Home / ಕಥೆ / ಕಾದಂಬರಿ / ರಂಗಣ್ಣನ ಕನಸಿನ ದಿನಗಳು – ೩೦

ರಂಗಣ್ಣನ ಕನಸಿನ ದಿನಗಳು – ೩೦

ತಿಮ್ಮರಾಯಪ್ಪನ ಮೆಚ್ಚಿಕೆ

ರಂಗಣ್ಣ ಬೆಂಗಳೂರನ್ನು ತಲುಪಿದ್ದಾಯಿತು; ಮನೆಯನ್ನು ಸೇರಿದ್ದಾಯಿತು. ರೈಲ್ ಸ್ಟೇಷನ್ನಿಗೆ ಗೋಪಾಲನೂ ಶಂಕರಪ್ಪ ನೂ ಬಂದಿದ್ದುದರಿಂದ ಹೆಚ್ಚು ತೊಂದರೆಯನ್ನು ಪಡದೆ, ಹೆಚ್ಚು ಗಾಡಿಗಳನ್ನು ಮಾತ್ರ ಮಾಡಿಕೊಂಡು ಮನೆಯನ್ನು ಸೇರಿದನು. ಮಾರನೆಯ ದಿನ ಶಂಕರಪ್ಪನಿಗೆ ಬಹಳವಾಗಿ ಸಮಾಧಾನ ಮಾಡಬೇಕಾಯಿತು. ಅವನು, `ಸ್ವಾಮಿ! ನನ್ನ ಜೀವಮಾನದಲ್ಲಿ ಅಂಥ ಸುಖ ಸಂತೋಷದ ದಿನಗಳನ್ನು ಮತ್ತೆ ನಾನು ಕಾಣುವುದಿಲ್ಲ. ನಾನೂ ಹಲವು ಅಪರಾಧಗಳನ್ನು ಮಾಡಿದೆ. ತಾವು ಒಳ್ಳೆಯ ಮಾತಿನಲ್ಲಿಯೇ ಬುದ್ದಿ ಹೇಳಿ ತಿದ್ದಿ ನಡೆಸಿ ಕೂ೦ಡುಬ೦ದಿರಿ. ಊಟದ ಹೊತ್ತಿನಲ್ಲಿ ಪಕ್ಕದಲ್ಲಿಯೇ ಮಣೆಹಾಕಿಸಿ ಕೂಡಿಸಿಕೊಂಡು ಸ್ನೇಹಿತನಂತೆ ಉಪಚಾರ ಮಾಡುತ್ತ ಆದರಿಸಿದಿರಿ. ನಾನು ಸಲಿಗೆಯಿಂದ ಏನಾದರೂ ಹೆಚ್ಚು ಕಡಮೆ ನಡೆದುಕೊಂಡಿದ್ದರೆ ಮನ್ನಿಸಬೇಕು’ ಎಂದು ಹೇಳಿದನು. ರಂಗಣ್ಣ ಯಥೋಚಿತವಾಗಿ ಅವನಿಗೆ ಉತ್ತರ ಹೇಳಿ ಗೋಪಾಲನ ಕೈಗೆ ಐದು ರುಪಾಯಿಗಳನ್ನು ಇನಾಮಾಗಿ ಕೊಟ್ಟನು. ಅವರಿಬ್ಬರ ರೈಲು ಖರ್ಚಿಗೆ ಬೇರೆ ಹಣವನ್ನೂ ಕೊಟ್ಟು ಕಳಿಸಿದನು.

ಭಾನುವಾರ ಬೆಳಗ್ಗೆ ಹತ್ತು ಗಂಟೆಗೆ ತಿಮ್ಮರಾಯಪ್ಪ ತನ್ನ ಹೆಂಡತಿ ಮತ್ತು ಮಕ್ಕಳೊಡನೆ ರಂಗಣ್ಣನ ಮನೆಗೆ ಬಂದನು. ಆ ದಿನ ಅವರಿಗೆ ಭೋಜನ ರಂಗಣ್ಣನ ಮನೆಯಲ್ಲೇ ಏರ್ಪಾಟಾಗಿತ್ತು. ರಂಗಣ್ಣನು ಬಹಳ ಸಂತೋಷದಿಂದಲೂ ಸಂಭ್ರಮದಿಂದಲೂ ಅವರನ್ನೆಲ್ಲ ಸ್ವಾಗತಿಸಿದನು. ರಂಗಣ್ಣನ ಹೆಂಡತಿ ತಿಮ್ಮರಾಯಪ್ಪನ ಹೆಂಡತಿಯನ್ನು ಕರೆದುಕೊಂಡು ಒಳ ಕೊಟಡಿಗೆ ಹೋದಳು. ಸ್ವಲ್ಪ ಕಾಫಿ ಸಮಾರಾಧನೆ ಆಗಿ ಆ ಬಳಿಕ ಊಟಗಳಾಗಿ ಹಾಲಿನಲ್ಲಿ ಎರಡು ಸಂಸಾರದವರೂ ಸೇರಿ ತಾಂಬೂಲವನ್ನು ಹಾಕಿಕೊಳ್ಳುತ್ತಾ ಮಾತನಾಡತೊಡಗಿದರು. ಎಲ್ಲವೂ ಜನಾರ್ದನಪುರದಲ್ಲಿ ರ೦ಗಣ್ಣ ನಡೆಸಿದ ಇನ್ಸ್ಪೆಕ್ಟರ್ ಗಿರಿಯ ಮಾತುಗಳೇ ಆಗಿದ್ದುವು. ಮಧ್ಯೆ ಮಧ್ಯೆ ತಿಮ್ಮರಾಯಪ್ಪ ತಾನು ನಡೆಸಿದ ಇನ್ಸ್ಪೆಕ್ಟರ್ ಗಿರಿಯ ಕೆಲವು ಕಥೆಗಳನ್ನೂ ಹೇಳುತ್ತಿದ್ದನು. ರಂಗಣ್ಣನು ಉಗ್ರಪ್ಪನ ವಿಚಾರವನ್ನೂ, ಅವನ ವಾದವನ್ನೂ, ಅವನಲ್ಲಾದ ಪರಿವರ್ತನೆಯನ್ನೂ , ಶಾಂತವೀರ ಸ್ವಾಮಿಯಾಗಿ ತನಗೆ ಮಾಡಿದ ಆತಿಥ್ಯವನ್ನೂ, ಕಲ್ಲೇಗೌಡ ಮತ್ತು ಕರಿಯಪ್ಪ ನವರೊಡನೆ ಆದ ಶಾಂತಿ ಸಂಧಾನವನ್ನೂ-ಎಲ್ಲವನ್ನೂ ಹೇಳಿದಾಗ ತಿಮ್ಮರಾಯಪ್ಪನು,

