವ್ಬರುವಾಗ|
ಬಾಳಿಽಯ ಗರಿ ತಾಕ್ಯಾವಽ |ಬಾಳಿಽಯ ಗರಿ ತಾಕ್ಯಾವಽ ||೪||

ಹುಬ್ಬ ಹುಬ್ಬಿನ ಘಾಯಿ ಹುಬ್ಬೆಲ್ಲ ಚ್ಯೂರು ಘಾಯಿ|
ನೀವೆಲ್ಲಿ ಹೋಗಿ ಬಂದ್ರಿಽ | ನೀವೆಲ್ಲಿ ಆಡಿ ಬಂದ್ರಿ ||೫||

ಜಾಣಿ | ತ್ವಾಟಿದಾಗಽ ಇರುವ| ನೀಟುಳ್ಳ ಗಜನಿಂಬಿ|
ಗಜನಿಂಬಿ ಗರಿ ತಾಕ್ಯಾವಽ |ಗಜನಿಂಬಿ ಗರಿ ತಾಕ್ಯಾವಽ ||೬||

ನಾರ್ಯಾರ್ಹಚ್ಹಲ್ಲಪುಡಿ| ನಾರ್ಯಾರ್ಹಚ್ಹಲ್ಲಪುಡಿ|
ನಿಮ್ಹಲ್ಲಿಗ್ಯಾಕ್ಹತ್ಯಾವರೀ| ನಿಮ್ಹಲ್ಲಿಗ್ಯಾಕ್ಹತ್ಯಾವರೀ ||೭||

ಜಾಣಿ| ಗೊಲ್ಲರ ಓಣ್ಯಾಗ ಹಾದು ನಾವ್ಬರುವಾಗ|
ಅವರು ಹಲ್ಲಿಗಿ ತಂದ್ಹಚ್ಚಿದರಽ|ಅವರು ಹಲ್ಲಿಗಿ ತಂದ್ಹಚ್ಚಿದರ ||೮||

ಹತ್ತ ವಾರಿಽನ ಹೂವಿನಽ ಶಾಲ್ಗೋಳು|
ಮತ್ತ್ಯಾಕ ಮಾಸಿದವರಿ| ಮತ್ತ್ಯಾಕ ಬೆವತಿದವರಿ ||೯||

ಜಾಣಿ| ಗರಡಿಽಯ ಮನಿಯಾಗ| ಸಗತಿ ನಾ ಹೊಡಿಯಾಗ|
ಕಿರಿಬೆವರ ಬಿಟ್ಟಿದಾವಽ| ಕಿರಿಬೆವರ ಬಿಟ್ಟಿದಾವ ||೧೦||

ಹತ್ತ ವಾರಿಽನ ಮುತ್ತಿಽನ ನಡಕಟ್ಟ|
ಮತ್ತ್ಯಾಕ ಮಾಸಿದವರಿ| ಮತ್ತ್ಯಾಕ ಬೆವತಿದವರಿ ||೧೧||

ಜಾಣಿ| ಚೆಂಡಾಟ ನಾಡಿದಾಗ| ಕೃಷ್ಣರು ಬಂದ್ಹಿಡಿಯಾಗ|
ಬಿದ್ದಲ್ಲಿ ಮಾಸಿದಾವಽ| ಬಿದ್ದಲ್ಲಿ ಮಾಸಿದಾವ ||೧೨||

ಎಷ್ಟೆಂತ ಹೇಳಲಿ ಎಷ್ಟೆಂತ ಕೇಳೂತಿ|
ಕೃಷ್ಣರ ದೇಶಕ್ಹೋಗಿದ್ದೇವಽ| ಕೃಷ್ಣರ ದೇಶಕ್ಹೋಗಿದ್ದೇವಽ |೧೩||

ಭಾಳ ಭಾಳ ಮಾತಾಡತೀದಿ ಬಾಯ್‌ ಪಾಟ್ಲೆ ಬೈತೀದಿ|
ರಂಗಽಗಿ ಬಂದಿ ನೀನು| ಭಾಳ ಪೆಟ್ಟಿಽಗಿ ಬಂದಿ ನೀನು ||೧೪||

ಊರ ಹೊರಗಿನ ನಿಷ್ಠುಳ್ಹಣಮನ ಮುಂದ|
ಆಣಿ ಮಾಡುಣು ನಡಿಯ| ಆಣಿ ಮಾಡೂಣು ನಡಿಯ ||೧೫||
*****

ಹಿಂದಿನ ಹಾಡಿನಂತೆ ಇದರಲ್ಲಾದರೂ ಕ್ರಮದಿಂದ ಪ್ರಶ್ನೋತ್ತರಗಳಿವೆ. ಇಂಥದೊಂದು ಹಾಡು ಗೀತಗೋವಿಂದದಲ್ಲಿದೆ. (“ರಜನಿ ಜನಿತ ಗುರು ಜಾಗರ”.) ರಸಿಕರಿಗೆ ಈ ಹಾಡಿನ ರಹಸ್ಯವು ಸ್ಪಷ್ಟನೇ ಇದೆ. ರೂಢ ಶಬ್ದಗಳ ಅರ್ಥವನ್ನು ಮಾತ್ರ ಇಲ್ಲಿ ಹೇಳಿದೆ.

ಛಂದಸ್ಸು:- ತ್ರಿಪದಿಗೆ ಸಮೀಪನಾದುದು.

ಶಬ್ದಪ್ರಯೋಗಗಳು:– ಸಬ್ಬಂಬು ರಾತೂರಿ = ಕಟ್ಟಿರುಳು, ಬೆಟ್ಟೆಂಬು ಬ್ಯಾಸೀಗಿ=ಕಡುಬೇಸಗೆ. ತನುಗಾಳಿ=ತನುವುಳ್ಳ ಗಾಳಿ ಅಥವಾ ತಂಗಾಳಿ. ಘಾಯ=ಗಾಯ. ಚ್ಯೂರು=ಚಿವುರು. ಹತ್ತು ವಾರ=ಹತ್ತು ಗಜ. ಸಗತಿ ಹೊಡಿ=ಸಾಮು ತೆಗೆ. ಕೃಷ್ಣರು=ಕೃಷ್ಣನಂಥ ಗೆಳೆಯರು(?). ಬಾಯ್‌ ಪಾಟ್ಲೆ=ಮುಖೋದ್ಗತವಾಗಿ.

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...