Home / ಕವನ / ಭಾವಗೀತೆ / ಎತ್ತಿನ ಹಾಡು

ಎತ್ತಿನ ಹಾಡು

ಮಾಗಿಽಯ ಹೊಡಿಯಾಗ
ನನ ಕೈಲೆ ಮಾಯದಿಂದ ಮಾಡಿಸಿಕೊಂಡ್ಯಾ
ನಾ ಹೋಗಿ ಒಂದ
ತೆನಿಧಂಟ ತಿಂದರ
ಕಲ್ಲಕಲ್ಲಿಲೆ ಹೊಡದ್ಯೊ| ನಮ ಜೀವ ಹೋದಾವೊ
ಕೈಲಾಸಕ ||೧||

ನಾ ಒಂದೆ ಬಿತ್ತಿಽದಽ ನಾ ಒಂದ ಬೆಳದೀದ
ನಾ ಹೋಗಿ ಒಂದ
ಹೊಡೆಧಂಟ ತಿಂದರ
ಬಡಬಡಗಿಲೆ ಹೊಡೆದ್ಯೊ | ನಮ ಜೀವ ಹೋದಾವೊ
ಕೈಲಾಸಕ ||೨||

ಹೆತ್ತಿಕಾಳೆ ಕುಡು ಅಂದ್ರಽ
ನಿನ ಮಡದಿ ಅತ್ತ ಮಾರಿ ತಿರುವ್ಯಾಳ
ಹತ್ತಗೊಳಗ ತಿನ್ನಂದ್ರ
ಖಂಡಽಗ ತಿನ್ನುವ
ತುಂಡಿನಽ ತಂದ್ಹೊಡೊ | ಜೀವ ಹೋದಾವೊ
ಕೈಲಾಸಕ ||೩||

ಹಿಂಡಿಽಯ ಕುಡು ಅಂದಽ
ನಿನ ಮಡದಿ ಮೂಗನೆ ಮುರದಾಳ
ಖಂಡಽಗ ತಿನ್ನಂದ್ರ
ಇಖ್ಖಂಡ್ಗ ತಿನ್ನಂಥ
ತುಂಡಿನಽ ತಂದ್ಹೊಡೊ | ನಮ ಜೀವ ಹೋದಾವೊ
ಕೈಲಾಸಕ ||೪||

ಇಕ್ಕಿದರ ಹೆಂಡಿನಾದಿನಽ | ಹಚ್ಚಿದರ ಕುಳ್ಳ ನಾದಿನಽ
ದೇವಽರ ಮುಂದಿಽನ
ಪರಸಾದ ನಾ ಆದ
ಮತ್ತ್ಯಾತಕಾದೇನಽ | ನಮ ಜೀನ ಹೋದಾವ
ಕೈಲಾಸಕ ||೫||

ಸತ್ತರ ತೊಗಲಾದೆನಽ | ಮೆಟ್ಟಿದರ ಕೆರವಾದೆನಽ |
ಹೆಗಲ ಮ್ಯಾಲಾಡಂತ
ಬಾರಕೋಲ ನಾ ಆದ
ಮತ್ತ್ಯಾತಕಾದೇನ | ನಮ ಜೀವ ಹೋದಾವ
ಕೈಲಾಸಕ ||೬||
*****

ಎತ್ತಿನ ಕಡೆಯಿಂದ ಅಡವಿಯಲ್ಲಿ ಬೇಕುಬೇಕಾದಷ್ಟು ಕೆಲಸವನ್ನು ಮಾಡಿಸಿಕೊಂಡು ಅದರ ಸುಖದ ಕಡೆಗೆ ಮಾತ್ರ ಅಲಕ್ಷ್ಯವನ್ನು ಮಾಡಿದರೆ ಅದಕ್ಕೆ ಎಷ್ಟು ದುಃಖವಾಗಬೇಡ! ತಮ್ಮ ಕೆಲಸಗಳನ್ನು ಮಂದಿಯ ಕಡೆಯಿಂದ ಬೇಕಾದ ಹಾಗೆ ಮಾಡಿಸಿಕೊಂಡು, ಅವರ ಅನುವು-ಆಪತ್ತುಗಳ ಕಡೆಗೆ ನೋಡುವ ಪ್ರಸಂಗ ಬಂದಾಗ ಮೋರೆ ತಿರುವುವ ಸ್ವಭಾವವು ಬಹು ಜನರಲ್ಲಿರುತ್ತದೆ. ಅಂಥರಿಗೆ ಚುಚ್ಚುವಂತೆ ಈ ಹಾಡು ಇದೆ. ಇದಲ್ಲದೆ ಒಕ್ಕಲಿಗರ ಮನೆಯಲ್ಲಿ ದನ-ಕರುಗಳ ನೀರು-ಮೇವುಗಳ ಚಿಂತೆಯು ಮನೆಯ ಒಡತಿಗೆ ಇಲ್ಲದೆ ಹೋಗಬಾರದೆಂಬುದಕ್ಕೂ ಈ ಹಾಡು ಉಸಯುಕ್ತವಾಗಿದೆಯೆಂದು ತೋರುತ್ತದೆ.

ಛಂದಸ್ಸು:- ತ್ರಿಪದಿಯ ಜಾತಿಗೆ ಸೇರಿದ್ದು.

ಶಬ್ದ ಪ್ರಯೋಗಗಳು:— ಮಾಗಿ=ಮಾಗಿಯ ಕಾಲದ ಎಂದರೆ ಮಾಘ ಮಾಸದ ನೇಗಿಲು ಗೆಲಸ. ಮಾಯದಿಂದ=ಪ್ರೀತಿಯಿಂದ. ಧಂಟಿ=ದಂಟು. ತುಂಡೀನ=ಸೊಕ್ಕಿದವಳನ್ನು. ಹೆಂಡಿ=ಸೆಗಣಿ. ಕುಳ್ಳ=ಬರಣಿ. ಪರಸಾದ=ಧೂಪದ ಬೂದಿ (ಪ್ರಸಾದ). ಬಾರಕೋಲ=ಚಬಕ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...