`ಅಯ್ಯೋ ಶಿವನೇ! ಎಂತಹ ಮಾರ್ಪಾಟು!’ ಎಂದು ಉದ್ಗಾರ ತೆಗೆದನು.

‘ನೋಡಿದೆಯಾ ತಿಮ್ಮರಾಯಪ್ಪ! ನನ್ನ ಇನ್ ಸ್ಪೆಕ್ಟರ್‌ಗಿರಿ! ಮಧ್ಯೆ ಮಧ್ಯೆ ಮನಸ್ಸಿಗೆ ಬೇಜಾರಾಗಿ ಹಾಳು ಇನ್ ಸ್ಪೆಕ್ಟರ್ ಗಿರಿ ನನಗೆ ಸಾಕಪ್ಪ! ಎಂದು ನಿನಗೆ ನಾನು ಬರೆಯುತ್ತಿದ್ದೆ, ಆದರೂ ಕೊನೆಯಲ್ಲಿ ನನಗೆ ಜನಾರ್ದನಪುರವನ್ನು ಬಿಟ್ಟು ಬರುವುದಕ್ಕೆ ಬಹಳ ವ್ಯಥೆಯಾಯಿತು. ಒಟ್ಟಿನಲ್ಲಿ ನನ್ನ ದರ್ಬಾರು ನಿನಗೆ ಮೆಚ್ಚಿಕೆಯಾಯಿತೇ?’ ಎಂದು ರಂಗಣ್ಣ ಕೇಳಿದನು.

`ಶಿವನಾಣೆ ರಂಗಣ್ಣ! ಶಿವನಾಣೆ! ನಿನಗೆ ಪ್ರಮಾಣವಾಗಿ ಹೇಳುತ್ತೇನೆ. ನಾವುಗಳೂ ಹಲವರು ಇನ್ಸ್ಪೆಕ್ಟರ್ ಗಿರಿ ಮಾಡಿದೆವು. ಹತ್ತರಲ್ಲಿ ಹನ್ನೊಂದು! ಲೆಕ್ಕವೇ ಪಕ್ಕವೇ! ನಿನ್ನ ಇನ್ ಸ್ಪೆಕ್ಟರ್ ಗಿರಿ ಒ೦ದು ಮಹಾಕಾವ್ಯ! ಚಂದ್ರಾರ್ಕವಾಗಿ ನಿಂತು ಹೋಯಿತು! ನನಗೆ ಬಹಳ ಸಂತೋಷ ರಂಗಣ್ಣ !’ ಎಂದು ಹೇಳುತ್ತಾ ತಿಮ್ಮರಾಯಪ್ಪ ರಂಗಣ್ಣನನ್ನು ಆಲಿಂಗನ ಮಾಡಿಕೊಂಡನು.

`ದೇವರೇ! ನಾನು ನೂರತೊಂಬತ್ತು ಪೌಂಡು ತೂಕ ಇಲ್ಲ! ನಾನು ಅಪ್ಪಚ್ಚಿಯಾಗಿ ಹೋಗ್ತೇನೆ! ಬಿಡು, ತಿಮ್ಮರಾಯಪ್ಪ! ಅವರಿಬ್ಬರೂ ನೋಡಿ ನಗುತ್ತಿದಾರೆ! ನನ್ನ ಇನ್ ಸ್ಪೆಕ್ಟರ್‌ಗಿರಿ ಇರಲಿ, ನಿನ್ನ ಸ್ನೇಹ ನಿಜವಾಗಿಯೂ! ಒಂದು ಮಹಾಕಾವ್ಯ! ಅದು ಆಚಂದ್ರಾರ್ಕವಾಗಿ ನಿಂತಿರುತ್ತದೆ!’ ಎಂದು ರಂಗಣ್ಣ ನಗುತ್ತಾ ಹೇಳಿದನು.
*****
ಮುಗಿಯಿತು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...