Home / ಕವನ / ಭಾವಗೀತೆ / ಕೂಸಿನ ಹಾಡು

ಕೂಸಿನ ಹಾಡು

ಕೂಸ ಕೂಸೆಂದೇನ ಕುಂದಽಲದ್ಹರಳಿಽಗಿ|
ಮಂಡಲದಾಗಾಡೊ ಮಗನ ಗೋವಿಂದಾ||
ಕೂಸ ಕಂಡೀಽರೆ| ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೧||

ಸಣ್ಣಾಗಿ ಬೀಸಿಽದ ಸಂಣ್ಹಲ್ಲಿ ಮಾಡಿಽದ|
ಬೆಣ್ಹೆಚ್ಚಿ ರೊಟ್ಟೀ ನಾ ಕುಡುವೆನವ್ವಾ||
ಕೂಸ ಕಂಡಿಽರೇ| ಅವ್‌ ನನ್ನ|
ಬಾಲಽನ ಕಂಡಿಽರೆ ||೨||

ಹೆಸರಂಗಿ ತೊಡೆಸಿಽದ ಹಾಲಗಡಗ ಇಡಸಿಽದ|
ಕುಸಲದ ಟಿಪ್ಪಿಽಗಿ ತೆಲಿಮ್ಯಾಲಿತ್ತವ್ವಾ||
ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೩||

ಭಾಂಯಿ ಮ್ಯಾಲ ನಿಂತಿತ್ತು ಬಾಯಿ ಮಾಡಿ ಅಳತಿತ್ತು|
ಕಂಡ ಬಾಲ್ಯಾರಿಗಿಽ ಕೈಮಾಡಿತವ್ವಾ ||
ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೪||

ಬಿಳಿ ಅಂಗಿ ತೊಡಸಿಽದ ಬಿಳಿಮುತ್ತ ನಿಡಸಿಽದ
ಅಂಗಳದಾಗ ಕೂಸಾ ಮಾಯಾಯಿತವ್ವಾ||
ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೫||

ಗಂಡೆಹೆಂಡರು ಕೂಡಿ ಖಂಡಗ ಹರಕೀ ಮಾಡಿ|
ನಾ ಗಂಡಸಮಗನಽ ಹೆಡೆದಿದ್ದ ನವ್ವಾ|| ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೬||

ಜನವ ಜಾತ್ರಿಽಗ್ಹೊಯ್ತ ನಾನೂ ಜಾತ್ರಿಽಗ್ಹ್ವಾದ|
ಜನಕಿಲ್ಲದ ಕೇಡಾ ನನಗಾಯಿತವ್ವಾ ||
ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೭||
*****

ಭಾವಗೀತಗಳು

ಹೃದಯೋದ್ರೇಕಕ್ಕೆ ಕಾರಣವಾಗುವ ಯಾವುದೊಂದು ಒಂಟಿ ಸಂಗತಿಯನ್ನು ಕುರಿತು ಅದರ ಬೇರೆಬೇರೆ ಮಗ್ಗಲುಗಳನ್ನು ಒಂದೊಂದಾಗಿ ಬಣ್ಣಿಸುತ್ತ ಬಂದ ಹಾಗೆಲ್ಲ ಶ್ರೋತೃವಿನ ಅಂತರಂಗದಲ್ಲಿ ಭಾವಾವೇಗವು ಏಳುತ್ತದೆ. ಇಂತಹ ಹಾಡುಗಳಿಗೆ “ಭಾವಗೀತಗಳೆ”ಂದು ನಾಮಕರಣ ಮಾಡಲಾಗಿದೆ. ಈ ಹಾಡುಗಳಲ್ಲಿ ಒಂದೇ ಪಾತ್ರವು ತನ್ನ ಸ್ವಗತವನ್ನು ಕಲ್ಲು ಕರಗುವಂತೆ ಬಣ್ಣಿ ಸುತ್ತಿರುವುದುಂಟು.

ಕೂಸಿನ ಹಾಡು

ಜಾತ್ರೆಗೆ ಹೋದ ಒಬ್ಬ ಹೆಣ್ಣುಮಗಳು ಬಾವಿಯ ದಂಡೆಯ ಮೇಲೆ ನೀರು ಕುಡಿಯುವಾಗ ಜನರ ದಟ್ಟಣೆಯಲ್ಲಿ ಅವಳ ಕೂಸು ತಪ್ಪಿಸಿಕೊಂಡು ಬಿಟ್ಟಿದೆ. ಎಷ್ಟು ಹುಡುಕಿದರೂ ಸಿಗದಂತಾಗಲು ಅವಳು ನೆನೆನೆನೆಸಿ ಅಳುತ್ತಾಳೆ.

ಛಂದಸ್ಸು:— ತ್ರಿಪದಿಗೆ ಸಮೀಪವಾಗಿದೆ.

ಶಬ್ದಪ್ರಯೋಗಗಳು:- ಕುಂದಲ=ಕುಂದಣ. ಮಂಡಲ=ಬರಿದಾದ ಸ್ಥಳ. ಹಲ್ಲಿ=ಚಿಕ್ಕ ರೊಟ್ಟಿ. ಇಡಸೀದ=ಇಡಿಸಿರುವೆನು. ತೆಲಿ=ತಲೆ. ಹ್ವಾದ=ಹೋದೆನು.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...